ಮೇಕೆದಾಟು ಯೋಜನೆಗೆ ತಮಿಳುನಾಡು ಸಚಿವರ ಅಪಸ್ವರದ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ತಮಿಳುನಾಡಿನ ಮೇಲೆ ದ್ವೇಷ, ಯುದ್ಧ ಮಾಡಬೇಕಂತಿಲ್ಲ. ಅವರು ನಮ್ಮ ಅಣ್ಣತಮ್ಮಂದಿರು ಯಾರ ಮೇಲೂ ದ್ವೇಷ ಇಲ್ಲ ಅಂತಾ ಹೇಳಿದ್ದಾರೆ..
ಆಸ್ಟ್ರೇಲಿಯಾದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲು ರಾಜ್ಯ ಉತ್ಸುಕವಾಗಿದ್ದು, ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್ ಕಾನ್ಸುಲೇಟ್ ಕಚೇರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹರ್ಷ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯೋದಕ್ಕೆ ಅವರ ಗ್ಯಾರೆಂಟಿ ಘೋಷಣೆಗಳೂ ಕೂಡ ಪ್ರಮುಖ ಪಾತ್ರ ವಹಿಸಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಮನೆಯೊಡತಿಗೆ 2000 ಸಹಾಯಧನ, ಪ್ರತಿ ಮನೆಗೆ 200 ಯೂನಿಟ್ ಉಚಿತ ಕರೆಂಟ್, ಅನ್ನಭಾಗ್ಯ ಮತ್ತು ಯುವನಿಧಿ ವರ್ಕ್ ಔಟ್ ಆಗಿದೆ. ಆದ್ರೆ, ಈ ಭರವಸೆಗಳನ್ನೆಲ್ಲಾ ಈಡೇರಿಸಬೇಕು ಅಂದ್ರೆ ರಾಜ್ಯದ ಬೊಕ್ಕಸದ ಮೇಲೆ ತೀವ್ರಹೊರೆ ಬೀಳ್ತಿದ್ದು, ಇದನ್ನು ಸರಿದೂಗಿಸೋಕೆ ಕಾಂಗ್ರೆಸ್ ಬಿಬಿಎಂಪಿ ಮೇಲೆ ಕಣ್ಣು ಹಾಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜ್ಞಾನ ಇಲ್ವಾ? 13 ಬಾರಿ ಬಜೆಟ್ ಮಂಡನೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ಎಷ್ಟು ವಿದ್ಯುತ್ ಇದೇ? ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್ ಎಷ್ಟು ಖರ್ಚು ಎಂದು ಗೊತ್ತಿರಲ್ವಾ?
ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು, ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡರು.
ಲೋಕಸಭೆ ನಂತರವೂ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರು 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಇದರಿಂದ ಡಿ.ಕೆ. ಶಿವಕುಮಾರ್ ಅವರು ಡಿಸಿಎಂ ಸ್ಥಾನದಲ್ಲೇ 5 ವರ್ಷ ಇರಲಿದ್ದಾರಾ ಎಂಬ ಅನುಮಾನ ಮೂಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.