ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಗರಿಕತೆ ಬೆಳೆಯುತ್ತಿದ್ದು, ಅವಶ್ಯಕತೆಯು ಹೆಚ್ಚಿದೆ. ಅಲ್ಲದೇ ರಸ್ತೆಗಳ ವಿಸ್ತೀರ್ಣವು ಹೆಚ್ಚಾಗುತ್ತಿರುವ ಕಾರಣ ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ಅನಿವಾರ್ಯ ಎಂದಿದ್ದಾರೆ.
ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಗರಿಕತೆ ಬೆಳೆಯುತ್ತಿದ್ದು, ಅವಶ್ಯಕತೆಯು ಹೆಚ್ಚಿದೆ. ಅಲ್ಲದೇ ರಸ್ತೆಗಳ ವಿಸ್ತೀರ್ಣವು ಹೆಚ್ಚಾಗುತ್ತಿರುವ ಕಾರಣ ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ಅನಿವಾರ್ಯ ಎಂದಿದ್ದಾರೆ.
ಹುಬ್ಬಳ್ಳಿಯ ಬೈರಿದೇವರಕೊಪ್ಪದ ದರ್ಗಾ ತೆರವು ಪ್ರದೇಶಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ ನೀಡೋ ಸಾಧ್ಯತೆ ಇದೆ. ಸಂಜೆ ಅಧಿವೇಶನದ ನಂತರ ಹುಬ್ಬಳ್ಳಿಯ ಹಜರತ್ ಸೈಯದ್ ಮೊಹ್ಮದ್ ಖಾದ್ರಿಶಾ ದರ್ಗಾ ಪ್ರದೇಶಕ್ಕೆ ಸಿಎಂ ಆಗಮಿಸೋ ಸಾಧ್ಯತೆ ಇದೆ..
ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಚಾಲನೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವ ಅಶ್ವತ್ಥ್ ನಾರಾಯಣ, ಎಲ್ಲರನ್ನೂ ಆರ್ಥಿಕರಾಗಿ ಸಬಲರಾಗಿಸಬೇಕು ಎಂದರು.
ಮಹಾರಾಷ್ಟ್ರ ಸಚಿವರು ಮಾನಸಿಕ ಸಮತೋಲನ ಕಳ್ಕೊಂಡಿದ್ದಾರೆ. ಚೀನಾವನ್ನು ಬಗ್ಗು ಬಡಿದಂತೆ ನಿಮ್ಮನ್ನು ಹಿಮ್ಮೆಟ್ಟಿಸುವ ಶಕ್ತಿ ಕನ್ನಡಿಗರಿಗಿದೆ ಎಂದು ಮಹಾರಾಷ್ಟ್ರ ಸಚಿವರ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
CM Bommai on COVID-19: ಕೊರೊನಾ ಆತಂಕ ಮತ್ತೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು. ಆರೋಗ್ಯ ಸಚಿವರು ಈ ಬಗ್ಗೆ ಕ್ರಮ ವಹಿಸಿ ಹಾಗೂ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಆಗಿರುವ ಕಹಿ ಘಟನೆ ಮತ್ತೆ ಮರುಕಳಿಸುವುದು ಬೇಡ ಎಂದು ಆಗ್ರಹಿಸಿದರು. ಇದಕ್ಕೆ ಕೆಲ ಸದಸ್ಯರು ಸಲಹೆಗಳನ್ನು ನೀಡಿ ಅವರ ಆತಂಕ ಹೊರಹಾಕಿದರು.
ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಧ್ಯಂತರ ವರದಿ ಸಲ್ಲಿಸಿದ್ದಾರೆ.
ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಕೆಲವೊಂದು ವೃತ್ತಿಯಲ್ಲಿ ಕೀಳರಿಮೆ ಇದ್ದು, ಅಂತಹ ವೃತ್ತಿಯಲ್ಲಿರುವವರನ್ನು ಭಾಜಪ ತನ್ನೊಂದಿಗೆ ಜೋಡಿಸಿಕೊಂಡು ಅವರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ವ್ಯಕ್ತಿತ್ವ ವಿಕಸನ ಮಾಡುವ ಕೆಲಸವನ್ನು ಮಾಡುತ್ತಿದೆ. ಪೊಲಿಟಿಕಲ್ ಸೈನ್ಸ್ ಜೊತೆಗೆ ಸೋಶಿಯಲ್ ಸೈನ್ಸ್ ಜೋಡಿಸುವ ಏಕೈಕ ಪಕ್ಷ ಭಾಜಪ. ಇದರಿಂದ ದೇಶವನ್ನು ಸುದೀರ್ಘ ಕಾಲದವರೆಗೆ ಸದೃಢವಾಗಿ ಬಲಿಷ್ಟವಾಗಿರಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಎಂಇಎಸ್ ಪುಂಡಾಟಿಕೆ ಬಗ್ಗೆ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಎಂಇಎಸ್ ಪುಂಡಾಟಿಕೆ ಹೇಗೆ ಹದ್ದುಬಸ್ತಿನಲ್ಲಿ ಇಡಬೇಕೆಂದು ಸರ್ಕಾರಕ್ಕೆ ಗೊತ್ತಿದೆ ಎಂದಿದ್ದಾರೆ.
ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ “ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಭಿನ್ನಾಭಿಪ್ರಾಯ ಬರುವುದಿಲ್ಲ. ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ” ಎಂದರು.
ಗಡಿ ಚರ್ಚೆ ಮಾಡಲು ಅಮಿತ್ ಶಾ ಆಹ್ವಾನ ನೀಡಿದ್ದಾರೆ. ಗೃಹ ಸಚಿವರು ಪ್ರಸ್ತಾಪ ಮಾಡಿದರೆ ನಾನು ಚರ್ಚಿಸುತ್ತೇನೆ. ಸುಪ್ರೀಂ ವರದಿ ಬಗ್ಗೆ ಗೃಹ ಸಚಿವರಿಗೆ ತಿಳಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
CM Bommai : ಬಡಜನರು ಇಲ್ಲಿಗೆ ಹೆಚ್ಚು ಬರುವುದರಿಂದ ಡಾರ್ಮಿಟರಿಗಳನ್ನು ನಿರ್ಮಿಸಬೇಕು. ಸುಮಾರು 5 ಸಾವಿರ ಜನ ಒಂದೇ ಬಾರಿಗೆ ಉಳಿದುಕೊಳ್ಳುವ ವ್ಯವಸ್ಥೆಯಾಗಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಬಿಎಂಪಿ ವತಿಯಿಂದ ಸಿ.ವಿ.ರಾಮನ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ನಿರ್ಮಿಸಿರುವ ರ್ಯಾಪಿಡ್ ರಸ್ತೆಯನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತಮ ರಸ್ತೆಗಳ ಜೊತೆಗೆ ವೆಚ್ಚವೂ ಕಡಿಮೆಯಿರುವುದು ಬಹಳ ಮುಖ್ಯ. ಈ ಕುರಿತು ವರದಿಗಳು ಬಂದ ನಂತರ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.