ನರೇಂದ್ರ ಮೋದಿಯವರು 2014ರ ನೀಡಿದ್ದ ಭರವಸೆಗಳನ್ನು ನೆನೆಸಿಕೊಳ್ಳಬೇಕು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಹಾಕುವುದಾಗಿ ಹೇಳಿದರು...ಆದರೆ ಬರಲಿಲ್ಲ.ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ ರೈತರ ಆದಾಯ ದುಪ್ಪಟ್ಟು ಆಗಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿಲ್ಲ. ಅಚ್ಚೇ ದಿನ್ ಬರಲಿಲ್ಲ ಎಂದು ವಿವರಿಸಿದರು.ಅಲ್ಪ ಸಂಖ್ಯಾತರ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಸಿಎಂ ಪ್ರಸ್ತಾಪಿಸಿದರು.
Lok Sabha Election 2024: ನರೇಂದ್ರ ಮೋದಿ ಅವರು ಮೀಸಲಾತಿ ನೀಡುತ್ತಿರುವುದು ಸಂವಿಧಾನ ಬಾಹಿರ ಎಂಬಂತೆ ಮಾತನಾಡುತ್ತಿರುವುದು ಆಶ್ಚರ್ಯವನ್ನುಂಟು ಮಾಡುತ್ತಿದೆ. ಧೃವೀಕರಣ ಮಾಡುವ ಪ್ರಯತ್ನ ಇದು. ಸುಪ್ರೀಂ ಕೋರ್ಟ್ ಆದೇಶದ ನಂತರ ಹಿಂದೆ ಬಿಜೆಪಿಯವರ ಸರ್ಕಾರವೇ ಮೀಸಲಾತಿ ಮುಂದುವರೆಸಿ ಈಗ ಹೊಸದಾಗಿ ಕೊಡಲಾಗುತ್ತಿದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳು
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ.ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತನ್ನ ಉದ್ಯಮ ಮಿತ್ರರ ಆಸ್ತಿಯ ದಿಢೀರ್ ಏರಿಕೆಯ ಹಿಂದಿನ ಸತ್ಯ ಎಲ್ಲಿ ಹೊರಗೆ ಬರುವುದೋ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಇರುವ ಶಾಶ್ವತ ಮತ್ತು ಏಕೈಕ ಪರಿಹಾರವಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಿದೆ, ಪ್ರಧಾನಿ ಮೋದಿ ಅವರು ಈ ಸವಾಲು ಸ್ವೀಕರಿಸಲು ಸಿದ್ಧ ಇದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು ಇಲ್ಲದೆ ಇದ್ದರೆ ಈಗಿನ ಬಾಯಿ ಬಡಾಯಿಯನ್ನು ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Lok Sabha Election 2024: ಓಬಿಸಿ ಮೀಸಲು ಹಕ್ಕನ್ನು ಮುಸಲ್ಮಾನರಿಗೆ ಹಂಚುತ್ತಿರುವ ನಿಮ್ಮ ನಿರ್ಧಾರದ ಬಗ್ಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪಿಸಿರುವುದು ಸಮಂಜಸವಾಗಿದೆ. ಮುಸ್ಲಿಂರಿಗೆ ಧರ್ಮಾಧಾರಿತವಾಗಿ ನೀಡುತ್ತಿದ್ದ ಮೀಸಲು ಸೌಲಭ್ಯವನ್ನು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದಾಗ ಹಿಂಬಾಗಿಲ ಮೂಲಕ ಆ ನಿರ್ಧಾರಕ್ಕೆ ಅಡ್ಡಿ ತಂದವರು ನೀವಲ್ಲವೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ., ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು.
CM Siddaramaiah: ಹಿಂದುಳಿದ ಜಾತಿ ಮತ್ತು ಎಸ್ ಸಿ / ಎಸ್ ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.
ನೇಹಾ ಹತ್ಯೆ ಬಗ್ಗೆ ಹಳ್ಳಿ ಹಳ್ಳಿಗಳಲ್ಲಿ ಪ್ರತಿ ಮನೆಯ ಮಾತಾಗಿದೆ. ಸರ್ಕಾರದ ನಡೆ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.ಮತದಾರರು ತಿರುಗಿ ಬೀಳೋ ಭಯದಿಂದ ಈಗ ಕಾಂಗ್ರೆಸ್ ಸಾಂತ್ವನದ ನಾಟಕ ವಾಡುತ್ತಿದೆ ಎಂದು ಸಚಿವ ಜೋಶಿ ಟೀಕಿಸಿದರು.
Lok Sabha Election 2024: ಸೋಮಣ್ಣನವರು ಉತ್ತಮ ಸಂಸದನಾಗಿ ಕೆಲಸ ಮಾಡುವುದಾಗಿ ಹೇಳುತ್ತಾರೆ.ಆದರೆ ಅವರು ವಸತಿ ಸಚಿವರಾಗಿದ್ದಾಗ ತುಮಕೂರಿಗೆ ಎಷ್ಟು ಮನೆಗಳನ್ನು ನೀಡಿದಿರಿ ಎಂದು ಇಲ್ಲಿನ ಜನರಿಗೆ ದಾಖಲಾತಿ ನೀಡಿ.ನಿಮ್ಮ ಅವಧಿಯಲ್ಲಿ ಒಂದೂ ಮನೆಯನ್ನು ಕಟ್ಟಲಿಲ್ಲವೇಕೆ? ಎಂಬ ನಮ್ಮ ಪ್ರಶ್ನೆಗೆ ಅವರ ಬಳಿ ಅಂದು ಉತ್ತರವಿರಲಿಲ್ಲ.ಆದ್ದರಿಂದ ವಸತಿ ಸಚಿವರಾಗಿ ವಿಫಲವಾಗಿರುವ ಸೋಮಣ್ಣನವರ ಉತ್ತಮವಾಗಿ ಕೆಲಸ ಮಾಡುತ್ತೇನೆ ಎನ್ನುವ ಮಾತು ಸಂಪೂರ್ಣ ಸುಳ್ಳು ಎಂದರು.
Hubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
ರಾಯಚೂರಿನ ಲಿಂಗಸುಗೂರಿನಲ್ಲಿ ಬಿಜೆಪಿ ಸಮಾವೇಶ
ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕ ಯತ್ನಾಳ್ ವ್ಯಂಗ್ಯ
ಕೋಮು ಘಟನೆಗಳನ್ನು ನೋಡಿ ಮತದಾನ ಮಾಡಿ
ಸಮಾವೇಶದಲ್ಲಿ ಮತದಾರರಿಗೆ ಶಾಸಕ ಯತ್ನಾಳ್ ಮನವಿ
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡೀ ದೇಶದ ರೈತರ ಸಾಲ 76 ಸಾವಿರ ಕೋಟಿ ರೂಪಾಯಿಯನ್ನು ಒಂದೇ ಸಾರಿ ಮನ್ನಾ ಮಾಡಿದರು. ಮೋದಿಯವರು 15 ಲಕ್ಷ ಕೋಟಿ ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಮಾಡಿದರು. ಹೀಗಾಗಿ ಮೋದಿಯವರು ರಾಜ್ಯದ, ದೇಶದ ಮಧ್ಯಮ ವರ್ಗ ಮತ್ತು ಬಡವರ ಕೈಗೆ ಖಾಲಿ ಚೊಂಬು ಕೊಟ್ಟರು: ಸಿಎಂ ಸಿದ್ದರಾಮಯ್ಯ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ನಮ್ಮ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುವುದಾಗಿ ಹೇಳಿದರು.
ಚಾಮರಾಜನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ರಸ್ತೆತಡೆ ನಡೆ ಪ್ರತಿಭಟನೆ ವೇಳೆ ಮಾತನಾಡಿದ ಎನ್. ಮಹೇಶ್ (N Mahesh), ನ್ಯಾಯಬದ್ಧವಾಗಿ ಮಾತನಾಡಿ, ಒಂದು ಸಮುದಾಯದ ಓಲೈಕೆ ಯಾಕೆ ಮಾಡುತ್ತೀರಿ, ಚುನಾವಣಾ ಪ್ರಚಾರ ಬಿಟ್ಟು ಪ್ರತಿಭಟನೆ ನಡೆಸಬೇಕಾಗಿರುವುದು ನಮ್ಮ ದೌರ್ಭಾಗ್ಯ ಎಂದು ಕಿಡಿಕಾರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.