ಈಗ ಗೂಳಿಹಟ್ಟಿ ಶೇಖರ್ ಅವರಿಗೆ ಆಗಿರುವ ಅವಮಾನ ಮತ್ತು ಅನ್ಯಾಯಕ್ಕೆ ಉತ್ತರಿಸುವ ಧೈರ್ಯ ತೋರುವರೇ? 'ಹಿಂದುಗಳೆಲ್ಲ ಒಂದು' ಎನ್ನುವ ಘೋಷಣೆ ಪ್ರಾಮಾಣಿಕತೆಯಿಂದ ಕೂಡಿದ್ದರೆ, ಮೊದಲು ಆರ್.ಎಸ್.ಎಸ್ ಸರಸಂಘಚಾಲಕ ಹುದ್ದೆಗೆ ಒಬ್ಬ ದಲಿತನನ್ನು ನೇಮಕ ಮಾಡಬೇಕು. ಇಲ್ಲದೆ ಇದ್ದರೆ ಈ ರೀತಿ "ಹಿಂದೂ..ಒಂದು" ಎಂದು ಸುಳ್ಳುಹೇಳಿ ಜನರನ್ನು ನಂಬಿಸಿ ಮೋಸಮಾಡುವುದನ್ನು ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬಿಜೆಪಿ ನಾಲ್ಕು ವರ್ಷ ಅಧಿಕಾರಿದಲ್ಲಿದ್ದಾಗ ಏಕೆ ಗುಂಡಿ ಮುಚ್ಚಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬ್ರಾಂಡ್ ಬೆಂಗಳೂರು ಕುರಿತಂತೆ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂಬ ಕಮಲ ಪಾಳಯದ ಆರೋಪಕ್ಕೆ ತಿರುಗೇಟು ನೀಡಿದರು.
Dasara elephant Arjuna : ಗಾಂಭೀರ್ಯಕ್ಕೆ ಹೆಸರಾಗಿ, ನಾಡದೇವತೆಯನ್ನು ಬೆನ್ನ ಮೇಲೆ ಕುರಿಸಿಕೊಂಡು ಅರಮನೆ ಸುತ್ತುತ್ತಿದ್ದ ಕನ್ನಡದ ಕಂದ ಅರ್ಜುನ ಆನೆ ಇನ್ನಿಲ್ಲ. ಬಹುಷಃ ಪ್ರಾಣಿ ಎನ್ನುವುದಕ್ಕಿಂತ ಎಲ್ಲರಿಗೂ ಅರ್ಜುನ ನೆಚ್ಚಿನ ಹೀರೋ ಆಗಿದ್ದ ಅಂದ್ರೆ ತಪ್ಪಾಗಲಾರದು. ಇದೀಗ ಮಾಡದ ತಪ್ಪಿಗೆ ಬಲಿಯಾಗಿದ್ದು, ಅನೇಕ ಅನುಮಾನಗಳಿಗೆ ಕಾರಣವಾಗಿದೆ.
ಇಂದು ಡಾ: ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಎಂದರು.
ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಸಂಜೆ 6:30ಕ್ಕೆ ಫೇರ್ ಫೀಲ್ಡ್ ಮ್ಯಾರಿಯಟ್ ಹೋಟೆಲ್ನಲ್ಲಿ ಸಭೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಸಭೆ
ಶಾಸಕಾಂಗ ಪಕ್ಷದ ಸಭೆಯಲ್ಲಿ ನಿಗಮ ಮಂಡಳಿ ನೇಮಕ
ಸಿಎಂ ಸಿದ್ದರಾಮಯ್ಯನವರು ಮೊದಲಿನಂತೆ ಖಡಕ್ ಆಗಿಲ್ಲ
ಹಿಂದೆ ಖಡಕ್ ಆಗಿ ಅಧಿಕಾರಿಗಳ ಚಳಿ ಬಿಡಿಸಿದ್ದನ್ನು ನೋಡಿದ್ದೇನೆ
ಈಗ ಯಾಕೋ ಗರ ಬಡೆದವರಂತೆ ಸಿದ್ದರಾಮಯ್ಯ ಆಗಿದ್ದಾರೆ
ಕಲಾಪದಲ್ಲಿ ಮುಖ್ಯಮಂತ್ರಿ ಕಾಲೆಳೆದ ವಿಪಕ್ಷ ನಾಯಕ ಆರ್.ಅಶೋಕ್
ಸಿದ್ದರಾಮಯ್ಯರಿಗೆ ಯಾರು ಏನು ಮಾಡಿದ್ರು ಏನು ತಗಲುವುದಿಲ್ಲ
ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಪಾಲು ಸಿಗಬೇಕು
ದೇಶದ ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆ
ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮುಸ್ಲಿಮರಿಗೆ ಅನ್ಯಾಯವಾಗಲು ನಾನು ಬಿಡಲ್ಲ
ನಿಮ್ಮನ್ನು ನಾನು ರಕ್ಷಣೆ ಮಾಡ್ತೀನಿ-ಸಿಎಂ ಅಭಯ
ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಜಮೀರ್ ಹೇಳಿಕೆಗೆ ಬಿಜೆಪಿ ರಾಜೀನಾಮೆ ಆಗ್ರಹ ವಿಚಾರ ಜಮೀರ್ ಉದ್ದೇಶಪೂರ್ವಕವಾಗಿ ಆ ಹೇಳಿಕೆ ಕೊಟ್ಟಿಲ್ಲ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ತೆಲಂಗಾಣ ಗೆದ್ದಿದ್ದೇವೆ, ಉಳಿದ ಮೂರು ಸೋತಿದ್ದೇವೆ ಜನಾಶೀರ್ವಾದ ಸ್ವೀಕರಿಸಿದ್ದೇವೆ, ಜನರ ತೀರ್ಪು ಅಂತಿಮ
ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ
ಮೊದಲು ಸಂತಾಪ ಸೂಚನೆ, ಬಳಿಕ ಪ್ರಶ್ನೋತ್ತರ ಕಲಾಪ ಆರಂಭ
R.ಅಶೋಕ್, ಬಿ.ವೈ.ವಿಜಯೇಂದ್ರ ಅವರಿಗೆ ಚೊಚ್ಚಲ ಅಧಿವೇಶನ
ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರ
ಇಂದಿನಿಂದ ಹತ್ತು ದಿನ ಕಾಲ ಕುಂದಾನಗರಿ ಬೆಳಗಾವಿಯಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದೆ. ಚಳಿಗಾಲದಲ್ಲಿ ಬಿಸಿಯೇರಿಸಲು ವಿಪಕ್ಷ ಸಿದ್ಧವಾಗಿದೆ. ವಿಪಕ್ಷಕ್ಕೆ ತಿರುಗೇಟು ನೀಡಲು ಆಡಳಿತ ಪಕ್ಷವೂ ರೆಡಿಯಾಗಿದೆ. ರಾಜಕೀಯ ನಾಯಕರ ಕಳಕಳಿ,ಆದ್ಯತೆ, ಅಗತ್ಯಗಳಿಗೆ ಅನುಗುಣವಾಗಿ ವಿಧಾನ ಮಂಡಲ ಚೆರ್ಚೆಯೂ ಕಾವೇರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.