ಬಿಜೆಪಿ ಆಡಳಿತ ಸಾಧನೆ ಶೂನ್ಯ. ರಾಜ್ಯದಲ್ಲಿ 40% ಕಮಿಷನ್ ಸರ್ಕಾರವಾಗಿದೆ. ಈ ಸರ್ಕಾರಕ್ಕೆ ಈ ಹೆಸರು ಕೊಟ್ಟಿದ್ದು ನಾನಲ್ಲ. ಈ ಸರ್ಕಾರದಲ್ಲಿ ಒಬ್ಬ ಸಚಿವ ಲಂಚಕ್ಕೆ ಹೋದರೆ, ಮತ್ತೊಬ್ಬ ಸಚಿವ ಮಂಚಕ್ಕೆ ಹೋದ. ಈಗ ಅವರೇ ಅವರ ಮುತ್ತುರತ್ನಗಳು. ಈ 40% ಕಮಿಷನ್ ಸರ್ಕಾರ ಕಿತ್ತೊಗೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಯಾರು ಏನಾದರೂ ಹೇಳಿಕೊಳ್ಳಲಿ. ಅಲ್ಪಸಂಖ್ಯಾತರೂ ಸೇರಿದಂತೆ ನಮ್ಮ ಪಕ್ಷಕ್ಕೆ ಎಲ್ಲಾ ಸಮುದಾಯದವರು ಬೇಕು. ರಾಜ್ಯದಲ್ಲಿ ಶೇ.99ರಷ್ಟು ಅಲ್ಪಸಂಖ್ಯಾತರು ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಯಾರೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿರುತ್ತಾರೆ ಅಂತಹವರ ಮೇಲೆ ದಾಳಿ ಆಗುತ್ತಿದೆ. ನಿನ್ನೆ ಕೂಡ ಕೆಲವರು ನನ್ನ ಮನೆಗೆ ಬಂದಿದ್ದರು. ಐಟಿ ಅಧಿಕಾರಿಗಳು ನೀನು ಭಾರತ ಜೋಡೋ ಯಾತ್ರೆಗೆ ಕೋಟಿಗಟ್ಟಲೆ ಹಣ ನೀಡಿದ್ದೀಯಾ ಎಂದು ಹೆದರಿಸುತ್ತಿದ್ದಾರೆ.
'ಡಿ.ಕೆ. ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ ಮಾಡುತ್ತಾರೆ. ತಾವು ಹಿಡಿದ ಕೆಲಸವನ್ನು ಮಾಡಿಯೇ ತೀರುವ ಗುಣ ಅವರದ್ದು. ಪಕ್ಷದ ಎಲ್ಲ ನಾಯಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಲ್ಲಿ ಅವರು ಯಶಸ್ವಿಯಾಗಿದ್ದಾರೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷರ ಕಾರ್ಯವೈಖರಿಯನ್ನು ಗುಣಗಾನ ಮಾಡಿದ್ದಾರೆ.
‘ಬಿಜೆಪಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅವರಿಗೆ ಅಭ್ಯರ್ಥಿ ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ನಾಯಕರು ಆ ಪಕ್ಷ ತೊರೆಯಲು ಕಾಯುತ್ತಿದ್ದಾರೆ. ಹೀಗಾಗಿ ತಮ್ಮ ನಾಯಕರುಗಳನ್ನು ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳು ಅವರು ಪಟ್ಟಿ ಬಿಡುಗಡೆ ಮಾಡುತ್ತಿಲ್ಲ. ಕೊನೆ ಕ್ಷಣದವರೆಗೂ ಪಕ್ಷ ತೊರೆಯಲು ಅವಕಾಶ ನೀಡಬಾರದು ಎಂದು ಕಾಯುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರು, ಅವರೇ ನನ್ನ ಅಧ್ಯಕ್ಷರು. ಖರ್ಗೆ ಅವರು ನನಗಿಂತ 20 ವರ್ಷಗಳ ಹಿರಿಯರು. ಅವರ ಹಿರಿತನ, ತ್ಯಾಗಕ್ಕೆ ನಾವು ಗೌರವ ನೀಡಬೇಕು. ಒಂದು ವೇಳೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
‘ಮೋದಿ ಅವರು ಈ ದೇಶದ ಪ್ರಧಾನಮಂತ್ರಿಗಳು. ಅವರು ಎಷ್ಟು ಬಾರಿಯಾದರೂ ರಾಜ್ಯಕ್ಕೆ ಭೇಟಿ ನೀಡಬಹುದು. ಆದರೆ ಕರ್ನಾಟಕದ ಚುನಾವಣೆ ಸಮಯದಲ್ಲಿ ಪಕ್ಷದ ಪ್ರಚಾರಕ್ಕೆ ಹೆಚ್ಚು ಆಗಮಿಸುತ್ತಿದ್ದು, ಅವರ ಪಕ್ಷ ರಾಜ್ಯದಲ್ಲಿ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
'ರಾಜ್ಯದ ನೆಲ, ಜಲ, ಭಾಷೆ ಕಾಪಾಡಿ ಜನರ ಹಿತ ಕಾಯುವ ಪ್ರತಿಜ್ಞೆ ಮೂಲಕ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಾನ ಮರ್ಯಾದೆ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಇರುವ ಆದಾಯ ಗಳಿಕೆ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಎಪ್ರಿಲ್ ೧೩ ರವವರೆಗೆ ವಿಸ್ತರಿಸಿದೆ.
ಕಾಂಗ್ರೆಸ್ ಎರಡನೇ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಕೆಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇನ್ನೂ ಒಮ್ಮತ ಮೂಡಿಲ್ಲ. ಈ ನಡುವೆ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
‘ರಾಜ್ಯದ ಜನ ಈ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರ ನಿರ್ಮೂಲನೆಗೆ, ಜನರ ನೋವಿಗೆ ಪರಿಹಾರಕ್ಕೆ, ಜನರ ಜೇಬು ಪಿಕ್ ಪಾಕೆಟ್ ಆಗುತ್ತಿರುವುದನ್ನು ನಿಲ್ಲಿಸಲು ಜನ ಮೇ 10ರಂದು ಮತ ಚಲಾಯಿಸಲಿದ್ದಾರೆ’ ಎಂದು ತಿಳಿಸಿದರು.
ರಾಜ್ಯದ ಎಲ್ಲರಿಗೂ ಒಳ್ಳೆಯದಾಗಲಿ ಎಂದು ನಾನು ಹಾಗೂ ನನ್ನ ಧರ್ಮಪತ್ನಿ ಇಲ್ಲಿಗೆ ಬಂದು ಪೂಜೆ ಸಲ್ಲಿಸಿದ್ದೇವೆ. ಭಕ್ತ ಹಾಗೂ ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳ ದೇವಾಲಯ. ಇಲ್ಲಿ ನಾನು ಕೇಳಬೇಕಾದನ್ನು ಕೇಳಿದ್ದೇನೆ, ದೇವರು ಏನು ವರ ನೀಡುತ್ತಾನೋ ಕಾಯ್ದು ನೋಡಬೇಕು.
ಕಾಂಗ್ರೆಸ್ ಪಕ್ಷದಲ್ಲಿ ಖರ್ಗೆ, ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡುವುದಾಗಿ ರಾಹುಲ್ ಗಾಂಧಿ ಅವರು ಹೇಳಿದ್ದು, ನಾನು ಅದಕ್ಕೆ ಬದ್ಧವಾಗಿದ್ದೇನೆ. ನಿಮ್ಮ ಬದುಕು ಹಸನಾಗಬೇಕು, ಎಲ್ಲ ವರ್ಗಕ್ಕೆ ಸಾಮಾಜಿಕ ನ್ಯಾಯ ಸಿಗಬೇಕು.
ಈ ಮಂಡ್ಯ ಜಿಲ್ಲೆ ಹಾಗೂ ಕ್ಷೇತ್ರದ ಇತಿಹಾಸವನ್ನು ನಾವು ಸ್ಮರಿಸಬೇಕು. ಸ್ವಾತಂತ್ರ್ಯ ಹೋರಾಟದಲ್ಲಿ ಈ ಭೂಮಿ ಮಹತ್ವದ ಪಾತ್ರ ವಹಿಸಿತ್ತು ಎಂಬುದಕ್ಕೆ ಶಿವಪುರಸೌಧವೆ ಸಾಕ್ಷಿ. ಬ್ರಿಟೀಷರನ್ನು ಓಡಿಸಲು ಈ ಭಾಗದ ಹಿರಿಯರು ಮಾಡಿದ ಹೋರಾಟ, ತ್ಯಾಗ ಬಲಿದಾನಕ್ಕೆ ಈ ಸೌಧ ಸಂಕೇತವಾಗಿದೆ.
ಕಾಂಗ್ರೆಸ್ ಪಕ್ಷದ ಚಿಹ್ನೆ ಹಸ್ತ ಎಂದು ಎಲ್ಲರಿಗೂ ಗೊತ್ತಿರುವ ವಿಷಯ, ಆದರೆ 2023ರ ರಾಜ್ಯ ಚುನಾವಣೆಗೆ ಮತ್ತಷ್ಟು ಶಕ್ತಿ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ಹಿಂದೆ ಹಸ್ತದ ರೇಖೆಗೆ 3 ಗೆರೆಗಳು ಇದ್ದವು ಆದರೆ ಈಗ ನಾಲ್ಕನೇ ರೇಖೆಯನ್ನ ಜೋಡಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.