Mental health hub: ಇಂದಿನ ಯುವಕರು ಒತ್ತಡದ ನಡುವೆ ಕೆಲಸ ನಿರ್ವಹಿಸುತ್ತಾ ಮಾನಸಿಕವಾಗಿ ತಮ್ಮ ಸ್ಥಿಮತವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.ಜತೆಗೆ ಖಿನ್ನತೆಗೆ ಒಳಗಾಗಿ ಸಾವನ್ನಪ್ಪುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಅವರಿಗೆ ಉತ್ತಮ ಮಾನಸಿಕ ಚಿಕಿತ್ಸೆ ಅಗತ್ಯವಾಗಿದೆ.
Congress guarantee schemes: ʼನಮ್ಮವರೇ ನಮಗೆ ಮೂಲ' ಎಂಬಂತೆ ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಉಂಡ ಮನೆಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಕೇಂದ್ರದಿಂದ ತೆರಿಗೆಯಲ್ಲಿ, ಅನುದಾನದಲ್ಲಿ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ, ಅಕ್ಕಿ ಕೊಡುವ ವಿಚಾರದಲ್ಲಿ, ಮಹದಾಯಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಲ್ಲಿ ಅನ್ಯಾಯವಾಗುತ್ತಿರುವುದು ಆ ಸೂರ್ಯ ಚಂದ್ರರಷ್ಟೇ ಸತ್ಯ.
Rahul Gandhi Nyay Yatra : ಪ್ರತಿಪಕ್ಷ ನಾಯಕರನ್ನ ಹತ್ತಿಕ್ಕುವುದು ರಾಮ ರಾಜ್ಯದ ಪರಿಕಲ್ಪನೆಯೇ ಎಂದು ಬಿಜೆಪಿ ನಾಯಕರನ್ನ ಪ್ರಶ್ನಿಸಿದ್ದಾರೆ. ಅಲ್ಲದೆ, ಧರ್ಮದ ವಿಚಾರದಲ್ಲಿ ಅನವಶ್ಯಕ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಧಾರ್ಮಿಕ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ಬಹಳ ಕೆಲಸ ಮಾಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕರ್ನಾಟಕ ಕಾಂಗ್ರೆಸ್ ನಾಯಕರು ತೆಲಂಗಾಣ ಚುನಾವಣೆಯಲ್ಲಿ ಕೆಲಸ ಮಾಡಿದ್ದರಲ್ಲಿ ತಪ್ಪೇನಿದೆ. ತೆಲಂಗಾಣದಲ್ಲಿ ಪಕ್ಷ ವಹಿಸಿದ ಜವಾಬ್ದಾರಿಯನ್ನೂ ನಾವು ನಿಭಾಯಿದ್ದೇವೆ ಎಂದು ಸಚಿವ ದಿನೇಶ್ ಗುಂಟೂರಾವ್ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಂತ್ರಜ್ಞಾನವನ್ನ ಅಷ್ಟ್ರಾಜೆನಕಾ ಸಂಸ್ಥೆಯವರು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲು ಮುಂದೆ ಬಂದಿದ್ದಾರೆ. ಉಚಿತವಾಗಿ ಸೇವೆ ಒದಗಿಸಲು ಆರೋಗ್ಯ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಮೊದಲ ಹಂತದಲ್ಲಿ ರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಈ ಸೇವೆ ಲಭ್ಯವಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ, ಕಾನೂನನಲ್ಲಿ ಇದ್ದ ಅವಕಾಶವನ್ನ ಪರಿಷ್ಕರಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. 18 ವರ್ಷದ ಬದಲು 21 ವರ್ಷದ ಮೇಲ್ಪಟ್ಟವರು ಎಂದು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ಗೃಹ ಜ್ಯೋತಿ, ಗೃಹಲಕ್ಷ್ಮಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ. ಅದೇ ರೀತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸನೆ ನಡೆಸಿ ಉಚಿತ ಔಷಧ ನಿಡುವ ‘ಗೃಹ ಆರೋಗ್ಯ ಯೋಜನೆ’ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ.
ರಾಜ್ಯದಲ್ಲಿರುವ ನಮ್ಮ ಕ್ಲಿನಿಕ್ ಗಳಲ್ಲಿ ಶೇ 25 ರಷ್ಟು ಕ್ಲಿನಿಕ್ ಗಳ ಸಮಯ ಬದಲಾವಣೆಗೆ ನಿರ್ಧರಿಸಲಾಗಿದೆ. ನಮ್ಮ ಕ್ಲಿನಿಕ್ ಗಳನ್ನ ಸಂಜೆ ಕ್ಲಿನಿಕ್ ಮಾದರಿಯಲ್ಲಿ ಸಮಯ ಬದಲಾಯಿಸಲು ನಿರ್ಧರಿಸಲಾಗಿದ್ದು, 12 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ಕಾರ್ಯನಿರ್ವಸುವಂತೆ ತಯಾರಿ ನಡೆಸಲಾಗಿದೆ.
Organ Donation Ambassador Ashwini Puneeth Rajkumar: ಪುನೀತ್ ರಾಜ್ಕುಮಾರ್ ಸಿನಿಮಾ ಮಾತ್ರವಲ್ಲದೇ ಅನೇಕ ಸಾಮಾಜಮುಖಿ ಕಾರ್ಯಗಳಿಂದ ಕರುನಾಡಿಗೆ ಮಾದರಿಯಾಗಿದ್ದಾರೆ. ಇದೀಗ ಸದ್ಯದಲ್ಲೇ ಅಂಗಾಂಗ ದಾನ ದಿನಾಚರಣೆ ಇರುವುದರಿಂದ ಸರ್ಕಾರವು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಅಂಗಾಂಗ ದಾನದ ರಾಯಭಾರಿಯಾಗಿ ಆಯೋಜಿಸುವ ಚಿಂತನೆ ನಡೆಸಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಕವಚ 108 ಅನುಷ್ಠಾನಕ್ಕಾಗಿ ತಾಂತ್ರಿಕ ಸಮಿತಿ ರಚನೆಗೆ ಮಾಡಲಾಗಿದೆ. 108 ಆರೋಗ್ಯ ಕವಚ ಹಾಗೂ 104 ಆರೋಗ್ಯ ಸಹಾಯವಾಣಿ ಯೋಜನೆಗಳ ಉನ್ನತ್ತೀಕರಣ ಹಾಗು ಮಾರ್ಗದರ್ಶನಕ್ಕೆ ಈ ಸಮಿತಿ ರಚಿಸಲಾಗಿದೆ.
9 ವರ್ಷಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ಏನು ಕೊಟ್ಟಿದೆ ಎಂಬುದರ ಬಗ್ಗೆ ನೀವು ಅಂಕಿ ಅಂಶ ನೀಡಿ. ಏಲ್ಲೆಲ್ಲಿ ಅನ್ಯಾಯ ಆಗಿದೆ ಎಂಬ ಅಂಕಿ ಅಂಶಗಳ ಸಮೇತ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಬಹಿರಂಗ ಸವಾಲ್ ಹಾಕಿದ್ದಾರೆ.
ಪ್ರತಾಪ್ ಸಿಂಹ ಒಳ ಒಪ್ಪಂದ ಹೇಳಿಕೆ ಒಳ ಒಪ್ಪಂದ ಬಗ್ಗೆ ಮಾಹಿತಿ ಇದ್ರೆ ಸ್ಪಷ್ಟಪಡಿಲಿ ಪ್ರತಾಪ್ ಸಿಂಹಗೆ ದಿನೇಶ್ ಗುಂಡೂರಾವ್ ತಿರುಗೇಟು ಆ ರೀತಿ ಘಟನೆ ನಡೆದಿಲ್ಲ.. ಆ ಪ್ರಶ್ನೆಯ ಉದ್ಬವಿಸಲ್ಲ ಹಿಂದೆ ತಪ್ಪಾಗಿದ್ರೆ ಸರಿಪಡಿಸುವ ಕೆಲಸ ಮಾಡ್ತೀವಿ ಲೋಪದೋಷಗಳಿದ್ದರೆ ಸರಿ ಮಾಡಿ ತನಿಖೆ ಮಾಡಿಸುತ್ತೇವೆ
ಬಿಜೆಪಿ ಅವರ ಭ್ರಷ್ಟಾಚಾರದ ಲೂಟಿ ಸುಮಾರು 150,000 ಲಕ್ಷ ಕೋಟಿ ಆಗಿದೆ. ಪ್ರತಿಯೊಂದರಲ್ಲೂ 40%, 50%, 60% ಕಮಿಷನ್ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುತ್ತಿದೆ. ಹಾಗಾಗಿ ಇದರಲ್ಲಿ ಶೇ. 50% ರಷ್ಟು ಇಳಿಸಿದರೂ ನಮ್ಮ ಕಾಂಗ್ರೆಸ್ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲು ಸಾಧ್ಯವಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೇಳಿದ್ದಾರೆ.
Karnataka Assembly election 2023: ಬಿಜೆಪಿಯಲ್ಲಿ ಟಿಕೆಟ್ ಘೋಷಣೆಯಾಗಿದ್ದು, ಮಾಜಿ ಸಚಿವ ರಾಮಚಂದ್ರೇಗೌಡರ ಪುತ್ರ ಸಪ್ತಗಿರಿಗೌಡರಿಗೆ ಪಕ್ಷದ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಜೆಡಿಎಸ್ ಪಕ್ಷ ವಿ.ನಾರಾಯಣಸ್ವಾಮಿಗೆ ಟಿಕೆಟ್ ಘೋಷಿಸಿದೆ.
ಹೆಂಡ ಕುಡಿದವರಿಗಿಂತಲೂ ಕಡೆಯಾಗಿ ಮಾತಾಡುವ ಸಿ.ಟಿ.ರವಿಯವರನ್ನು ಜನರು ಸುಮ್ಮನೆ O.T.ರವಿ ಎನ್ನುತ್ತಾರೆಯೇ? OT ಕುಡಿಯದೆ ರವಿಯವರ ಬಾಯಿಂದ ಇಂತಹ ಕೊಳಕು ಹೇಳಿಕೆಗಳು ಹೇಗೆ ಬರಲು ಸಾಧ್ಯವೆಂದು ದಿನೇಶ್ ಗುಂಡೂರಾವ್ ಕುಟುಕಿದ್ದಾರೆ.
ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೆಸ್ ಪಕ್ಷದ ಮಟ್ಟಿಗೆ ಹಿನ್ನಡೆಯಾದರೂ ಅಂತಿಮವಾಗಿ ಜನಾದೇಶಕ್ಕೆ ಗೌರವ ಕೊಡಲೇಬೇಕು. ಚುನಾವಣೆ ನಡೆದ ಐದೂ ರಾಜ್ಯಗಳಲ್ಲಿ ಪಕ್ಷದ ಪರ ಜನರ ಒಲವಿತ್ತು. ಆದರೆ ಆ ಒಲವು ಪಕ್ಷದ ಪರ ಮತಗಳಾಗಿ ಪರಿವರ್ತನೆಯಾಗಿಲ್ಲ. ಚುನಾವಣೆ ನಡೆದ ರಾಜ್ಯಗಳಲ್ಲಿ ಜನರ ನಾಡಿ ಮಿಡಿತ ನಾವು ಅರಿಯುವಲ್ಲಿ ನಮ್ಮ ಪಕ್ಷ ವಿಫಲವಾಗಿದೆ ಎಂದು ಮಾಜಿ ಕೆಪಿಸಿಸಿ ಮತ್ತು ಗೋವಾ ಕಾಂಗ್ರೆಸ್ ಉಸ್ತುವಾರಿ ಅಧ್ಯಕ್ಷ ದಿನೇಶ್ ಗುಂಡು ರಾವ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.