ನ್ಯೂ ಇಯರ್ ಹೆಸರಲ್ಲಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಲಾಗಿದೆ. ಹೆಚ್ಚಾಯ್ತು ಕೊರೊನಾ ರೂಪಾಂತರಿ BF-7 ಟೆನ್ಶನ್ ಶುರುವಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಎಲ್ಲೆಡೆ ನೂಕುನುಗ್ಗಲು ಉಂಟಾಗಿದ್ದು, ಕೋವಿಡ್ ಆತಂಕ ಎದುರಾಗಿದೆ.
ಕೋವಿಡ್ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಕೋವಿಡ್ ಬಗ್ಗೆ ಸಾರ್ವಜನಿಕರು ಭಯ ಪಡಬೇಕಿಲ್ಲ. ತಜ್ಞರ ಸಲಹೆಯನ್ನು ಪಾಲನೆ ಮಾಡಿದರೆ ಕೋವಿಡ್ ಸಂಪೂರ್ಣ ನಿಯಂತ್ರಣ ಮಾಡಬಹುದು ಎಂದು ಹೇಳಿದರು.
Coronavirus Zombie Infection: ಒಬ್ಬ ವ್ಯಕ್ತಿಯು ಕೋವಿಡ್ನಿಂದ ಸಾವನ್ನಪ್ಪಿದರೆ ಸೋಂಕು ಮೃತದೇಹದ ಮೂಲಕವೂ ಹರಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹೊಸ ಅಧ್ಯಯನದಲ್ಲಿ ಇದು ಬಹಿರಂಗವಾಗಿದೆ. ಮೃತದೇಹಗಳನ್ನು ವಿಲೇವಾರಿ ಮಾಡುವ ಜನರು ಹೆಚ್ಚಾಗಿ ಸೋಂಕಿಗೆ ಒಳಗಾಗುತ್ತಾರೆ. ರೋಗಶಾಸ್ತ್ರಜ್ಞರು, ವೈದ್ಯಕೀಯ ಪರೀಕ್ಷಕರು, ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಸಾವುಗಳು ಸಂಭವಿಸುವ ಆಸ್ಪತ್ರೆಗಳು ಅಥವಾ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವ ಜನರು ಅಪಾಯದಲ್ಲಿದ್ದಾರೆ.
ಕೋವಿಡ್ ವೀಸಾ ನಿರ್ಬಂಧಗಳಿಂದಾಗಿ 23,000 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಅದರಲ್ಲೂ ಹೆಚ್ಚಾಗಿ ವೈದ್ಯಕೀಯ ಶಿಕ್ಷಣವನ್ನು ಓದುತ್ತಿದ್ದವರು, ಮನೆಯಲ್ಲಿಯೇ ಉಳಿಯುವಂತಾಗಿದೆ ಎಂದು ವರದಿಯಾಗಿದೆ. ಇದೀಗ ಚೀನಾ ತಮ್ಮ ಚೀನೀ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಿಂದ ಅನುಮತಿಗಳನ್ನು ಪಡೆದ ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನವನ್ನು ಮರು ಪ್ರಾರಂಭಿಸಲು ವೀಸಾಗಳನ್ನು ನೀಡಲು ಪ್ರಾರಂಭಿಸಿದೆ.
ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ 61 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಸೋಂಕಿನ ಪ್ರಮಾಣವು 3.61 ಪ್ರತಿಶತದಷ್ಟಿದೆ. ಸೋಂಕಿನಿಂದ ಯಾರೂ ಸಾವನ್ನಪ್ಪಿಲ್ಲ. ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 1,689 ಕೋವಿಡ್ -19 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಈ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಇಂದು ಸಚಿವ ಸಂಪುಟದ ಸಭೆಗೆ ಮುಂಚಿತವಾಗಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಯುರೋಪ್, ಚೀನಾ, ಬ್ರೆಜಿಲ್, ದಕ್ಷಿಣ ಆಫ್ರಿಕಾ, ಭಾರತ ಮತ್ತು ಇರಾನ್ನಿಂದ ಅನೇಕ ಪ್ರಯಾಣಿಕರು ಯುಎಸ್ಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಕೊರೊನಾ ಉಲ್ಬಣಗೊಳ್ಳಬಹುದು ಎಂಬ ಭೀತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಡೆಲ್ಲಿ ಕ್ಯಾಪಿಟಲ್ಸ್ನ ಆಲ್ರೌಂಡರ್ ಮಿಚೆಲ್ ಮಾರ್ಷ್ ಅವರು ಈಗ ಕನಿಷ್ಠ 10 ದಿನಗಳ ಕಾಲ ಐಪಿಎಲ್ ನಿಂದ ದೂರ ಉಳಿಯಲಿದ್ದಾರೆ ಎನ್ನಲಾಗಿದೆ.ಹೌದು, ಈಗ ಅವರಿಗೆ ಎರಡನೇ ಆರ್ಟಿಪಿಸಿಆರ್ ಪರೀಕ್ಷೆಯಲ್ಲಿ ಕೊರೊನಾ ಧೃಡಪಟ್ಟಿರುವುದರಿಂದ ಈಗ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ನಡೆಯಲಿರುವ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ.
Covid-19 Latest Update: ಈ ವಾರ ಮತ್ತೆ ಭಾರತದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ತ್ವರಿತ ಹೆಚ್ಚಳ ಕಂಡುಬಂದಿದೆ. ದೇಶದಲ್ಲಿ ಕಳೆದ ಏಳು ದಿನಗಳಲ್ಲಿ ಕೊರೊನಾ ಪ್ರಕರಣಗಳು 35% ರಷ್ಟು ಹೆಚ್ಚಾಗಿದೆ. ಹೆಚ್ಚಿನ ಪ್ರಕರಣಗಳು ದೆಹಲಿ ಮತ್ತು ಅದರ ಪಕ್ಕದ ರಾಜ್ಯಗಳಿಂದ ಬರುತ್ತಿವೆ.
ಸರ್ಕಾರವು ನಿಜವಾದ ಕೋವಿಡ್-19 ಸಾವಿನ ಅಂಕಿಅಂಶಗಳನ್ನು ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ಬೆನ್ನಲ್ಲೇ ಕೋವಿಡ್ಗೆ 40 ಲಕ್ಷ ಜನ ಸತ್ತಿದ್ದು ಸರ್ಕಾರದ ನಿರ್ಲಕ್ಷ್ಯದಿಂದಲೇ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
'ದಿ ಕಾಶ್ಮೀರ್ ಫೈಲ್ಸ್' (The Kashmiri Files) ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿರ್ಮಾಪಕ ಅಭಿಷೇಕ್ ಅರ್ಗವಾಲ್ ಟೈಗರ್ ನಾಗೇಶ್ವರ್ ರಾವ್ ಎಂಬ ಪ್ಯಾನ್ ಇಂಡಿಯಾ ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ (Chiranjeevi), ಈ ಸಿನಿಮಾಗೆ ಕ್ಲಾಪ್ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.