Corona virus Prevention: ಕೊರೊನಾ ವೈರಸ್ ವಿನಾಶವನ್ನು ಉಂಟುಮಾಡಲು ಪ್ರಾರಂಭಿಸಿದೆ. ನೀವು ಕೊರೋನಾವನ್ನು ತಡೆಯಲು ಬಯಸಿದರೆ, ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ಅವಶ್ಯಕ. ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ದೇಹವು ತ್ವರಿತವಾಗಿ ಸೋಂಕಿಗೆ ತುತ್ತಾಗುತ್ತದೆ.
ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಕೈಗೊಳ್ಳುವ ನಿಯಮಗಳ ಬಗ್ಗೆ ಸುಧಾಕರ್ ಮತ್ತು ಆರ್ ಅಶೋಕ್ ವಿವರಣೆ ನೀಡಿದರು. ಆರೋಗ್ಯ ಸಚಿವ ಸುಧಾಕರ್ ಯಾವುದೇ ತರಹದ ರಾಜಕೀಯ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ, ಎನ್ನುವುದನ್ನು ಈ ವೇಳೆ ಸ್ಪಷ್ಟಪಡಿಸಿದರು.
ಕೋವಿಡ್ ನಿಯಂತ್ರಣದ ಬಗ್ಗೆ ಓವರ್ ಆಕ್ಟಿಂಗ್ ಮಾಡಬಾರದು. ಅತಿ ಹೆಚ್ಚು ಓವರ್ ಆಕ್ಟಿಂಗ್ ಮಾಡದೆ ಸಾರ್ವಜನಿಕರೊಂದಿಗೆ ಫ್ರೆಂಡ್ಲಿ ಆಗಿ ನಿಲುವು ಕೈಗೊಳ್ಳಬೇಕು, ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
CM Bommai on Corona : ಕೋವಿಡ್ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಭೆಯಲ್ಲಿ ಸೂಚಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Corona Variant: ಚೀನಾದಲ್ಲಿ ವಿನಾಶವನ್ನು ಉಂಟುಮಾಡಿದ Omicron ನ ರೂಪಾಂತರ BF.7 ಭಾರತದಲ್ಲಿಯೂ ಭೀತಿಗೆ ಕಾರಣವಾಗಿದೆ. ದೇಶದಲ್ಲಿ ಇದುವರೆಗೆ ಈ ರೂಪಾಂತರದ ನಾಲ್ಕು ಪ್ರಕರಣಗಳು ವರದಿಯಾಗಿವೆ.
ಕೋವಿಡ್ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕೋವಿಡ್ ಬಗ್ಗೆ ಸಾರ್ವಜನಿಕರು ಭಯ ಪಡಬೇಕಿಲ್ಲ. ತಜ್ಞರ ಸಲಹೆಯನ್ನು ಪಾಲನೆ ಮಾಡಿದರೆ ಕೋವಿಡ್ ಸಂಪೂರ್ಣ ನಿಯಂತ್ರಣ ಮಾಡಬಹುದು ಎಂದು ಹೇಳಿದರು.
Coronavirus Zombie Infection: ಒಬ್ಬ ವ್ಯಕ್ತಿಯು ಕೋವಿಡ್ನಿಂದ ಸಾವನ್ನಪ್ಪಿದರೆ ಸೋಂಕು ಮೃತದೇಹದ ಮೂಲಕವೂ ಹರಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹೊಸ ಅಧ್ಯಯನದಲ್ಲಿ ಇದು ಬಹಿರಂಗವಾಗಿದೆ. ಮೃತದೇಹಗಳನ್ನು ವಿಲೇವಾರಿ ಮಾಡುವ ಜನರು ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಾರೆ. ರೋಗಶಾಸ್ತ್ರಜ್ಞರು, ವೈದ್ಯಕೀಯ ಪರೀಕ್ಷಕರು, ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಸಾವುಗಳು ಸಂಭವಿಸುವ ಆಸ್ಪತ್ರೆಗಳು ಅಥವಾ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವ ಜನರು ಅಪಾಯದಲ್ಲಿದ್ದಾರೆ.
CoronaVirus: ಜಪಾನ್, ಅಮೆರಿಕ ಮತ್ತು ಚೀನಾದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯವು ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
Precocious Puberty In Girls: ಕೊರೊನಾ ನಂತರದ ಅವಧಿಯಲ್ಲಿ ಪುಟಾಣಿಗಳಲ್ಲಿ ವಯಸ್ಸಿಗೆ ಮುಂಚೆಯೇ ಹಾರ್ಮೋನುಗಳ ಬದಲಾವಣೆ ಕಂಡು ಬರುತ್ತಿದ್ದು. ಇಂತಹ ಹಲವು ಪ್ರಕರಣಗಳು ಮುನ್ನೆಲೆಗೆ ಬಂದ ಕಾರಣ ಇದೀಗ ವೈದ್ಯರೂ ಕೂಡ ಬೆಚ್ಚಿಬಿದ್ದಿದ್ದಾರೆ.
ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ 61 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಸೋಂಕಿನ ಪ್ರಮಾಣವು 3.61 ಪ್ರತಿಶತದಷ್ಟಿದೆ. ಸೋಂಕಿನಿಂದ ಯಾರೂ ಸಾವನ್ನಪ್ಪಿಲ್ಲ. ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 1,689 ಕೋವಿಡ್ -19 ಮಾದರಿಗಳನ್ನು ಪರೀಕ್ಷಿಸಲಾಗಿದೆ.
Omicron New Variant: ಅಮೇರಿಕಾದಲ್ಲಿ ಕಂಡು ಬಂದಿರುವ ಇತ್ತೀಚಿನ ಕೊರೊನಾ ಪ್ರಕರಣಗಳಲ್ಲಿ ಒಮಿಕ್ರಾನ್ ನ ಹೊಸ ರೂಪಾಂತರಿಯಾಗಿರುವ BA.4.6 ಪ್ರಕರಣಗಳು ಶೇ.9 ಕ್ಕಿಂತ ಹೆಚ್ಚಾಗಿವೆ ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಮಾಹಿತಿ ನೀಡಿದೆ.
ದೇಶದಲ್ಲಿ ಪ್ರತಿದಿನ ಸರಾಸರಿ 15,000 ಕ್ಕೂ ಹೆಚ್ಚು ಕೊರಾನಾ ಪ್ರಕರಣಗಳು ವರದಿಯಾಗುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆಯಂದು ದೇಶದ ಎಲ್ಲಾ ರಾಜ್ಯಗಳಿಗೆ ಕೋವಿಡ್ -19 ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ತಿಳಿಸಿದೆ.
60 ವರ್ಷದ ಮೇಲಿರುವವರು ಅತೀ ಬೇಗ ಮೂರನೇ ಡೋಸ್ ಪಡೆಯಬೇಕು. ಮಾಸ್ಕ್ ಕಡ್ಡಾಯ ಮಾಡಿಕೊಳ್ಳಿ. ಕೋವಿಡ್ ಅಂದರೆ ಭಯ ಹೋಗಿದೆ. ಶೀತ ಕೆಮ್ಮು, ಮೈಕೈನೋವು ಇರುತ್ತೇ ಒಂದು ವಾರದ ನಂತ್ರ ಹೋಗುತ್ತೆ ಅಂತ ಅಸಡೆ ಇದೆ. ಲಸಿಕೆ ಲಭ್ಯ ಇದ್ರೂ ತೆಗೆದುಕೊಳ್ಳದೇ ಇರುವುದು ಮಹಾ ಅಪರಾಧವಾಗುತ್ತದೆ ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಲಸಿಕೆಯನ್ನು 17% ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ತೀವ್ರ ಬೇಸರದ ಸಂಗತಿ. ಉತ್ತಮ ಆರೋಗ್ಯಕ್ಕಾಗಿ ಅರ್ಹರೆಲ್ಲರೂ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
‘ಕೋವಿಡ್ ಸಮಯದಲ್ಲಿ ಕಾರ್ಮಿಕರ ಪ್ರಯಾಣಕ್ಕೆ ಪಕ್ಷದ ವತಿಯಿಂದ ಸಾರಿಗೆ ಇಲಾಖೆಗೆ 1 ಕೋಟಿ ರೂ. ನೀಡಲು ಮುಂದಾದ ಬಗ್ಗೆ ಲೆಕ್ಕ ಕೇಳುವ ಮುಖ್ಯಮಂತ್ರಿಗಳೇ, ಆ ಹಣದ ವಿಚಾರದಲ್ಲಿ ನಾವು ಅಕ್ರಮ ಮಾಡಿದ್ದರೆ ನಿಮಗೆ ಬೇಕಾದ ತನಿಖೆ ಮಾಡಿಸಿ, ನಾವು ಸಿದ್ಧರಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.