ಬಳ್ಳಾರಿ ವಿಜಯನಗರ ವೈದ್ಯಕೀಯ ಕಾಲೇಜಿನಲ್ಲಿ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ರಚಿಸಿರುವ ತಂಡ ನಿನ್ನೆ ಭೇಟಿ ನೀಡಿದ್ದು, ತನಿಖಾ ವರದಿಯನ್ವಯ ಕ್ರಮ ಕೈಗೊಳ್ಳಲಾಗುವುದು.
ಪುನೀತ್ ಜನ್ಮದಿನ ಇನ್ಮುಂದೆ ‘ಸ್ಫೂರ್ತಿ ದಿನ’ವಾಗಿ ಆಚರಿಸೋದಕ್ಕೆ ತೀರ್ಮಾನ ಕೈಗೊಳ್ಳಾಗಿದೆ. ಸಚಿವ ಸುನೀಲ್ ಕುಮಾರ್ ಮನವಿಯನ್ನು ಸಿಎಂ ಬೊಮ್ಮಾಯಿ ಪುರಸ್ಕರಿಸಿದ್ದಾರೆ. ಮಾರ್ಚ್ 17ಕ್ಕೆ ಸರ್ಕಾರದಿಂದಲೇ ಆಚರಣೆ ಎಂದು ಸಿಎಂ ಘೋಷಣೆ ಮಾಡಿದಾರೆ..
ಕತ್ತಿಗೆ ನನ್ನ ಜೊತೆ ಅತ್ಯಂತ ಸ್ನೇಹ ಇತ್ತು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕತ್ತಿ ನಿರಂತರ ಆಯ್ಕೆಯೇ ಅವರ ಜನಪ್ರಿಯತೆಗೆ ಸಾಕ್ಷಿ ಎಂದು ಸಿಎಂ ಕತ್ತಿ ಜತೆಗಿನ ಒಡನಾಟಗಳನ್ನು ಮೆಲುಕು ಹಾಕಿದ್ದಾರೆ.
ದೇವೇಗೌಡರ ಸಂಪುಟದಲ್ಲಿ ಕತ್ತಿಗೆ ಸ್ಥಾನ ನೀಡಿರಲ್ಲಿಲ್ಲ.. ಆಗ ನಿರಾಸೆ ಇತ್ತು ಎಂದು ಸಿಎಂ ಅಂದಿನ ದಿನದ ಬಗ್ಗೆ ಮೆಲುಕು ಹಾಕಿದ್ದಾರೆ. ಇನ್ನು ಒಂದು ಬಾರಿ ರಾಜೀನಾಮೆಗೂ ಮುಂದಾಗಿದ್ದರು ಎಂದು ಕತ್ತಿ ರಾಜಕೀಯ ಹಾದಿಯನ್ನು ನೆನೆದಿದ್ದಾರೆ.
Bangalore Flood : ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ ಎದುರಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರು ನಗರದಲ್ಲಿ ಮಳೆ ಹಾನಿ ಹಿನ್ನೆಲೆ ಇಂದು ಮಧ್ಯಾಹ್ನ ಹಾನಿಗೀಡಾದ ಪ್ರದೇಶಗಳಿಗೆ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಸುಮಾರಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ, ಸಚಿವರಿಗೆ ಆತಂಕ ಶುರುವಾಗಿದೆ. ಸಿದ್ದರಾಮಯ್ಯ ಬೆಂಬಲಿಗರಿಂದ ದಾಳಿ ನಡೆಯಬಹುದೆಂಬ ಭೀತಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯವಿರುವ ಕ್ಷೇತ್ರಗಳಿಗೆ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ.
ಕೋವಿಡ್ನಿಂದ ಗುಣಮುಖರಾಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಎಂದಿನ ಕೆಲಸ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿಡುತ್ತಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಮಂಡ್ಯದಲ್ಲಿ ಸಿಎಂಗೆ ನಟ ಯಶ್ ಸಾಥ್ ನೀಡಿದ್ದಾರೆ.
ಆಂತರಿಕ ಕಚ್ಚಾಟ ಮುಚ್ಚಿಡೋದಕ್ಕೆ ಕಾಂಗ್ರೆಸ್ ಪ್ಲ್ಯಾನ್ ಮಾಡುತ್ತಿದೆ. ಡಿಕೆಶಿ-ಸಿದ್ದರಾಮಯ್ಯ ಕುರ್ಚಿ ಕಿತ್ತಾಟ ಡೈವರ್ಟ್ಗೆ ಕಾಂಗ್ರೆಸ್ ಯತ್ನಿಸುತ್ತಿದೆ. ಬೊಮ್ಮಾಯಿ ನೇತೃತ್ವದಲ್ಲೇ ಎಲೆಕ್ಷನ್ ನಡೆಯುತ್ತೆ ಎಂದು ಕಟೀಲ್ ಹೇಳಿದ್ದಾರೆ.
ಇಂದಿನಿಂದ ಆಗಸ್ಟ್ 15ರವರೆಗೆ ಬೆಂಗಳೂರಿನ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ನಡೀತಿದೆ. ಸಿಎಂ ಬೊಮ್ಮಾಯಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಅವಕಾಶ ಇದೆ. ವಯಸ್ಕರಿಗೆ ಟಿಕೆಟ್ ದರ 75 ರೂ. ಆಗಿದ್ದು, 10ನೇ ತರಗತಿವರೆಗಿನ ಮಕ್ಕಳಿಗೆ ಉಚಿತ
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಮಳೆಯಿಂದ ಹಾನಿಗೊಳಗಾದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಪ್ರಯಾಣ ಬೆಳೆಸುವ ಮುನ್ನ ಮಾತನಾಡಿದ ಸಿಎಂ, ಪರಿಶೀಲನೆ ಬಳಿಕ ಪರಿಹಾರ ನೀಡೋದಾಗಿ ಹೇಳಿದ್ದಾರೆ.
ಸಿಎಂ ಬೊಮ್ಮಾಯಿಗೂ ಮಳೆ ಎಫೆಕ್ಟ್ ತಟ್ಟಿದೆ. ಸಿಎಂ ಬೊಮ್ಮಾಯಿ ಇಂದು ಅಂಜನಾದ್ರಿಗೆ ಭೇಟಿ ನೀಡಿದ್ದಾರೆ. ಕೊನೆ ಕ್ಷಣದಲ್ಲಿ ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಸ್ಥಳ ಬದಲಾವಣೆ ಮಾಡಲಾಗಿದೆ. ಭೀಕರ ಮಳೆ ಹಿನ್ನೆಲೆ ಲ್ಯಾಂಡಿಂಗ್ ಸ್ಥಳ ಬದಲಾಯಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.