ವಿದುರಾಶ್ವತ್ಥದ ಕಡೆಯಿಂದ ಬರುತ್ತಿದ್ದ ಕಾಲೇಜು ವಿದ್ಯಾರ್ಥಿಗಳಿದ್ದ ಆಟೋ ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬೈಪಾಸ್ ಬಳಿ ಬೈಪಾಸ್ ರಸ್ತೆಯಿಂದ ವೇಗವಾಗಿ ಬಂದು ತಿರುವು ಪಡೆಯುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Kolar Murder Case: ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಯ್ಯದ್ ಶುಹೇಬ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tumakuru Crime News: ಮೃತ ಯುವಕನಿಗೆ ಬೆಂಗಳೂರು ಮೂಲದ ಯುವತಿಯೊಂದಿಗೆ 3 ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿತ್ತು. ಕೆಲ ದಿನಗಳ ಹಿಂದೆ ಸ್ನಾನಕ್ಕೆ ತೆರಳಿದ್ದ ವೇಳೆ ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿತ್ತು.
Vijayapura Crime News: ಶಿವರಾಜ್ ಕಟ್ಟಡದಿಂದ ಬಿದ್ದ ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತರುವ ಮೊದಲೇ ಆತ ಸಾವನಪ್ಪಿದ್ದನೆಂದು ತಿಳಿದುಬಂದಿದೆ.
ಮೊದಲ ಪ್ರಕರಣದಲ್ಲಿ ಬಿಡುಗಡೆಯಾಗಿ ಎರಡೇ ದಿನಗಳ ನಂತರ ಮತ್ತೆ ಎರಡನೇ ಪೋಕ್ಸೋ ಪ್ರಕರಣದಲ್ಲಿ ಶ್ರೀಗಳಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಇಂದು ಸಂಜೆಯೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ.
ತಹಶೀಲ್ದಾರ್ ಮಂಜುನಾಥ್ ಹಿರೇಮಠ್ ಅವರು ರಾಜು ಎಂಬುವರಿಂದ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಲೋಕಾಯುಕ್ತ ಡಿವೈಎಸ್ಪಿ ಸಲೀಂ ಪಾಷಾ ನೇತೃತ್ವದಲ್ಲಿ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ಹ್ಯಾಂಡ್ ಆಗಿ ಅಧಿಕಾರಿಯನ್ನು ಹಿಡಿಯಲಾಗಿದೆ.
ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆಂಧ್ರ ಮೂಲದ ಮಹಿಳೆಯನ್ನು ರಕ್ಷಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಸಾಂತ್ವನ ಕೇಂದ್ರಕ್ಕೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.
MBBS Student Suicide: ಸೋಮವಾರ ಮುಂಜಾನೆ 3 ಗಂಟೆ ಹೊತ್ತಿಗೆ ಎಜೆ ಆಸ್ಪತ್ರೆಯ ಮಹಿಳಾ ಹಾಸ್ಟೆಲ್ನ 6ನೇ ಮಹಡಿಯಿಂದ ಜಿಗಿದು ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತಾ ಡೆತ್ನೋಟ್ ಬರೆದಿಟ್ಟಿದ್ದಾಳೆ.
ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳಿಂದ 12.50 ಲಕ್ಷ ರೂ. ಮೌಲ್ಯದ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿಕೊಂಡಿದ್ದ ಕಾರನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Odisha Rape Case: ಈ ಸಂಬಂಧ ಸಂತ್ರಸ್ತ ಬಾಲಕಿಯ ಪೋಷಕರು ಕುಂಡೇಯಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(POCSO) ಕಾಯ್ದೆಯಡಿ ಹಲವು ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ.
US Dollars Case: ಭಾನುವಾರ ಬಾಕ್ಸ್ ನಲ್ಲಿ 2.5 ಮಿಲಿಯನ್ ಡಾಲರ್ ಹಣ ಪತ್ತೆಯಾಗಿದೆ. ಚಿಂದಿ ಆಯುವಾಗ ರೈಲು ಹಳಿ ಪಕ್ಕವೇ ಈ ಡಾಲರ್ಗಳು ಪತ್ತೆಯಾಗಿವೆ. ಡಾಲರ್ಗಳ ಕಟ್ಟು ಕಂಡು ಚಿಂದಿ ಆಯುತಿದ್ದ ವ್ಯಕ್ತಿ ಮಾಲೀಕನಿಗೆ ಮಾಹಿತಿ ನೀಡಿದ್ದಾನೆ.
Blood water Comes in Water Tap: ನಲ್ಲಿಯಲ್ಲಿ ರಕ್ತದ ನೀರು ಬರುತ್ತಿರುವ ದೃಶ್ಯವನ್ನು ಕಂಡು ಯುವಕರು ತಮ್ಮ ಮೊಬೈಲ್ನಲ್ಲಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ.
Bengaluru Murder Case: ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.