ಹೆಣ್ಣುಮಗು ಎಂಬ ಕಾರಣಕ್ಕಾಗಿ ತಂದೆಯೇ ನವಜಾತ ಶಿಶುವಿನ ಕತ್ತು ಹಿಸುಕಿ ಹತ್ಯೆಗೆ ಯತ್ನಿಸಿರುವ ಘಟನೆ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಸದ್ಯ ಮಗುವಿನ ತಂದೆಯನ್ನು ಹೆಚ್ಎಎಲ್ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಪಂಜಾಬ್ ಮೂಲದ ಸಮರ್ಜೋತ್ ಸಿಂಗ್ ಬಂಧಿತ ಆರೋಪಿ. ಈತ ಕಳೆದ 4-5 ದಿನಗಳಿಂದ ಚಿಕ್ಕಸಂದ್ರದ ಕಾಲೇಜು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ದೋಚಲು ಪ್ಲಾನ್ ಮಾಡಿದ್ದ. ರಾತ್ರಿಯಾಗುತ್ತಿದ್ದಂತೆ ಎಟಿಎಂ ಸೆಂಟರ್ ಗೆ ನುಗ್ಗಿ ಶೆಟರ್ ಕ್ಲೋಸ್ ಮಾಡಿ ಗ್ಯಾಸ್ ಕಟ್ಟರ್ ನಿಂದ ಮೆಷನ್ ಕಟ್ ಮಾಡಲು ಯತ್ನಿಸಿದ್ದ.
ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಕೆ.ಪಿ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮುಸ್ತಾನ್ ಹಾಗೂ ಕಾನೂನು ಸಂಘರ್ಷಕ್ಕೆ ಒಳಪಟ್ಟ ಮತ್ತೊಬ್ಬ ಬಾಲಕ ಬಂಧಿತ ಆರೋಪಿಯಾಗಿದ್ದಾರೆ.
Acid Attack: ಆರೋಪಿ ಮತ್ತು ನೊಂದ ಮಹಿಳೆ ಇಬ್ಬರೂ ಅಗರಬತ್ತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಸಂತ್ರಸ್ತ ಮಹಿಳೆಗೆ ಮದುವೆ ಆಗಿ 3 ಮಕ್ಕಳಿದ್ದಾರೆ. ಹೀಗಿದ್ದರೂ ಆರೋಪಿ ಮಹಿಳೆಯನ್ನು ಪ್ರೀತಿಸುತ್ತಿದ್ದ. ಜೊತೆಗೆ ಮದುವೆ ಆಗುವಂತೆ ಪೀಡಿಸುತ್ತಿದ್ದ ಎಂದು ತಿಳಿದುಬಂದಿದೆ.
ಅಪರಾಧಿ ಜಗತ್ತಿಗೆ ನಡುಕ ಹುಟ್ಟಿಸಿ, ಸಮಾಜದಲ್ಲಿ ಶಾಂತಿ, ನ್ಯಾಯ ಸುವ್ಯವಸ್ತೆ ಕಾಪಾಡಲು, ಪೊಲೀಸ್ ಸಿಬ್ಬಂದಿ ಶಪಥ ಕೈಗೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕರೆ ನೀಡಿದ್ದಾರೆ. ಇಂದು ದಾವಣಗೆರೆ ಜಿಲ್ಲಾ ಪೊಲೀಸ್ ಕಾರ್ಯ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾಯ ಅರಸಿ ಪೊಲೀಸ್ ಠಾಣೆಗೆ ಬರುವ ಮುಗ್ದ ಜನತೆಗೆ ಆಸರೆಯಾಗಿ ನಿಲ್ಲಬೇಕು ಎಂದು ತಿಳಿ ಹೇಳಿದರು.
ಈ ಹಿಂದೆ ನಾನು ಯುವತಿ ಅಕ್ಕಪಕ್ಕದ ಮನೆಯಲ್ಲೇ ಇದ್ವಿ. ಇಬ್ಬರ ಜಾತಿ ಬೇರೆ ಬೇರೆ ಇತ್ತು.18 ವರ್ಷ ಇದ್ದಾಗ ಇಬ್ಬರು ಚೆನ್ನಾಗಿ ಮಾತಾಡ್ಕೊಂಡು ಇದ್ವಿ. ಆಕೆ ನನ್ನ ಜೊತೆ ಚೆನ್ನಾಗಿ ಮಾತಾಡೋದನ್ನ ನೋಡಿ ನನ್ನ ಮೇಲೆ ಲವ್ ಇದೆ ಅನ್ಕೊಂಡೆ. ಆದ್ರೆ ಅವಳಿಗೆ ನನ್ನ ಮೇಲೆ ಲವ್ ಇರಲಿಲ್ಲ ಅನ್ನೋದು ಆಮೇಲೆ ಗೊತ್ತಾಯ್ತು- ಆ್ಯಸಿಡ್ ನಾಗ
ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಯುವತಿಯೊಬ್ಬಳು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 22 ವರ್ಷದ ಯುವಕನೊಬ್ಬ 14 ಬಾರಿ ಇರಿದಿದ್ದಾನೆ. ಈ ವ್ಯಕ್ತಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ.
ತಮಿಳುನಾಡು ಮೂಲದ 17 ವರ್ಷದ ಬಾಲಕನೇ ಇ-ಮೇಲ್ ಗಳ ಮಾಸ್ಟರ್ ಮೈಂಡ್ ಆಗಿದ್ದಾನೆ ಎನ್ನಲಾಗಿದೆ. ಹುಸಿ ಬಾಂಬ್ ಕರೆಯ ಕೆಲದಿನಗಳ ಹಿಂದೆ ಭೋಪಾಲ್ ನ ಕೆಲ ಶಾಲೆಗಳಿಗೂ ದುಷ್ಕರ್ಮಿಗಳು ಇಮೇಲ್ ಮಾಡಿ ಬಾಂಬ್ ಇಟ್ಟಿರುವುದಾಗಿ ಹುಸಿ ಸಂದೇಶ ಕಳುಹಿಸಿದ್ದರು.
ಸುವರ್ಣಮ್ಮ ಎಂಬುವರಿಗೆ 1988ತಲ್ಲಿ ಎಚ್ಎಂಟಿ ಲೇಔಟ್ ನಲ್ಲಿ ಸೈಟ್ ಹಂಚಿಕೆಯಾಗಿತ್ತು. ತದ ನಂತರ ಅವರು ತಮ್ಮ ಹೆಸರಿನಲ್ಲಿ ಕ್ರಯಪತ್ರ ಮಾಡಿಸಿಕೊಂಡಿದ್ದರು. ಕೆಲ ತಿಂಗಳ ಬಳಿ ಸೈಟ್ ಬಳಿ ತೆರಳಿದ್ದಾಗ ತನ್ನ ಹೆಸರಿನ ಮೂಲಕವೇ ಸೈಟ್ ಮಾರಾಟ ಮಾಡಿ ವಂಚಿಸಿದ್ದಾರೆ ಎಂದು ಗೊತ್ತಾಗಿತ್ತು. ಈ ಸಂಬಂಧ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಿಡ್ನ್ಯಾಪ್ ಒಳಗಾದ ಅಜಯ್ ಪಾಂಡೆ ಎಂಬಾತ ದೂರು ನೀಡಿದ ಮೇರೆಗೆ ಚೈತನ್ಯ ಶರ್ಮಾ, ವೈಭವ್ ಹಾಗೂ ಅಮಿತ್ ಎಂಬಾತರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ನಾಲ್ವರು ತಲೆಮರೆಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.