ರಾಜ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದೆ.. ಅಮಿತ್ ಶಾ, ಮೋದಿ ಬಳಿಕ ಇಂದು ಕೇಂದ್ರ ರಕ್ಷಣಾ ಸಚಿವ ಎಂಟ್ರಿ ನೀಡುತ್ತಿದ್ದಾರೆ. ಇಂದು ಬೆಳಗಾವಿಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಲಿದ್ದಾರೆ.
ಸರ್ಕಾರಿ ನೌಕರರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. ನಾವೂ ಕಾನೂನಿನ ಇತಿಮಿತಿಯಲ್ಲಿ ನಿರ್ಧಾರ ಮಾಡ್ಬೇಕು. ಮತ್ತೊಮ್ಮೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ತೀವಿ. ನೌಕರರಿಗೂ ಅಂತಿಮ ತೀರ್ಮಾನ ತಿಳಿಸಲು ಸೂಚಿಸಿದ್ದೇವೆ ಎಂದು ಸರ್ಕಾರಿ ನೌಕರರ ಜೊತೆಗಿನ ಸಭೆ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ರು.
ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ. ನೌಕರರೊಂದಿಗೆ ಸಂಧಾನ ಸಭೆ ನಡೆಸಿದ ಬೊಮ್ಮಾಯಿ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಡರಾತ್ರಿ ತುರ್ತು ಸಭೆ. ಸಚಿವರಾದ ಅಶೋಕ್, ಸುಧಾಕರ್, ಆರಗ, ಶ್ರೀರಾಮುಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಭಾಗಿ.
ಇಂದಿನಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭ ಹಿನ್ನೆಲೆ ರಥಗಳಿಗೆ ಬಿಜೆಪಿ ನಾಯಕರಿಂದ ಪೂಜೆ. ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ವಿಶೇಷ ಪೂಜೆ. ಇಂದು ಚಾಮರಾಜನಗರದಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭ. ಮಲೆ ಮಹದೇಶ್ವರ ಬೆಟ್ಟದಿಂದ ಆರಂಭಗೊಳ್ಳಲಿರುವ ಯಾತ್ರೆ.
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬೆನ್ನಲ್ಲೇ ಆಕ್ಟಿವ್ ಆಗಿರುವ ಬಿಜೆಪಿ ಇಂದಿನಿಂದ (ಮಾ.1) ವಿಜಯ ಸಂಕಲ್ಪ ಯಾತ್ರೆ ನಡೆಸಲು ಸಜ್ಜಾಗಿದೆ. ಪ್ರಮುಖ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಲಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದಿನಿಂದ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸರ್ಕಾರಿ ನೌಕರರ ಮುಷ್ಕರದಿಂದಾಗಿ ಇಂದಿನಿಂದ ಜನಸಾಮಾನ್ಯರಿಗೆ ತುರ್ತು ಸರ್ಕಾರಿ ಸೇವೆಗೂ ಅಡಚಣೆ ಉಂಟಾಗಲಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಸೇವೆ ಬಿಟ್ಟು ಎಲ್ಲವೂ ಸ್ಥಗಿತಗೊಳ್ಳಲಿದೆ.
ಇಬ್ಬರು ಮಹಿಳಾ ಅಧಿಕಾರಿಗಾಳ ಕಿತ್ತಾಟ ವಿಚಾರವಾಗಿ ಗಮನಹರಿಸಲಾಗಿದೆ. ಮುಖ್ಯಕಾರ್ಯದರ್ಶಿಯವರು ಇಬ್ಬರು ಅಧಿಕಾರಿಗಳನ್ನ ಕರೆದು ಮಾತನಾಡಿದ್ದಾರೆ. ಅವರಿಗೆ ಡೈರೆಕ್ಷನ್ ಇಷ್ಯು ಮಾಡಿದ್ದಾರೆ. ಇಬ್ಬರಿಗೂ ಶಿಸ್ತು ಕಾಪಾಡಿಕೊಳ್ಳಿ ಎಂದು ಹೇಳಿದ್ದಾರೆ. ಅಲ್ಲದೆ, ಇಬ್ಬರು ರೈಟಿಂಗ್ ನಲ್ಲಿ ಬರೆದುಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.
ಸಿಎಂ ಬೊಮ್ಮಾಯಿ ಭ್ರಷ್ಟಾಸುರ, ಅಸುರ ಎಂಬ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಹೇಳಿಕೆಗೆ ಸಿಎಂ ಬೊಮ್ಮಾಯಿ ಗರಂ. ಕಾಂಗ್ರೆಸ್ನಲ್ಲಿ ಅಸುರರ ದೊಡ್ಡ ಲಿಸ್ಟ್ ಇದೆ ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.