ಎ.ಬಿ.ಡಿವಿಲಿಯರ್ಸ್ ಎಂದರೆ ಸಾಕು ಎದುರಾಳಿ ತಂಡದ ಬೌಲರ್ ಗಳಲ್ಲಿ ನಿಜಕ್ಕೂ ನಡುಕ ಹುಟ್ಟುತ್ತದೆ, ಅದರಲ್ಲೂ ಅವರು ತಮ್ಮ ಎಂದಿನ 360 ಡಿಗ್ರಿ ಬ್ಯಾಟಿಂಗ್ ಮೂಲಕ ಎಂತಹ ಬೌಲರ್ ನ್ನು ಕೂಡ ಒಂದು ಕ್ಷಣ ದಂಗುಬಡಿಸುತ್ತಾರೆ. ಈಗ ಇಂತಹ ಆಟಗಾರ ಈಗ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ ಈಗ ತಮ್ಮ ನೆಚ್ಚಿನ ಆರ್ಸಿಬಿ ತಂಡದ ಆಟಗಾರನ ಕುರಿತಾಗಿ ಅಚ್ಚರಿ ವ್ಯಕ್ತಪಡಿಸುವುದರ ಜೊತೆ ಮೆಚ್ಚುಗೆಯನ್ನು ಸಹ ವ್ಯಕ್ತಪಡಿಸಿದ್ದಾರೆ.
ಐಪಿಎಲ್ 2022 ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ದಿನೇಶ್ ಕಾರ್ತಿಕ್ ಈಗ ಮತ್ತೊಮ್ಮೆ ಟೀಮ್ ಇಂಡಿಯಾಗೆ ವಾಪಸ್ ಬರುತ್ತಾರಾ? ಎನ್ನುವ ಪ್ರಶ್ನೆ ಕಾಡುತ್ತಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 34 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಐದು ಸಿಕ್ಸರ್ ಗಳ ಮೂಲಕ ಭರ್ಜರಿ 66 ರನ್ ಗಳಿಸಿದರು.ಆ ಮೂಲಕ ತಮ್ಮಲ್ಲಿನ ಕ್ರಿಕೆಟ್ ಆಟ ಇನ್ನೂ ಮುಗಿದಿಲ್ಲ ಎಂದು ಅವರು ಸೂಚ್ಯವಾಗಿ ಸಾಬೀತುಪಡಿಸಿದ್ದಾರೆ.
IPL 2022: ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಕೊನೆಯ ಓವರ್ನಲ್ಲಿ ಒಂದು ಬೌಂಡರಿ ಮತ್ತು ಸಿಕ್ಸರ್ ಬಾರಿಸುವ ಮೂಲಕ ಮೇಸ್ಟ್ರೋ ಗೆಲುವು ಸಾಧಿಸಿದರು. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 3 ವಿಕೆಟ್ಗಳ ಜಯ ದಾಖಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2022 ರ ಪಾಯಿಂಟ್ ಪಟ್ಟಿಯಲ್ಲಿ ತನ್ನ ಖಾತೆಯನ್ನು ತೆರೆದಿದೆ.
ಈ ಬಾರಿ ಒಟ್ಟು 590 ಆಟಗಾರರ ಭವಿಷ್ಯ ಈ 2 ದಿನಗಳಲ್ಲಿ ನಿರ್ಧಾರವಾಗಲಿದೆ. ಕೆಲವು ಕ್ರಿಕೆಟಿಗರು ಕನಿಷ್ಠ ಬೆಲೆ ಇಟ್ಟುಕೊಂಡು ತಪ್ಪು ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 2 ಕೋಟಿ ರೂ. ಮೂಲ ಬೆಲೆಯಿಂದಾಗಿ ಮಾರಾಟವಾಗದ ಆ 3 ಸ್ಟಾರ್ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..
ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ವಿಕೆಟ್ ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಅವರು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಸ್ಥಾನದಿಂದ ಕೆಳಗಿಳಿದು ಅದನ್ನು ಇಯೊನ್ ಮೋರ್ಗಾನ್ ಅವರಿಗೆ ಹಸ್ತಾಂತರಿಸಿದರು.
ಐಪಿಎಲ್ ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ಪ್ರಾರಂಭವಾಗಲಿದೆ. ಎಲ್ಲಾ ತಂಡಗಳು ಪಂದ್ಯಾವಳಿಯ ಸಿದ್ಧತೆಗಳನ್ನು ಪ್ರಾರಂಭಿಸಿವೆ ಮತ್ತು ಈ ಬಾರಿ ಯಾವ ಹೊಸ ದಾಖಲೆಗಳನ್ನು ಮುರಿಯಲಾಗುತ್ತದೆ ಮತ್ತು ಎಷ್ಟು ದಾಖಲೆಗಳನ್ನು ಮಾಡಲಾಗುವುದು ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.
ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುತ್ತಿದ್ದಂತೆ ಈಗ ಅವರ ನಂಬರ್ 7 ಜರ್ಸಿಗೂ ನಿವೃತ್ತಿ ಘೋಷಿಸಬೇಕೆಂದು ಹಲವಾರು ಕ್ರಿಕೆಟ್ ಆಟಗಾರರು ಹಾಗೂ ಅಭಿಮಾನಿಗಳು ಈ ಬೇಡಿಕೆಯನ್ನು ಇಟ್ಟಿದ್ದಾರೆ.
ದಿನೇಶ್ ಕಾರ್ತಿಕ್ ಅವರು ಶನಿವಾರ ನಡೆದ ಇನ್ಸ್ಟಾಗ್ರಾಮ್ ಲೈವ್ ಅಧಿವೇಶನದಲ್ಲಿ ಹಾರ್ದಿಕ್ ಮತ್ತು ಕ್ರುನಾಲ್ ಪಾಂಡ್ಯ ಅವರ ಜೊತೆ ಲೈವ್ ಚಾಟ್ ನಡೆಸಿದರು. ಅಲ್ಲಿ ಅವರು ಕರೋನವೈರಸ್ ಪ್ರಭಾವದಿಂದ ಹಿಡಿದು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಂದೂಡುವವರೆಗೆ ವಿವಿಧ ವಿಷಯಗಳ ಬಗ್ಗೆ ಮಾತನಾಡಿದರು.
ಕೆರಿಬಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸುವ ತಂಡದ ಡ್ರೆಸ್ಸಿಂಗ್ ಕೊಠಡಿಯಿಂದ ಪಂದ್ಯವನ್ನು ನೋಡುವ ಮೂಲಕ ತನ್ನ ಕೇಂದ್ರ ಒಪ್ಪಂದದ ಷರತ್ತು ಉಲ್ಲಂಘಿಸಿದ್ದಕ್ಕಾಗಿ ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ಅವರ ಬೇಷರತ್ ಕ್ಷಮೆಯಾಚನೆಯನ್ನು ಬಿಸಿಸಿಐ ಸೋಮವಾರದಂದು ಸ್ವೀಕರಿಸಿದೆ.
ಮಹೇಂದ್ರ ಸಿಂಗ್ ಧೋನಿ ಆಲೋಚನೆಯ ನಂತರ ಕ್ರಿಕೆಟ್ ಲೆಜೆಂಡ್ ಸುನಿಲ್ ಗವಾಸ್ಕರ್, ವೀರೇಂದ್ರ ಸೆಹ್ವಾಗ್, ಭುವನೇಶ್ವರ್ ಕುಮಾರ್ ಅಲ್ಲದೆ ಸ್ವತಃ ಕ್ಯಾಪ್ಟನ್ ಕೊಹ್ಲಿ ಅವರ ಪರವಾಗಿ ನಿಂತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.