Camera In Girls Hostel Bathroom: ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿರುವದನ್ನು ಕಂಡು ಅನುಮಾನ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು ಕ್ಯಾಮರಾ ಕಂಡು ಗಾಬರಿಗೊಂಡಿದ್ದು ಕಾಮುಕನನ್ನು ಹಿಡಿದು ಥಳಿಸಿದ್ದಾರೆ.
ಕಳ್ಳತನದ ಜೊತೆಗೆ ಬೆದರಿಕೆ ಮತ್ತು ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದೆ. ಕಾಂಟ್ರಾಕ್ಟರ್ ದಯಾನಂದ್ ಕುಮಾರ್ ಎಂಬುವವರು ನೀಡಿರುವ ದೂರಿನ ಮೇಲೆ ಅಮೃತಹಳ್ಳಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಗೋಣಿಕೊಪ್ಪ ಬಳಿ ಹೆದ್ದಾರಿಯಲ್ಲಿ 09 ಡಿಸೆಂಬರ್ 2023ರ ಮಧ್ಯರಾತ್ರಿ ದರೋಡೆ ಪ್ರಕರಣ ನಡೆದಿತ್ತು. ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿ ಶಂಜಾದ್ ಎಂಬಾತನ ಕಾರ್ ತಡೆದು 61 ಲಕ್ಷದ 71 ಸಾವಿರ ರೂ.. ದರೋಡೆ ಮಾಡಲಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಂಕಿತಾ ಕುಟುಂಬಸ್ಥರು ಇಂದು ಯುವಕನ ತಂದೆ-ತಾಯಿ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮನೆಯವರ ಇಷ್ಟಕ್ಕೆ ವಿರುದ್ಧವಾಗಿ ತಮ್ಮ ಹುಡುಗಿಯನ್ನು ಮದುವೆಯಾಗಿರುವ ಯುವಕನ ವಿರುದ್ಧ ಕುಪಿತಗೊಂಡು ರೊಚ್ಚಿಗೆದ್ದ ಯುವತಿ ಕುಟುಂಬಸ್ಥರು ಸೋಮವಾರ (ಡಿ. 18) ಯುವಕನ ಮನೆಗೆ ನುಗ್ಗಿ ದಾಳಿ ನಡೆಸಿ, ಯುವಕನ ತಂದೆ ತಾಯಿಯನ್ನು ಹೊರಗೆ ಎಳೆತಂದು ನಡು ರಸ್ತೆಯಲ್ಲೇ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿರುಮಲಶೆಟ್ಟಿ ಹಳ್ಳಿಯ ಖಾಸಗಿ ಆಸ್ಪತ್ರೆಯ ಆರವರಣದಲ್ಲಿರುವ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾಗಿದ್ದು, ಅಲ್ಲಿನ ವೈದ್ಯರು ಮತ್ತು ಸಿಬ್ಬಂಧಿಗಳನ್ನು ಬಂಧಿಸಲಾಗಿದೆ.
ಹನೂರು ತಾಲೂಕಿನ ರಾಮಾಪುರದಿಂದ 6 ಕಿಮೀ ದೂರದ 50 ಅಡಿಗೂ ಅಧಿಕ ಕಂದಕದಲ್ಲಿ ಹಂತಕರು ಶವವನ್ನು ಟಾರ್ಪಾಲ್, ಬೆಡ್ ಶೀಟ್ ಹಾಕಿ ಮುಚ್ಚಿಟ್ಟಿದ್ದರು. ಬೆರಳಚ್ಚು ತಜ್ಞರು ಹಾಗೂ ಇನ್ನಿತರ ತಜ್ಞರು ಬಂದು ಸ್ಥಳ ಮಹಜರು ನಡೆಸಿ ಸಾಕ್ಷ್ಯಾಧಾರ ಕಲೆ ಹಾಕಿದ ಬಳಿಕ ಪೊಲೀಸರು ಹರಸಾಹಸ ಪಟ್ಟು ಶವವನ್ನು ಮೇಲಕ್ಕೆ ಎತ್ತಿದ್ದಾರೆ.
ಮಹಾದೇವಯ್ಯ ಅವರ ಕಾರ್ ಪತ್ತೆಯಾಗಿರುವ ಜಾಗದಲ್ಲಿ ಕಾರಿನ ಗಾಜು ಒಡೆದಿದ್ದು ರಕ್ತದ ಕಲೆಗಳು ಕೂಡ ಕಂಡು ಬಂದಿದೆ. ಚನ್ನಪಟ್ಟಣ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಬೆರಳಚ್ಚು ತಜ್ಞರು ಕಾರನ್ನು ಪರಿಶೀಲನೆ ನಡೆಸುತ್ತಿದ್ದಾರೆ.
Police vs Lawyer: ಗುರುವಾರ(ನವೆಂಬರ್ 30) ರಾತ್ರಿ 8 ಗಂಟೆ ವೇಳೆಗೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಗರ ಠಾಣೆ ಮುಂಭಾಗ ಯುವ ವಕೀಲ ಪ್ರೀತಂ ಹೆಲ್ಮೆಟ್ ಹಾಕದೆ ಬೈಕಿನಲ್ಲಿ ಹೋಗುತ್ತಿದ್ದರು. ವಕೀಲನನ್ನ ಪ್ರಶ್ನಿಸಿದ ಪೊಲೀಸರು ಹಾಗೂ ವಕೀಲನ ಮಧ್ಯೆ ಮಾತಿನ ಚಕಮಕಿ ನಡೆದಿದೆ.
Money Missing From Account: ಇದು ಮಾಹಿತಿ ತಂತ್ರಜ್ಞಾನ ಯುಗ ಕೈ ಬೆರಳಲ್ಲೇ ಜಗತ್ ನೋಡಬಹುದು. ಇದರ ಜೊತೆಗೆ ಅನೇಕ ಸಮಸ್ಯೆಗಳನ್ನ ಎದುರುಸುವಂತಾಗಿದೆ. ಇದಕ್ಕೆ ಕನ್ನಡಿ ಹಿಡಿದಂತಿದೆ ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿರುವ ಘಟನೆ.
ವಿದುರಾಶ್ವತ್ಥದ ಕಡೆಯಿಂದ ಬರುತ್ತಿದ್ದ ಕಾಲೇಜು ವಿದ್ಯಾರ್ಥಿಗಳಿದ್ದ ಆಟೋ ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬೈಪಾಸ್ ಬಳಿ ಬೈಪಾಸ್ ರಸ್ತೆಯಿಂದ ವೇಗವಾಗಿ ಬಂದು ತಿರುವು ಪಡೆಯುತ್ತಿದ್ದ ಕಂಟೈನರ್ ಲಾರಿಗೆ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಮೊದಲ ಪ್ರಕರಣದಲ್ಲಿ ಬಿಡುಗಡೆಯಾಗಿ ಎರಡೇ ದಿನಗಳ ನಂತರ ಮತ್ತೆ ಎರಡನೇ ಪೋಕ್ಸೋ ಪ್ರಕರಣದಲ್ಲಿ ಶ್ರೀಗಳಿಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಇಂದು ಸಂಜೆಯೇ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ.
ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆಂಧ್ರ ಮೂಲದ ಮಹಿಳೆಯನ್ನು ರಕ್ಷಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಸಾಂತ್ವನ ಕೇಂದ್ರಕ್ಕೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.