3000 ಕೋಟಿ ರೂ.ಗಳ ಪರಿಹಾರ ಪ್ರವಾಹದಿಂದ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ, ಅಲ್ಪ ಹಾನಿಯಾದ ಮನೆಗಳಿಗೆ 3 ಲಕ್ಷ ರೂ.ಗಳ ಪರಿಹಾರ, ಬೆಳೆ ನಾಶಕ್ಕೆ 3000 ಕೋಟಿ ರೂ.ಗಳ ಪರಿಹಾರ ಒಂದು ತಿಂಗಳಲ್ಲಿ ನೀಡಿದ ದಾಖಲೆ ಡಬಲ್ ಇಂಜಿನ್ ಸರ್ಕಾರ ಆದ್ದರಿಂದ ನಮ್ಮ ಕೆಲಸಗಳ ಆಧಾರದ ಮೇಲೆ ನಮ್ಮನ್ನು ಆಯ್ಕೆ ಮಾಡಿ ಎಂದು ಸಿಎಂ ಬೊಮ್ಮಾಯಿ ಕರೆ ನೀಡಿದರು.
ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ ಮಾರ್ಚ್ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ.
ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಇಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಲಾಗಿದೆ. ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆ ರಾಜ್ಯ ಸರ್ಕಾರ ಮಾಡಿದೆ.
ದಿಢೀರ್ ದೆಹಲಿ ಪ್ರವಾಸಕ್ಕೆ ತೆರಳಲು ಸೋಮಣ್ಣ ನಿರ್ಧಾರ. ಕುತೂಹಲ ಕೆರಳಿಸಿದ ಸಚಿವ ವಿ.ಸೋಮಣ್ಣ ದೆಹಲಿ ಭೇಟಿ. ಬಿಜೆಪಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡುವ ಸಾಧ್ಯತೆ. ಇತ್ತೀಚೆಗೆ ಪಕ್ಷದ ನಾಯಕರ ಬಗ್ಗೆ ಸೋಮಣ್ಣ ಅಸಮಾಧಾನ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗ್ತಾರೆ ಎಂಬ ಚರ್ಚೆ. ರಾಜಕೀಯ ಪಡಸಾಲೆಯಲ್ಲಿ ಭಾರೀ ಜೋರಾಗಿ ನಡೀತಿದೆ ಚರ್ಚೆ. BYS ಪುತ್ರನ ಬಗ್ಗೆ ಸೋಮಣ್ಣ ಪುತ್ರ ಅರುಣ್ ಅಸಮಾಧಾನ. ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಡಲು ಸೋಮಣ್ಣ ನಿರ್ಧಾರ..?
ಮುಧೋಳದಲ್ಲಿ ಕಾರಜೋಳರನ್ನ ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ಬಿಜೆಪಿಯಲ್ಲಿ ಮೋದಿ , ಅಮಿತ್ ಶಾ ಅವರಂತಹ ನಾಯಕರಿದ್ದಾರೆ ಎಂದು BJP ಯಾತ್ರೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ರು. ಮುಧೋಳದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಷಣ. ಕರ್ನಾಟಕವನ್ನ ಮಾದರಿ ರಾಜ್ಯವನ್ನಾಗಿಸೋ ಗುರಿ ಪ್ರಧಾನಿಗೆ ಇದೆ. ಹಣಬಲ, ತೋಳ್ಬಲದಿಂದ ಕಾಂಗ್ರೆಸ್ ಜಾತಿ ವಿಷ ಬೀಜ ಬಿತ್ತುತ್ತಿದೆ ಎಂದು ವಾಗ್ದಾಳಿ.
ಮಾಜಿ ಸಚಿವ ಜನಾರ್ದನ ರೆಡ್ಡಿ BJP ಸೇರ್ಪಡೆ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ, ಜನಾರ್ದನ ರೆಡ್ಡಿ ಇನ್ನೂ ತೀರ್ಮಾನ ಪ್ರಕಟ ಮಾಡಿಲ್ಲ. ಬಿಜೆಪಿ ಜತೆಗೆ ಹಳೆ ಸಂಬಂಧ ಇದೆ. ಸೂಕ್ತ ನಿರ್ಧಾರ ತಗೋತಾರೆ ಎಂದು ಸಿಎಂ ಹೇಳಿದ್ದಾರೆ.
ಕಳಸಾ ಬಂಡೂರಿ, ಮಹಾದಾಯಿ ಯೋಜನೆಗೆ ನಮ್ಮ ಪ್ರಧಾನಮಂತ್ರಿಗಳು ಈಗಾಗಲೇ ಡಿಪಿಆರ್ ಗೆ ಒಪ್ಪಿಗೆ ಕೊಟ್ಟಿದ್ದಾರೆ. ಶೀಘ್ರವೇ ಪರಿಸರ ಅನುಮತಿ ದೊರೆಯಲಿದ್ದು, ಯಲ್ಲಮ್ಮನ ಕೊಳ್ಳದಿಂದ ಬನಶಂಕರಿಯವರೆಗೂ ಮಹದಾಯಿ ನೀರು ಮಲಪ್ರಭಾ ನದಿಗೆ ಹರಿಸದೇ ನಾವು ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
CM Basavaraj Bommai : ಕಾಲ ಕಳೆದಂತೆ ಮೂಲತತ್ವವನ್ನು ಬಿಟ್ಟು, ಅದಕ್ಕೆ ಬೇರೆ ಬೇರೆ ಅರ್ಥಗಳನ್ನು ಜೋಡಿಸಿ ಧರ್ಮದ ಹೆಸರಿನಲ್ಲಿ ಯಾವುದನ್ನು ಮಾಡಬಾರದು. ಅದನ್ನು ಮಾಡಿದರೆ ಆ ಧರ್ಮ ಬಹಳ ದಿನ ಉಳಿಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಒಂದು ಎಲೆಕ್ಷನ್ ಗಿಂತ ಇನ್ನೊಂದು ಎಲೆಕ್ಷನ್ ಭಿನ್ನವಾಗಿರುವುದರಿಂದ ಎಲ್ಲರಿಗೂ ನೂರಕ್ಕೆ ನೂರು ಟಿಕೆಟ್ ಕೊಟ್ಟ ಉದಾಹರಣೆಗಳಿಲ್ಲ, ಸಮೀಕ್ಷೆ, ಶಾಸಕರ ಕಾರ್ಯವೈಖರಿ ಸೇರಿ ಎಲ್ಲಾ ಮಾನದಂಡಗಳನ್ನು ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.
ಕಾಡಂಚಿನ ಜನರು ಮತ್ತು ಅರಣ್ಯ ರಕ್ಷಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ರಿಷಬ್ ಶೆಟ್ಟಿ ಮನವಿ ಸಲ್ಲಿಸಿದ್ದಾರೆ. ಈ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಆದೇಶಿಸುವ ಭರಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಕೆಎಸ್ಡಿಎಲ್ ಟೆಂಡರ್ ಲಂಚ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಪೋಸ್ಟರ್ ಅಭಿಯಾನ ಶುರುವಾಗಿದೆ. ಬೆಂಗಳೂರಿನ ಹಲವೆಡೆ ʼಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆʼ ಎಂಬ ಪೋಸ್ಟರ್ಗಳನ್ನು ಅಂಟಿಸಿ ವ್ಯಂಗ್ಯ ಮಾಡಲಾಗಿದೆ. ಎ1 ಆರೋಪಿ ಕಂಡಲ್ಲಿ 100 ನಂಬರ್ಗೆ ಕರೆ ಮಾಡಿ ಎಂದು ಬಿಜೆಪಿ 40% ಸರ್ಕಾರ ಎಂದು ಕುಟುಕಿದ್ದಾರೆ.
ಇಂದು ಕಲ್ಪತರು ನಾಡಿನಲ್ಲಿ ಕೇಸರಿ ಚುನಾವಣೆ ಕಹಳೆ. ವಿಜಯ ಸಂಕಲ್ಪಯಾತ್ರೆ ಮೂಲಕ ʻಎಲೆಕ್ಷನ್ ಗೇಮ್ ʼ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬೃಹತ್ ಸಮಾವೇಶ. ತುಮಕೂರಿನಲ್ಲಿ ನಡೆಯಲಿರುವ ವಿಜಯ ಸಂಕಲ್ಪಯಾತ್ರೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿರುವ ಸಿಎಂ.
ಶಾಸಕನ ಪುತ್ರನ ನಿವಾಸದಲ್ಲಿ ಕೋಟಿ ಕೋಟಿ ಹಣ ಸಿಕ್ಕಿತ್ತು. ಲೋಕಾಯುಕ್ತ ಬೇಟೆಗೆ ಅಪ್ಪ ಮಗ ಸದ್ಯ ಥಂಡ ಹೊಡೆದಿದ್ರು. ಇದೇ ಕೇಸ್ನ ತನಿಖೆಯನ್ನ ಲೋಕಾಯುಕ್ತ ಚುರುಕುಗೊಳಿಸಿದೆ. ಮಗ ಜೈಲು ಪಾಲಾದ್ರೆ ಅಪ್ಪನ ಪತ್ತೆಗೆ ಬಲೆ ಬೀಸಿದ್ದಾರೆ. ಈ ಮಧ್ಯೆ ಮತ್ತಷ್ಟು ಬೆಚ್ಚಿ ಬೀಳೊ ವಿಚಾರ ತನಿಖೆಯಿಂದ ಬಹಿರಂಗಗೊಂಡಿದೆ. ಐಟಿ ಹಾಗೂ ಇಡಿ ಶಾಸಕರ ಕುಟುಂಬಸ್ಥರಿಗೆ ಶಾಕ್ ನೀಡಲು ಮುಂದಾಗಿದೆ.
ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿರುವ ರಾಜ್ಯ ಕಾಂಗ್ರೆಸ್ ನಾಯಕರು. ಬಿಜೆಪಿ ಸರ್ಕಾರದ 40% ಕಮೀಷನ್ ದಂಧೆ ಬಟಾಬಯಲು ಎಂದು ಕಿಡಿ. ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿ ನಿವಾಸ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್.
ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ 500 ರೂ. ಗಳನ್ನು ಕೊಟ್ಟು ಜನರನ್ನು ಸೇರಿಸುತ್ತಿದ್ದು, ಈಗ ಸತ್ಯ ಬಹಿರಂಗವಾಗಿದೆ. ಅದರಲ್ಲಿ ಆಶ್ಚರ್ಯವಿಲ್ಲ. ಇದು ಅವರ ಪರಂಪರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷ ಕಾಂಗ್ರೆಸ್ ವಿರುದ್ಧ ಗುಡುಗಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.