Nipah Virus Vs Corona Virus: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಪ್ರಕಾರ, ನಿಫಾ ವೈರಸ್ ಅತ್ಯಂತ ಅಪಾಯಕಾರಿ ವೈರಸ್ ಆಗಿದ್ದು, ಇದು ಪ್ರಾಣಿಗಳು ಮತ್ತು ಮಾನವರಲ್ಲಿ ಗಂಭೀರ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದು ತಿಳಿದುಬಂದಿದೆ.
ಕೊರೊನಾ ಮೂರನೇ ಅಲೆಯ ಭೀತಿಯ ನಡುವೆ ದೇಶದಲ್ಲಿನ ಪ್ರಕರಣಗಳ ಏರಿಕೆಯಿಂದಾಗಿ ರಾಜ್ಯವು ಸೆಪ್ಟೆಂಬರ್ 20 ರವರೆಗೆ ಲಾಕ್ಡೌನ್ ನ್ನು ವಿಸ್ತರಿಸಲಿದೆ ಎಂದು ಖಟ್ಟರ್ ನೇತೃತ್ವದ ಸರ್ಕಾರ ಭಾನುವಾರ ಘೋಷಿಸಿತು.ಆದಾಗ್ಯೂ, ರಾಜ್ಯವು ಕೆಲವು ಸಡಿಲಿಕೆಗಳನ್ನು ಅನುಮತಿಸುತ್ತದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರದಂದು ನಡೆದ ಸಭೆಯಲ್ಲಿ ಕೇರಳ ಗಡಿಯ 20 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಎಲ್ಲಾ ಹಳ್ಳಿಗಳಿಗೆ ಶೇ 100 ರಷ್ಟು ಲಸಿಕೆ ಹಾಕುವಂತೆ ಆಡಳಿತಕ್ಕೆ ಸೂಚಿಸಿದ್ದಾರೆ.
ಕೊರೊನಾ ಲಸಿಕೆಯನ್ನು ಉತ್ತೇಜಿಸಲು, ತಮಿಳುನಾಡಿನ ನೀಲಗಿರಿ ಜಿಲ್ಲೆಯ ಅಧಿಕಾರಿಗಳು ಕರೋನವೈರಸ್ ಲಸಿಕೆಯ ಎರಡೂ ಡೋಸ್ ತೆಗೆದುಕೊಂಡ ಜನರು ಮಾತ್ರ ಸರ್ಕಾರಿ ಮದ್ಯದಂಗಡಿಗಳಿಂದ ಮದ್ಯವನ್ನು ಖರೀದಿಸಬಹುದು ಎನ್ನುವ ನಿಯಮವನ್ನು ಜಾರಿಗೆ ತಂದಿದ್ದಾರೆ.
ಕೋವಿಡ್ -19 ಪ್ರಕರಣಗಳ ಏರಿಕೆ ಹಿನ್ನಲೆಯಲ್ಲಿ ಈಗ ಕೇರಳದ ಸರ್ಕಾರ ತೀವ್ರ ಟೀಕೆಯನ್ನು ಎದುರಿಸುತ್ತಿದೆ, ಇದೆ ಸಂದರ್ಭದಲ್ಲಿ ಈಗ ಕೇರಳ ಸಿಎಂ ಪಿನರಾಯಿ ವಿಜಯನ್ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ವಿಧಿಸುವ ಪ್ರಸ್ತಾಪವನ್ನು ತಳ್ಳಿ ಹಾಕಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ಸಂಜೆ 6 ಗಂಟೆಯವರೆಗೆ, ಭಾರತವು ಒಂದು ದಿನದಲ್ಲಿ 1.09 ಕೋಟಿ ಡೋಸ್ಗಳ ಅತ್ಯುನ್ನತ ದಾಖಲೆಯನ್ನು ಸಾಧಿಸಿದೆ ಎಂದು ಹೇಳಿದರು. ಐದು ದಿನಗಳಲ್ಲಿ ಎರಡನೇ ಬಾರಿಗೆ ಒಂದು ಕೋಟಿಗಿಂತ ಹೆಚ್ಚು ಕರೋನಾ ಡೋಸ್ಗಳನ್ನು ನೀಡಿರುವ ಈ ಸಾಧನೆಗಾಗಿ ಅವರು ಇಡೀ ದೇಶವನ್ನು ಶ್ಲಾಘಿಸಿದ್ದಾರೆ.
ಕೊರೊನಾ 3ನೇ ಅಲೆಯ ಭೀತಿಯ ನಡುವೆ ನಡೆಯುತ್ತಿರುವ 'ಜನಾಶೀರ್ವಾದ ಯಾತ್ರೆ'ಯ ರ್ಯಾಲಿಗಳು ಜನರನ್ನು ಪ್ರಾಣಾಪಾಯಕ್ಕೆ ದೂಡುತ್ತಿವೆ ಎಂದು ಉದ್ಧವ್ ಠಾಕ್ರೆ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಜ್ಞಾನಿಗಳ ಪ್ರಕಾರ, C.1.2 ಹೆಚ್ಚು ಸಾಂಕ್ರಾಮಿಕವಾಗಬಹುದು ಮತ್ತು ಇದು ಕರೋನಾ ಲಸಿಕೆಯನ್ನೂ ವಿಫಲಗೊಳಿಸಬಹುದು ಎಂದು ಹೇಳಲಾಗುತ್ತಿದೆ. ವಾಸ್ತವವಾಗಿ, ದಕ್ಷಿಣ ಆಫ್ರಿಕಾದಲ್ಲಿ ಸಿ .1.2 ರ ಜೀನೋಮ್ ಪ್ರತಿ ತಿಂಗಳು ಹೆಚ್ಚುತ್ತಿದೆ ಎಂದು ಒಂದು ಅಧ್ಯಯನವು ಕಂಡುಹಿಡಿದಿದೆ.
ಪಶ್ಚಿಮ ಬಂಗಾಳ ಸರ್ಕಾರವು ಶನಿವಾರ ಕೋವಿಡ್ -19 ನಿರ್ಬಂಧಗಳನ್ನು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರವು ರಾತ್ರಿ 11 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಹೇಳಿದೆ.
ಹಬ್ಬದ ಸೀಸನ್ ಸಮೀಪಿಸುತ್ತಿರುವಾಗ, ರೈಲ್ವೆಯಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಒಂದು ಒಳ್ಳೆಯ ಸುದ್ದಿ ಇದೆ.ಉದ್ಯೋಗಿಗಳು ಈಗಾಗಲೇ ಡಿಎ ಹೆಚ್ಚಳವನ್ನು ಆನಂದಿಸುತ್ತಿದ್ದಾರೆ ಮತ್ತು ಈಗ ದುರ್ಗಾ ಪೂಜೆಯ ಸಂದರ್ಭದಲ್ಲಿ, ರೈಲ್ವೇ ಉದ್ಯೋಗಿಗಳು ಬೋನಸ್ಗಳನ್ನು ಸ್ವೀಕರಿಸಲಿದ್ದಾರೆ.
ಭಾರತವು ಒಂದೇ ದಿನದಲ್ಲಿ 46,759 ಹೊಸ ಸೋಂಕುಗಳನ್ನು ವರದಿ ಮಾಡಿದೆ, ಇನ್ನೊಂದೆಡೆಗೆ ಕೇರಳದಲ್ಲಿಯೇ 32,801 ಪ್ರಕರಣ ದಾಖಲಾಗಿವೆ.ಒಟ್ಟು ಪ್ರಕರಣಗಳಲ್ಲಿ ಐದು ರಾಜ್ಯಗಳು 89.42% ರಷ್ಟಿದ್ದು, ಕೇರಳವು ಕಳೆದ 24 ಗಂಟೆಗಳಲ್ಲಿ 32,801 ಪ್ರಕರಣಗಳನ್ನು ಕೊಡುಗೆಯಾಗಿ ನೀಡಿದೆ, ಮಹಾರಾಷ್ಟ್ರದಲ್ಲಿ 4,654 ಪ್ರಕರಣಗಳಿವೆ.
Coronavirus In India - ಕೊರೊನಾ ವೈರಸ್ ಎರಡನೆಯ ಅಲೆ (Corona Second Wave)ಬಳಿಕ ದೀರ್ಘಕಾಲದವರೆಗೆ ಇನ್ನೇನು ಕೊರೊನಾದಿಂದ ಮುಕ್ತಿ ಸಿಕ್ಕಿತು ಎನ್ನುವಷ್ಟರಲ್ಲಿ ಇದೀಗ ಮತ್ತೊಮ್ಮೆ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಕೇವಲ ಒಂದು ದಿನದಲ್ಲಿ 40 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ನ ಮೂರನೇ ತರಂಗದ ಭಯದ ನಡುವೆ, ಕೇರಳದಲ್ಲಿ ಹೆಚ್ಚುತ್ತಿರುವ ಸೋಂಕಿನ ಒತ್ತಡವು ಆತಂಕವನ್ನು ಹೆಚ್ಚಿಸಿದೆ ಮತ್ತು ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ ಎನ್ನಲಾಗಿದೆ. ಕರೋನಾದಿಂದ ಹೆಚ್ಚು ಹಾನಿಗೊಳಗಾದ ನಾಲ್ಕು ರಾಜ್ಯಗಳಲ್ಲಿ ಮಹಾರಾಷ್ಟ್ರ ಕೂಡಾ ಒಂದು. ಮಹಾರಾಷ್ಟ್ರ, ಕರ್ನಾಟಕ , ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿ ಕೋವಿಡ್ನ ಸಕ್ರಿಯ ಪ್ರಕರಣಗಳು 10,000 ದಿಂದ 1,00,000 ವರೆಗೆ ಇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.