ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ/ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು.
ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜೊತೆಗೆ ಲವ್ ಜಿಹಾದ್ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ವಿರುದ್ಧ ಆರ್. ಅಶೋಕ್ ಹೊಸ ಬಾಂಬ್. ಪೊಲೀಸ್ ಅಧಿಕಾರಗಳೇ ಮಾಹಿತಿ ನೀಡಿದ್ದಾರೆ ಎಂದ ಅಶೋಕ್. FSL ರಿಪೋರ್ಟ್ ಅವರ ಪರವಾಗಿ ಬರುವಂತೆ ಮಾಡ್ತಾರೆ. ಘಟನೆ ಹತ್ತಿರದ ವಿಡಯೋ ಕಳಿಸಿಲ್ಲ ಎಂದು ಅಶೋಕ್ ಆರೋಪ.
ಈ ಸರ್ಕಾರ ಕಳೆದ ಒಂಭತ್ತು ತಿಂಗಳಿಂದ ಅಲ್ಪಸಂಖ್ಯಾತರನ್ನು ಓಲೈಸುವ ನಿರ್ಧಾರಗಳನ್ನೇ ಮಾಡುತ್ತಿದೆ. ಮತಕ್ಕಾಗಿ ಸರ್ಕಾರದ ಆಸ್ತಿಗಳನ್ನು ಅಲ್ಪಸಂಖ್ಯಾತರ ಇಲಾಖೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಆರ್ ಅಶೋಕ್ ಆಪಾದಿಸಿದ್ದಾರೆ.
Lok Sabha Election 2024: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ಸರ್ಕಾರ ಬಲಿಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕೈಗಾರಿಕೆಗಳಿಗೆ ಕುಡಿಯುವ ನೀರು ಪೂರೈಕೆ ಪ್ರಾಥಮಿಕ ಜವಾಬ್ದಾರಿಯಾಗಿದೆ. ರಾಜ್ಯದ ಉದ್ಯಮಗಳ ಬೆಳವಣಿಗೆಯ ದೃಷ್ಟಿಯಿಂದ ಇದು ಮೂಲಭೂತ ಸೌಲಭ್ಯಗಳಲ್ಲಿ ಒಂದಾಗಿದೆ. ಇದನ್ನು ವಿವಿಧ ಇಲಾಖೆಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಪಾಟೀಲ್ ಹೇಳಿದರು.
ಇಂದು ಡಾ: ಬಿ.ಆರ್.ಅಂಬೇಡ್ಕರ್ ಅವರ 67 ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಎಂದರು.
ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ, ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎನ್ನುವ ಸೂಚನೆ ನೀಡಿದರು.
ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಯ ಅನುಷ್ಠಾನ ಸಂಬಂಧ ಮತ್ತು ಜಿಲ್ಲೆಯ ಪರಿಸ್ಥಿತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಸಭೆಯಲ್ಲಿ ಸಿಎಂ ಚರ್ಚಿಸಲಿದ್ದಾರೆ. ಜೊತೆಗೆ ಜಿಲ್ಲೆಗಳ ಮಳೆ ಸ್ಥಿತಿಗತಿ ಹಾಗೂ ಬೆಳೆ ಹಾನಿಯ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಸರ್ಕಾರಕ್ಕೆ 100ರ ಸಂಭ್ರಮ.. ರಾಜ್ಯಕ್ಕೆ ಬಂದೆರಗಿದ ಜಲಕ್ಷಾಮ. ಸಂಭ್ರಮದಲ್ಲಿ ಸರ್ಕಾರ.. ಮುಂಗಾರು ಜೂಜಾಟಕ್ಕೆ ರೈತರ ತತ್ತರ. ಅಕ್ಕಿ ಬದಲಿಗೆ ಹಣ ನೀಡಿ ಬಡವರ ಬದುಕ ಇನ್ನಷ್ಟು ದುರ್ಬರ. ಚುನಾವಣೆ ವೇಳೆ ಕೊಟ್ಟ ಮಾತು ತಪ್ಪಿತಾ ಕಾಂಗ್ರೆಸ್ ಸರ್ಕಾರ..?
ಬಿಜೆಪಿ ಬಿಡುವುದು ಮತ್ತಷ್ಟು ಖಾತರಿಗೊಳಿಸಿದ್ರಾ ಸೋಮಶೇಖರ್. ಗೃಹಲಕ್ಷ್ಮಿ ಯೋಜನೆ ಜಾರಿಗೆ S.T.ಸೋಮಶೇಖರ್ ಸಕಲ ಸಿದ್ಧತೆ. ಯಶವಂತಪುರ ಕ್ಷೇತ್ರದಲ್ಲಿ ಗೃಹ ಲಕ್ಷ್ಮಿ ಯೋಜನೆ ಫಲನಾಭವಿಗಳ ಸಭೆ.
ಸಚಿವರು-ಶಾಸಕರ ನಡುವೆ ಸಮನ್ವಯದ ಕೊರತೆ ಎದುರಾಗಿದ್ಯ..? ಜಿಲ್ಲೆಯ ತಾಲೂಕಾಧಿಕಾರಿಗಳ ಸಭೆ ನಡೆಸದ ಸಚಿವ ಬಿ.ನಾಗೇಂದ್ರ. ಕಾಂಗ್ರೆಸ್ ಸರ್ಕಾರ ರಚನೆಗೊಂಡು 100 ದಿನಗಳು ಪೂರೈಸುತ್ತಿದೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು KDP ಸಭೆ ಮಾಡಿದ ಸಚಿವ.
ಇರಿಗೇಷನ್, ಪಿಡಬ್ಲ್ಯೂಡಿ ಸೇರಿ ಯಾವ ಇಲಾಖೆಯಲ್ಲೂ ಹಣ ಕೊಟ್ಟಿಲ್ಲ. ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಂಡರೂ ತಪ್ಪೇನಿಲ್ಲ. ಅವರು ರಾಜಕಾರಣಕ್ಕೇ ಇರುವಾಗ ಬಳಸಿಕೊಳ್ಳುತ್ತಿದ್ದಾರೆ. ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ ಈಗ, ಅವರು ಇನ್ನು ನಾಲ್ಕು ವರ್ಷ ಬಿಟ್ಟೇ ಕ್ಷೇತ್ರಕ್ಕೆ ಹೋಗುವುದು. - ಸಂಸದ ಡಿ.ಕೆ. ಸುರೇಶ್
Contractors commission allegation: ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯಲು 26 ಕಂಡಿಷನ್ ಗಳನ್ನು ಹಾಕಿದೆ. ಈ 26 ಕಂಡಿಷನ್ ಪೂರೈಸಬೇಕಾದರೆ ಕನಿಷ್ಠ 26 ವರ್ಷಗಳು ಬೇಕಾಗುತ್ತದೆ- ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್. ಅಶೋಕ್
ವಿಧಾನಸೌಧದಲ್ಲಿ ಗುರುವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಗುತ್ತಿಗೆದಾರರಿಗೆ ಬಿಲ್ ಬಾಕಿ ಬಗ್ಗೆ ತನಿಖೆಗೆ ನಾಲ್ಕು ತಂಡ ರಚನೆ ಮಾಡಲಾಗಿದೆ. ಅವರ ವರದಿ ಬಳಿಕ ಬಿಲ್ ಕ್ಲಿಯರ್ ಮಾಡುತ್ತೇವೆ ಎಂದರು.
Karnataka Govt Topple: ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಹಾಗೂ ಬೆಲೆಯೇರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕನಕಪುರದವರು ಸಿಂಗಾಪುರ ಎನ್ನುತ್ತಿದ್ದಾರೆ’ ಎಂದು ಬಿಜೆಪಿ ಕುಟುಕಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಹಂಚಿಕೆಯಾದ ಜಮೀನನ್ನು ಸರ್ಕಾರದ ಅನುಮತಿಯಿಲ್ಲದೆ ಪರಭಾರೆ ಮಾಡಿದ ಸಂದರ್ಭದಲ್ಲಿ ಜಮೀನು ಮಾಲೀಕರು ಕಾಯ್ದೆಯ ಸೆಕ್ಷನ್ 5(1) ರನ್ವಯ ದೂರು ದಾಖಲಿಸಲು ಕಾಲಮಿತಿ ತೆಗೆದು ಹಾಕುವ ಕುರಿತು ಕಾಯ್ದೆ ತಿದ್ದುಪಡಿ ಮಾಡಲು ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಎರಡು ಮೂರು ದಿವಸಗಳಲ್ಲಿ ಟೆಂಡರ್ ಪ್ರಕ್ರಿಯೆ ಶುರು. ಕಂಪ್ಲೀಟ್ ಆಹಾರ ಮೆನ್ ಚೇಂಜ್ ಮಾಡಲು ನಿರ್ಧಾರ. ಪ್ರತೀ ಬಿಬಿಎಂಪಿ ವಲಯಕ್ಕೆ ಒಂದರಂತೆ ಎಂಟು ಪ್ಯಾಕೇಜ್. ಮುಂಜಾನೆ ತಿಂಡಿ ಮಧ್ಯಾಹ್ನ ಊಟ ಕೊಡಲು ವ್ಯವಸ್ಥೆ. 200 ಕ್ಯಾಂಟೀನ್ ನಡೆಸಲು ದಿನಕ್ಕೆ 31 ಲಕ್ಷ ಖರ್ಚು .
ಪ್ರತೀ ವಾರ್ಡ್ ಒಂದರಂತೆ ಇಂದಿರಾ ಕ್ಯಾಂಟೀನ್ ಇರಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.