ಇಂದು ಬೆಳಿಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಸೋಂಕಿನಿಂದ 56 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 5,25,660 ಕ್ಕೆ ಏರಿದೆ. ಇನ್ನು ದೇಶದಲ್ಲಿ ಕೋವಿಡ್ -19 ಸಕ್ರಿಯ ರೋಗಿಗಳ ಸಂಖ್ಯೆ 1,40,760 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ 1,687 ಹೆಚ್ಚಾಗಿದ್ದು, ರೋಗಿಗಳ ಚೇತರಿಕೆಯ ರಾಷ್ಟ್ರೀಯ ದರವು 98.48 ಪ್ರತಿಶತದಷ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇದುವರೆಗೆ ದೇಶದಲ್ಲಿ ಒಟ್ಟು 4,33,62,294 ಜನರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಗುರುವಾರ ದೇಶದಲ್ಲಿ 13,313 ಕೊರೊನಾ ಪ್ರಕರಣಗಳು ವರದಿಯಾಗಿವೆ.
ಕೊರೊನಾ ವೈರಸ್ ಹರಡುವಿಕೆಯ ವೇಗವು ಹೆಚ್ಚಾಗುತ್ತಿದೆ. ಆದರೆ ಕಳೆದ 3 ದಿನಗಳಿಗೆ ಹೋಲಿಸಿದರೆ ಕೊಂಚ ಕಡಿಮೆ ಎಂದು ಹೇಳಬಹುದು. ಸದ್ಯ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,32,36,695ಕ್ಕೆ ಏರಿಕೆಯಾಗಿದೆ. ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 50,548ಕ್ಕೆ ಏರಿದೆ.
Dengue cases: ಕೋವಿಡ್ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಒಂದೂವರೆ ವರ್ಷದಲ್ಲಿ ಕೊರೊನಾ ಹೋಗತ್ತೆ ಆದರೆ, ಹೋಗುವಾಗ ವಿಶೇಷ ಕಷ್ಟ ಕೊಟ್ಟು ಹೋಗತ್ತೆ. ಭಯಂಕರ, ಜಗತ್ತಿನಾದ್ಯಂತ ಕುಡಿಯೋಕೆ ನೀರಿಲ್ಲದ ಹಾಗೆ ಆಗುತ್ತೆ, ಅಷ್ಟೊಂದು ನೋವನ್ನ ಕೊಡುತ್ತೆ ಎಂದು ಬಳ್ಳಾರಿಯಲ್ಲಿ ಕೋಡಿಹಳ್ಳಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
Shah Rukh Khan Tests Covid Positive: ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಕೋವಿಡ್ ಪಾಸಿಟಿವ್ ವರದಿ ಬಳಿಕ ಇದೀಗ ಅವರ ತಂದೆ ಮತ್ತು ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಅವರಿಗೆ ಸಹ ಕೊರೊನಾ ದೃಢಪಟ್ಟಿದೆ. ವರದಿಗಳ ಪ್ರಕಾರ, ಸೌಮ್ಯ ರೋಗಲಕ್ಷಣಗಳು ಕಂಡುಬಂದಿವೆ.
ಇನ್ನು ಕರ್ನಾಟಕದಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 156 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,884ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಾಮಾಜಿಕ ಜಾಲತಾಣ ʼಕೂʼನಲ್ಲಿ ತಿಳಿಸಿದ್ದಾರೆ.
Vaccines for lifetime : ಕೋವಿಡ್-19 ಲಸಿಕೆ ಮಾತ್ರವಲ್ಲ, ನಿಮ್ಮ ಜೀವಿತಾವಧಿಯಲ್ಲಿ ನೀವು ಕೆಲವು ಲಸಿಕೆಗಳನ್ನು ಪಡೆಯಬೇಕು, ಅದು ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಗಂಭೀರ ಕಾಯಿಲೆಗಳಿಂದ ನಿಮ್ಮನ್ನು ಸುರಕ್ಷಿತವಾಗಿರಿಸುತ್ತದೆ.
ಈ ಹಿಂದೆ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್, ಆಲ್ ರೌಂಡರ್ ಮಿಚೆಲ್ ಮಾರ್ಷ್, ಕೀಪರ್-ಬ್ಯಾಟರ್ ಟಿಮ್ ಸೀಫರ್ಟ್ ಮತ್ತು ಇತರ ಮೂವರಿಗೆ ಕೊರೊನಾ ಸೋಂಕು ತಗುಲಿತ್ತು. ಆ ಸಂದರ್ಭದಲ್ಲಿಯೂ ಆಟಗಾರರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು.
ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ. ಏಪ್ರಿಲ್ 9 ರ ನಂತರ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದನ್ನು ಗಮನಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜನರು ನಿಯಮ ಪಾಲಿಸದಿದ್ರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಅನ್ನುವ ಮೂಲಕ ಮಾಸ್ಕ್ ದಂಡ ಮತ್ತೆ ಜಾರಿಗೊಳಿಸಬೇಕಾಗುತ್ತದೆ ಎಂಬುದನ್ನು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.
Corona Fourth Wave:ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಲಿದೆ. ಆದರೆ ಸದ್ಯಕ್ಕೆ ನಿಯಮ ಉಲ್ಲಂಘನೆ ಮಾಡಿದ ಸಂದರ್ಭದಲ್ಲಿ ದಂಡ ವಿಧಿಸುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ದೆಹಲಿಯಲ್ಲಿ ಕೊರೊನಾ ನಾಲ್ಕನೇ ಅಲೆ ಹಾವಳಿ ಆರಂಭವಾಗಿದ್ದು, ಶುಕ್ರವಾರದಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಸುಮಾರು 1,042 ಹೊಸ ಕೋವಿಡ್ ಪ್ರಕರಣಗಳು ಶೇಕಡಾ 4.64 ರ ಸಕಾರಾತ್ಮಕ ದರದೊಂದಿಗೆ ದಾಖಲಾಗಿವೆ ಮತ್ತು ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.
PM Warned - 'ಬಹ್ರೂಪಿಯಾ' ಕೋವಿಡ್ -19 (Covid 19) ಮತ್ತೆ ಯಾವಾಗ ಮುಂಚೂಣಿಗೆ ಬರುತ್ತದೆ ಎಂದು ಯಾರಿಗೂ ತಿಳಿದಿಲ್ಲ ಎಂದು ಪ್ರಧಾನಿ ಮೋದಿ (PM Modi) ಹೇಳಿದರು. ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸುಮಾರು 185 ಕೋಟಿ ಡೋಸ್ ಲಸಿಕೆಗಳನ್ನು ನೀಡುವ ಕೆಲಸ ಜನರ ಬೆಂಬಲದಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.