Congress guarantee schemes: 1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ನೀಡುವುದರ ಜೊತೆಗೆ 1.50 ರೂ. ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಇದಕ್ಕೆ ಉತ್ತರಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. NPS ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
Congress guarantee schemes: ʼನಮ್ಮವರೇ ನಮಗೆ ಮೂಲ' ಎಂಬಂತೆ ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಉಂಡ ಮನೆಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಕೇಂದ್ರದಿಂದ ತೆರಿಗೆಯಲ್ಲಿ, ಅನುದಾನದಲ್ಲಿ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ, ಅಕ್ಕಿ ಕೊಡುವ ವಿಚಾರದಲ್ಲಿ, ಮಹದಾಯಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಲ್ಲಿ ಅನ್ಯಾಯವಾಗುತ್ತಿರುವುದು ಆ ಸೂರ್ಯ ಚಂದ್ರರಷ್ಟೇ ಸತ್ಯ.
ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಕೇಂದ್ರದ ಅಧಿಕಾರಿಗಳು ಬಂದು ವರದಿ ಸಲ್ಲಿಸಿದ್ದು ಕೂಡ ಹಳೆಯ ಮಾತಾಯಿತು. ಆದರೆ ಕೇಂದ್ರದ ಬಿಜೆಪಿ ಸರ್ಕಾರವು ಇಲ್ಲಿಯವರೆಗೂ ನಮಗೆ NDRF ಅಡಿಯಲ್ಲಿ ಒಂದು ಪೈಸೆಯನ್ನೂ ಕೊಟ್ಟಿಲ್ಲವೆಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
Karnataka budget session : ಇಂದು (ಫೆ.12ರಂದು ) ಆರಂಭವಾದ ಕರ್ನಾಟಕ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನಸಭೆ ಮತ್ತು ವಿಧಾನಪರಿಷತ್ ಜಂಟಿ ಅಧಿವೇಶವನ್ನು ಉದ್ದೇಶಿಸಿ ಮಾತನಾಡಿದರು.
BJP Slams Congress Government: ನಿಷೇಧಿತ ಉಗ್ರ ಸಂಘಟನೆಯ ಪಿಎಫ್ಐನ ಕಬಂಧ ಬಾಹುಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದ್ದು, ಉಗ್ರರನ್ನು ಹೆಡೆಮುರಿ ಕಟ್ಟದೆ, ಅವರಿಗೆ ಅಮಾಯಕರು, ಬ್ರದರ್ಸ್ ಎಂಬ ಪಟ್ಟ ಕಟ್ಟುತ್ತಿದೆ’ ಎಂದು ಬಿಜೆಪಿ ಕಿಡಿಕಾರಿದೆ.
ನಾನು ಅಯೋಧ್ಯೆಗೆ ಹೋಗಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಮೆ ಸ್ಥಾಪನೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ರಾಜಕೀಯ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಿಮ್ಮದೇ ತೆರಿಗೆ ಹಣ, ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು, ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ. ಗ್ಯಾರಂಟಿಗಳ ಪ್ರತಿ ಪೈಸೆಯೂ ನಿಮ್ಮ ಬದುಕಿಗೆ ಸದುಪಯೋಗವಾಗಬೇಕು. ಚುನಾವಣಾ ಪ್ರಣಾಳಿಕೆಯನ್ನು ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು, ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದುವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ವಿಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಾಜ್ಯ ಪ್ರವಾಸ ಮಾಡಿ ಜನರ ಸಮಸ್ಯೆ ಅರಿತು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಈ 5 ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದರು. ಸರ್ಕಾರ ಬಂದ ನಂತರ ಕೊಟ್ಟ ಮಾತಿನಂತೆ ಈ ಯೋಜನೆ ಜಾರಿ ಮಾಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
Congress government's Shakti scheme: ಕಾಂಗ್ರೆಸ್ ಸರ್ಕಾರದ ‘ಶಕ್ತಿ ಯೋಜನೆ’ಯ ಯಶಸ್ಸು ಬಿಜೆಪಿಯವರ ನಿದ್ದೆಗೆಡಿಸಿರುವುದರಲ್ಲಿ ಎರಡು ಮಾತಿಲ್ಲ. ‘ಶಕ್ತಿ ಯೋಜನೆ’ಗೆ ನಿಜವಾಗಲೂ ಶಕ್ತಿ ತುಂಬುತ್ತಿರುವ ಬಿಜೆಪಿಯವರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ಟೀಕಿಸಿದೆ.
ಸಿದ್ದರಾಮಯ್ಯ ಮತ್ತು ಡಿಕೆಶಿ ಇವರಿಬ್ಬರ ಕುರ್ಚಿ ಕದನದಲ್ಲಿ ಇಡೀ ರಾಜ್ಯವೇ ಬಲಿಯಾಗುತ್ತಿದೆ. ಬೆಂಗಳೂರಿನ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವುದು ಬಿಟ್ಟು ಡಿಸಿಎಂ ಡಿಕೆ ಸಾಹೇಬರು ಲ್ಯಾಂಡ್ ಮಾಫಿಯಾ, ರಿಯಲ್ ಎಸ್ಟೇಟ್ ದಂಧೆ ನಡೆಸಿ ಲೂಟಿ ಹೊಡೆಯಲು ಕನಕಪುರವನ್ನು ಕರ್ನಾಟಕದ ರಾಜಧಾನಿಯನ್ನಾಗಿ ಬೇಕಾದರೂ ಮಾಡಬಹುದೇನೋ? ಎಂದು ಬಿಜೆಪಿ ಟೀಕಿಸಿದೆ.
ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ 5 ವಿದ್ಯುತ್ ಶಕ್ತಿ ಪೂರೈಕೆ ಕಂಪನಿಗಳು ಈಗಾಗಲೇ 63,000 ಕೋಟಿ ರೂ. ಸಾಲದ ಸುಳಿಯಲ್ಲಿ ಸಿಲುಕಿವೆ. ಈ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ 85,000 ಕೋಟಿ ರೂ. ಸಾಲವನ್ನು ಪಡೆಯಲು ಈಗಾಗಲೇ ಆರ್ಥಿಕ ಇಲಾಖೆಗೆ ಸೂಚಿಸಿರುವುದನ್ನು ಗಮನಿಸಿದಾಗ ರಾಜ್ಯವು ಸಂಪೂರ್ಣವಾಗಿ ದಿವಾಳಿಯತ್ತ ಸಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ.
Congress Guarantee Schemes: ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂಬ ಆರೋಪ ಶುದ್ಧ ಸುಳ್ಳು. ಆರೋಗ್ಯ, ಶಿಕ್ಷಣ, ಕೃಷಿ ಮತ್ತು ವಸತಿ ಕ್ಷೇತ್ರದ ಯೋಜನೆಗಳು ಕಾಲಬದ್ಧವಾಗಿ ಜಾರಿಗೊಳ್ಳುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
#ATMSarkaraದ ತುಘಲಕ್ ಆಡಳಿತವು ರಾಜ್ಯವನ್ನು ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ತಳ್ಳಿದ್ದು, ಬೊಕ್ಕಸ ಬರಿದು ಮಾಡಿ ಕರ್ನಾಟಕವನ್ನು ದಿವಾಳಿ ಮಾಡಲಿರುವುದು ದುರಾದೃಷ್ಟವಶಾತ್ ನಿಶ್ಚಿತವೆಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಪುಕ್ಕಟೆ ಪ್ರಚಾರ ಪಡೆಯುವುದು, ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಜನರ ಗಮನ ಬೇರೆಡೆ ಸೆಳೆದು ಕಣ್ಕಟ್ಟು ಮಾಡುವುದು, ಮತ್ತೊಬ್ಬರ ಸಾಧನೆಯನ್ನು ತನ್ನದೆಂದು ಹೇಳಿಕೊಂಡು ತಿರುಗಾಡುವುದು, ಕೋಮುದ್ವೇಷದ ವಿಷಬೀಜ ಬಿತ್ತಿ ನೀರೆರೆಯುವುದು ಮತ್ತು ದಿಟ್ಟ ಪ್ರಶ್ನೆಗಳು ಎದುರಾದಾಗ ಜಾಗ ಖಾಲಿ ಮಾಡುವುದು. ಇವು ಸಿದ್ದರಾಮಯ್ಯರವರ ಐದು ಗ್ಯಾರಂಟಿ ಗುಣಗಳು ಎಂದು ಬಿಜೆಪಿ ಟೀಕಿಸಿದೆ.
Congress Guarantee Schemes: ಈ 3 ತಿಂಗಳಲ್ಲಿ ಸರ್ಕಾರದ ಬಗ್ಗೆ ನೂರು ರೀತಿಯ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರವೊಂದು ಆಡಳಿತಕ್ಕೆ ಬಂದು 3 ತಿಂಗಳೊಳಗೆ ರಾಜ್ಯಾದ್ಯಂತ ಭಾರೀ ಪ್ರಮಾಣದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ಕುಟುಕಿದೆ.
Congress Guarantee Schemes: ಮುಖ್ಯಮಂತ್ರಿ ಸಿದ್ದರಾಮಯ್ಯರು ಚುನಾವಣೆಗೂ ಮುನ್ನ ಕಾಕಾ ಪಾಟೀಲ್ಗೂ ಫ್ರೀ ಮಹಾದೇವಪ್ಪ ನಿಂಗೂ ಫ್ರೀ ಎಂದು ಪುಂಗಿ ಊದಿ ರಾಜ್ಯದ ಜನರ ಕಿವಿ ಮೇಲೆ ಕಂಡೀಷನ್ ಅಪ್ಲೈ ಎನ್ನುವ ಹೂವನ್ನು ಲೀಲಾಜಾಲವಾಗಿ ಇಟ್ಟರು ಎಂದು ಬಿಜೆಪಿ ಟೀಕಿಸಿದೆ.
Congress Guarantee Schemes: ಕೇಂದ್ರ ಸರ್ಕಾರ ಆಹಾರ ಪದಾರ್ಥಗಳ ಬೆಲೆ ಏರಿಕೆ & ಹಣದುಬ್ಬರ ತಡೆಯಲು ವಿಫಲವಾಗಿದೆ. ಸಾಮಾನ್ಯ ಜನರು, ಮಧ್ಯಮ ವರ್ಗದವರು & ಬಡ ಕುಟುಂಬದವರಿಗೆ ಆರ್ಥಿಕವಾಗಿ ಸಹಾಯ ಮಾಡಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗಿದೆ ಎಂದು CM ಸಿದ್ದರಾಮಯ್ಯ ತಿಳಿಸಿದರು.
ಅನ್ಯ ಪಕ್ಷಗಳ ಶಾಸಕರು ಕಾಂಗ್ರೆಸ್ ಸೇರುವ ವಿಚಾರದ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ. ನಾವು ಬೇರೆ ಪಕ್ಷಗಳ ಶಾಸಕರನ್ನು ಕರೆದುಕೊಳ್ಳುವುದಕ್ಕಿಂತ ನಮ್ಮ ಮತ ಪ್ರಮಾಣ ಹೆಚ್ಚಿಸಿಕೊಳ್ಳುವತ್ತ ಹೆಚ್ಚು ಗಮನಹರಿಸುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.