ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಭಾನುವಾರ ಬೆಳಿಗ್ಗೆ ಟ್ರಕ್ ಮತ್ತು ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರ ಜೊತೆ ಮಾತನಾಡಿದ್ದಾರೆ.
ಪಠ್ಯ ಪರಿಷ್ಕರಣೆಗೆ ಸಾಹಿತಿಗಳು ಅಸಮಾಧಾನ ಹೊರ ಹಾಕಿದ್ದಾರೆ.. ಹಳೆಯ ಪಠ್ಯಗಳನ್ನೇ ಮುಂದುವರೆಸುವಂತೆ ಸಾಹಿತಿಗಳು ಒತ್ತಾಯಿಸುತ್ತಿದ್ದಾರೆ. ಸಿಎಂ ಬೊಮ್ಮಾಯಿಗೆ ಸಾಹಿತಿ ಹಂಪ ನಾಗರಾಜಯ್ಯ ಪತ್ರ ಬರೆದಿದ್ದಾರೆ. ಹೊಸ ಪಠ್ಯವನ್ನು ತಡೆದು ಹಿಂದಿನ ಪಠ್ಯವನ್ನೇ ಮುಂದುವರಿಸಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ 8 ವಲಯಗಳಿಗೆ ಸಚಿವರ ಕಾರ್ಯಪಡೆ ರಚನೆ ಮಾಡಲಾಗಿದೆ. 8 ವಲಯಗಳಲ್ಲಿ ಒಬ್ಬೊಬ್ಬರಿಗೆ ಒಂದೊಂದು ವಲಯದ ಜವಾಬ್ದಾರಿ ನೀಡಲಾಗಿದೆ. ಈ ಕಾರ್ಯಪಡೆಯಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಈ ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
3ನೇ ದಿನವೂ ಸಿಎಂ ಬೊಮ್ಮಾಯಿ ನಗರದಲ್ಲಿ ಮಳೆ ಹನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ನಗರದ ಸಾಯಿ, ನಾಗಪ್ಪ , ಪೈ 3 ಬಡವಾಣೆಗೆ ಭೇಟಿ ನೀಡಿ ಬಡಾವಣೆಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ.
ಪರಿಷತ್, ರಾಜ್ಯಸಭೆ ಚುನಾವಣೆಯಲ್ಲಿ ಬ್ಯೂಸಿ ಇದ್ದೇವೆ. ನಿನ್ನೆಯಷ್ಟೇ ಕೊರ್ ಕಮಿಟಿ ಸಭೆ ಆಗಿದೆ. ಸಭೆಯ ನಿರ್ಧಾರದ ಬಗ್ಗೆ ಹೈ ಕಮಾಂಡ್ ಗಮನಕ್ಕೆ ತಂದು ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್ ಬೆಂಗಳೂರು ನಗರದ ಬೆಳ್ಳಂದೂರಿನ ಆರ್ಎಂಜಿ ಇಕೋ ಸ್ಪೇಸ್ ಟೆಕ್ ಪಾರ್ಕ್ನಲ್ಲಿ ತನ್ನ ಜೀ ತಂತ್ರಜ್ಞಾನ ಮತ್ತು ಸಂಶೋಧನಾ ಕೇಂದ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಕರ್ನಾಟಕದ ಅಭಿವೃದ್ಧಿ ವೈಜ್ಞಾನಿಕವಾಗಿ ಆಗಿದೆ. ತಂತ್ರಜ್ಞಾನದ ಬದಲಾವಣೆಗಳನ್ನು ಅಳವಡಿಸಿಕೊಂಡಿದೆ. ಆದ್ದರಿಂದ ರಾಜ್ಯದ ಎಲ್ಲ ವಲಯಗಳಲ್ಲಿ ಸಹಜವಾದ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣ ಸಾಧ್ಯವಾಗಿದೆ.
2022-23 ನೇ ಸಾಲಿನ ಆಯವ್ಯಯದಲ್ಲಿ ಮಾಡಿರುವ ಘೋಷಣೆಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ನೀಡಲು ನಿರ್ಧರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಹಲವು ಪ್ರಮುಖ ಇಲಾಖೆಗಳ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.