Kannada News: ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಎಂಬುವರೇ ದೊಡ್ಡಮನಿ ಕಾಲೊನಿಯಲ್ಲಿ ತಾವು ಬಾಡಿಗೆಗೆ ಇದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಹೀರ್ ಹಿಂದೂಸ್ಥಾನ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಬದುಕು ನೆಟ್ಟಗೆ ನಡೀತಿತ್ತು. ಒಂದಷ್ಟು ಸ್ನೇಹಿತರ ಪಟಾಲಂ ಕೂಡ ಇತ್ತು. ಹೀಗೆ ಇದ್ದುಬಿಟ್ಟಿದ್ದರೆ ಬಹುಶಃ ಈ ರೀತಿ ಕೊಲೆಯಾಗುತ್ತಿರಲಿಲ್ಲ. ಆದರೆ 17-18 ವಯಸ್ಸಿನಲ್ಲಿಯೇ ಪ್ರೀತಿಗೆ ಬಿದ್ದಿದ್ದ. ಇತ್ತ ಆಪ್ತ ಸ್ನೇಹಿತನಾಗಿದ್ದ ನ್ಯಾಮತ್ ಕೂಡ ಅದೇ ಹುಡುಗೀನ ಪ್ರೀತಿಸುತ್ತಿದ್ದ.
ಮಕ್ಕಳು ಎಂದ ಮೇಲೆ ತಪ್ಪು ಮಾಡುವುದು ಸಹಜವೇ. ಮಕ್ಕಳು ತಪ್ಪು ಮಾಡಿದಾಗ ಪೋಷಕರಾಗಲಿ, ಶಿಕ್ಷಕರಾಗಲಿ, ಹಾಸ್ಟೆಲ್ ವಾರ್ಡನ್ ಆಗಿರಲಿ ಅವರಿಗೆ ಬುದ್ದಿ ಹೇಳುವುದು, ಬುದ್ದಿ ಮಾತಿಗೆ ಬಗ್ಗದಿದ್ದಾಗ ಶಿಕ್ಷೆ ನೀಡಿಯಾದರೂ ಅವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಿಯೇ ಮಾಡುತ್ತಾರೆ.
Crime : ವಿಧಾನಸೌಧದ ಪೂರ್ವ ದ್ವಾರದ ಬಳಿ ಮಹಳೆಯೋರ್ವರ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದೆ. ತಪಾಸಣೆ ನಡೆಸುವಾಗ ಮಹಿಳೆಯ ಬ್ಯಾಗ್ ಸ್ಕ್ಯಾನಿಂಗ್ ಒಳಪಡಿಸಿದಾಗ ಬ್ಯಾಗ್ ನಲ್ಲಿ ಚಾಕು ಪತ್ತೆಯಾಗಿದೆ.
ರಾಜ್ಯದಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿದೆ. ಅದ್ರಲ್ಲೂ ಟೊಮ್ಯಾಟೊ ಬೆಲೆಯನ್ನಂತೂ ಕೇಳೋದೆ ಬೇಡ.ಸದ್ಯ ಇದನ್ನೇ ದುರ್ಬಳಕೆ ಮಾಡಿಕೊಂಡಿರುವ ಖದೀಮರು 250 ಟ್ರೈ ಟೊಮ್ಯೊಟೊ ಹೊತ್ತು ಬೆಂಗಳೂರಿಗೆ ಬರುತ್ತಿದ್ದ ವಾಹನವನ್ನು ಹೈಜಾಕ್ ಮಾಡಿದ್ದಾರೆ.
Crime News: ಹುಬ್ಬಳ್ಳಿ ಜಿಲ್ಲೆಯ ಆನಂದ ನಗರದ ಘೋಡಕೆ ಪ್ಲಾಟ್'ನ ನಿವಾಸಿಯಾಗಿದ್ದ ಮಂಜುಳಾ ಮುತ್ತಳಿ ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದು, ಇಂದು ಬೆಳಿಗ್ಗೆ ಆಕೆಯ ಗಂಡ ಭೀಮಪ್ಪ ಹಣಕಾಸಿನ ವಿಚಾರಕ್ಕೆ ಜಗಳ ತೆಗೆದಿದ್ದಾನೆ.
Accident In Mangalore: ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ
ಮೂಲತಃ ಪಶ್ಚಿಮ ಬಂಗಾಳ ಮೂಲದವನಾದ ಈತ ಕೊನೆಯ ವರ್ಷದ ಇಂಜಿನಿಯರಿಂಗ್ ಓದಿಕೊಂಡು ಖಾಸಗಿ ಕಂಪನಿಯಲ್ಲಿ ಪಾರ್ಟ್ ಟೈಮ್ ಕೆಲಸ ಮಾಡಿಕೊಂಡಿದ್ದ. ಸಾರ್ವಭೌಮ ನಗರದ ಬಾಡಿಗೆ ಮನೆಯಲ್ಲಿದ್ದ ಈತ ಒಂದು ನಾಯಿಯನ್ನು ಸಾಕಿಕೊಂಡಿದ್ದ.
ಈ ಹಿಂದೆ ಕೆ.ಆರ್.ಪುರದ ತಹಶಿಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಜಿತ್, ರಾಜಕಾಲುವೆ ಒತ್ತುವರಿದಾರರಿಗೆ ಸಹಕಾರ ನೀಡಿ ಹೈಕೋರ್ಟ್ ನಿಂದ ತಡೆಯಾಜ್ಞೆ ತರಲು ನೆರವು ನೀಡಿದ್ದರು ಎಂಬ ಆರೋಪದಡಿ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಕೆಲ ದಿನಗಳ ಹಿಂದೆ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದ್ದರಿಂದ ಮತ್ತೆ ಕೆ.ಆರ್.ಪುರ ತಹಶೀಲ್ದಾರ್ ಆಗಿ ಅಜಿತ್ ಬಂದಿದ್ದರು..
Wheeling: ಈ ದುರ್ಘಟನೆಯಲ್ಲಿ ಯುವತಿಯರ ಬೈಕ್ ನೆಲಕ್ಕೆ ಅಪ್ಪಳಿಸಿದ್ದು, ಇಬ್ಬರೂ ಯುವತಿಯರಿಗೂ ಗಂಭೀರ ಗಾಯಗಳಾಗಿವೆ. ಭೂಮಿಕಾ ಎಂಬ ಯುವತಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕೆಪಿಸಿಸಿ ಸಂವಹನ ವಿಭಾಗದ ಸಹ ಅಧ್ಯಕ್ಷ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಅಮಿತ್ ಮಾಳವಿಯ ವಿರುದ್ಧ ಐಪಿಸಿ 153 ಬಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ, 120ಬಿ ಒಳಸಂಚು, 505 ಬೆದರಿಕೆಯಡಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Crime : ಪತ್ನಿ ಅತಿಯಾಗಿ ಮೊಬೈಲ್ನಲ್ಲಿ ಮಾತ್ನಾಡುತ್ತಿದ್ದಾಳೆ. ಆಕೆಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ಪತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಚಾಕು ಇರಿದಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಆತ ವಿದ್ಯಾವಂತ.ಚೆನ್ನಾಗಿ ಓದ್ಕೊಂಡಿದ್ದ.ಒಳ್ಳೆ ಕಡೆ ಕೆಲಸನೂ ಸಿಕ್ಕಿತ್ತು.ಆದರೆ ಆತನಿಗಿದ್ದ ಆ ಚಟ ಇವತ್ತು ಜೈಲು ಸೇರುವಂತೆ ಮಾಡಿದೆ. ಮಹಿಳೆಸ್ನಾನ ಮಾಡ್ತಿರೊದನ್ನು ಇಣುಕಿ ನೋಡ್ತಾ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ತಿದ್ದವನಿಗೆ ಯುವತಿಯರು ಸರಿಯಾಗಿ ಬುದ್ಧಿ ಕಲಿಸಿದ್ದಾರೆ.
ಮಹಾದೇವಸ್ವಾಮಿ ಮೂಲತಃ ಕೃಷಿಕರಾಗಿದ್ದು ಸವಿತಾ ಟೈಲರಿಂಗ್ ಮಾಡುತ್ತಿದ್ದರಂತೆ, ಇವರಿಗೆ ಇಬ್ಬರು ಪುತ್ರಿಯರಿದ್ದು ಓರ್ವ ಪುತ್ರಿ ಕಾಲೇಜು ವ್ಯಾಸಂಗ ಮಾಡುತ್ತಿದ್ದು ತಾತನ ಮನೆಯಲ್ಲಿದ್ದಾಳೆ. ಕಿರಿಯ ಮಗಳು ಸಿಂಚನಾ 9 ನೇ ತರಗತಿ ಓದುತ್ತಿದ್ದು ಅಪ್ಪ-ಅಮ್ಮನ ಜೊತೆ ಇದ್ದಳು.
WhatsApp: ಪ್ರಸ್ತುತ ಜನಪ್ರಿಯ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ನಲ್ಲಿ ಹೊಸ ಸಂದೇಶವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅದುವೇ, 'ಪಿಂಕ್ ವಾಟ್ಸಾಪ್' ಅನ್ನು ಡೌನ್ಲೋಡ್ ಮಾಡುವ ಲಿಂಕ್. ಪಿಂಕ್ ವಾಟ್ಸಾಪ್ ಕ್ರೇಜ್ ನಿಂದಾಗಿ ನೀವೇನಾದರೂ ಈ ಲಿಂಕ್ ಡೌನ್ಲೋಡ್ ಮಾಡಿದರೆ ಸಂಕಷ್ಟಕ್ಕೆ ಸಿಲುಕಬಹುದು ಎಚ್ಚರ!
ಜೂ.11ರಂದು ಸಂಜೆ ನ್ಯೂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಶ್ರೀಕಾಂತ ದೇಸಾಯಿ ಅವರು ಶಿಕ್ಷಕ ಸಂಜೀವ ಶಿರಳ್ಳಿಗೆ ಕರೆಮಾಡಿ, ನಾಳೆಯಿಂದ ಹಳೆ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲ್ಗೆ ಹೋಗಿ ಕರ್ತವ್ಯಕ್ಕೆ ಹಾಜರಾಗಬೇಕೆಂದು ಮೌಖಿಕ ಆದೇಶ ನೀಡಿದ್ದಾರೆ. ಅದರಂತೆ ಮರುದಿನ ಶಾಲೆಗೆ ಹೋಗಿ ತಮಗೆ ಬಿಡುಗಡೆ ಪತ್ರ ನೀಡುವಂತೆ ಮುಖ್ಯ ಶಿಕ್ಷಕರಿಗೆ ಕೇಳಿದಾಗ ಅವರು, ಕಾರ್ಯದರ್ಶಿಗಳ ಬಳಿ ಕಳುಹಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮದ ನಾಗೇಶ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು ಒಳೇಟಿನಿಂದ ಚಾಮರಾಜನಗರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಂಗಳ ಗ್ರಾಮದ ಸಿದ್ದರಾಜು, ನಾಗೇಶ್, ಗೋಪಾಲ ಹಾಗೂ ತೇಜು ಎಂಬವರ ಮೇಲೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Illegal Liquor: ಅಕ್ರಮ ಮದ್ಯ ಸಾಗಾಣಿಕೆ, ಶೇಖರಣೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ವಶ ಪಡಿಸಿಕೊಳ್ಳಲಾಗಿದ್ದ ಮದ್ಯದ ದಾಸ್ತಾನನ್ನು ಪಾವಗಡ ಪಟ್ಟಣದ ಹೊರ ವಲಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ನಾಶ ಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.