ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಚುನಾವಣಾ ಪ್ರಚಾರದ ವೇಳೆ ಮೋದಿ ದ್ವೇಷಪೂರಿತ ಭಾಷಣ ಮಾಡುವ ಮೂಲಕ ಸಾರ್ವಜನಿಕ ಭಾಷಣದ ಘನತೆ ಮತ್ತು ಪ್ರಧಾನಿ ಕಚೇರಿಯ ಮಹತ್ವವನ್ನು ಕಡಿಮೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
Narendra Modi latest parliament session: ಗುರುವಾರ ರಾಜ್ಯಸಭೆಯಲ್ಲಿ ನಿವೃತ್ತಿಯಾಗುವ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮನಮೋಹನ್ ಸಿಂಗ್ ಅವರು ಗಾಲಿಕುರ್ಚಿಯಲ್ಲಿ ರಾಜ್ಯಸಭೆಯಲ್ಲಿ ಮತ ಚಲಾಯಿಸಲು ಬಂದಿದ್ದನ್ನು ಸ್ಮರಿಸಿದರು.
Make In India: ಯುಪಿಎ ಅವಧಿಯಲ್ಲಿ ಉತ್ಪಾದನಾ ವಲಯದಲ್ಲಿನ ಅಭಿವೃದ್ಧಿಯ ಕಾರಣದಿಂದ, ಉದ್ಯೋಗಾವಕಾಶಗಳೂ ಹೆಚ್ಚಾಗಿದ್ದವು. ಕಾರ್ಖಾನೆಗಳಲ್ಲಿನ ಉದ್ಯೋಗ ದರ ವಾರ್ಷಿಕವಾಗಿ 6.2% ಹೆಚ್ಚಳ ಕಂಡಿತ್ತು. ಆದರೆ, ಮೋದಿ ಸರ್ಕಾರದ ಅವಧಿಯಲ್ಲಿ ಈ ಉದ್ಯೋಗ ದರ 2.8%ಕ್ಕೆ ಕುಸಿತ ಕಂಡಿದೆ. ಅದೇ ರೀತಿ, ಯುಪಿಎ ಆಡಳಿತದ ಅವಧಿಯಲ್ಲಿ ಉದ್ಯೋಗಿಗಳ ಸಂಬಳ ವಾರ್ಷಿಕವಾಗಿ 17.1% ದರದಲ್ಲಿ ಹೆಚ್ಚುತ್ತಿದ್ದರೆ, 2014ರ ಬಳಿಕ ಸಂಬಳ ಹೆಚ್ಚಳದ ದರ 8.4%ಗೆ ಇಳಿಕೆ ಕಂಡಿದೆ.
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭಾನುವಾರ ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್) ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದ ಹಳ್ಳಿಯೊಂದರಲ್ಲಿ ಬಾಲ್ಯವನ್ನು ಕಳೆದ ಅವರು ರಾಷ್ಟ್ರಪತಿ ಹುದ್ದೆವರೆಗೆ ಸಾಗಿದ ಸುದೀರ್ಘ ಪ್ರಯಾಣದ ಮೇಲೆ ಪ್ರಣಬ್ ಮುಖರ್ಜಿ ಅವರ ಆತ್ಮಚರಿತ್ರೆ 'ಪ್ರೆಸಿಡೆನ್ಶಿಯಲ್ ಇಯರ್ಸ್' ಬೆಳಕುಚೆಲ್ಲಿದೆ.
ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ್ ರತ್ನಕ್ಕೆ ಶನಿವಾರ 88 ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನೀಡಬೇಕೆಂದು ಆಗ್ರಹಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಗೆ ದಾಖಲಿಸಲಾಗಿದೆ, ಭಾನುವಾರ ತಡರಾತ್ರಿ ಕಾರ್ಡಿಯೋ-ಥೊರಾಸಿಕ್ ವಾರ್ಡ್ನಲ್ಲಿ ವೀಕ್ಷಣೆ ನಡೆಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಐಕೆ ಗುಜ್ರಾಲ್ ಅವರ 100 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಖ್ಯಾತ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್, "ಈ ಘಟನೆ ನಡೆದಾಗ, ಗುಜ್ರಾಲ್ ಜಿ ಅವರು ತುಂಬಾ ಕಾಳಜಿ ವಹಿಸಿದ್ದರು, ಅವರು ಅಂದು ಸಂಜೆ ಅಂದಿನ ಗೃಹ ಸಚಿವ ನರಸಿಂಹರಾವ್ ಅವರ ಬಳಿ ತೆರಳಿ ಪರಿಸ್ಥಿತಿ ಬಗ್ಗೆ ವಿವರಿಸಿದರು. ಸರ್ಕಾರವು ಶೀಘ್ರವೇ ಸೈನ್ಯವನ್ನು ಕರೆಯುವುದು ಅವಶ್ಯಕವಾಗಿದೆ ಎಂದು ವಿವರಿಸಿದ್ದರು. ಆ ಸಲಹೆಯನ್ನು ಗಮನಿಸಿದ್ದರೆ ಬಹುಶಃ 1984 ರ ಹತ್ಯಾಕಾಂಡವನ್ನು ತಪ್ಪಿಸಬಹುದಿತ್ತು" ಎಂದು ಹೇಳಿದ್ದಾರೆ.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಶುಕ್ರವಾರ ರಾಷ್ಟ್ರೀಯ ಆರ್ಥಿಕತೆಯ ನಿರಂತರ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಎಎನ್ಐ ಜೊತೆ ಮಾತನಾಡಿದ ಡಾ.ಮನಮೋಹನ್ ಸಿಂಗ್, 'ನಮ್ಮ ಆರ್ಥಿಕತೆಯ ಸ್ಥಿತಿ ಚಿಂತಾಜನಕವಾಗಿದೆ, ಆದರೆ ನಮ್ಮ ಸಮಾಜದ ಸ್ಥಿತಿ ಇನ್ನಷ್ಟು ಆತಂಕಕಾರಿ ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ಹಿಂಜರಿತದ ಬಗ್ಗೆ ರಾಜಕೀಯ ಮಾಡಬೇಡಿ ಮತ್ತು ತಜ್ಞರ ಸಹಾಯದಿಂದ ದೇಶಕ್ಕೆ ಸಹಾಯ ಮಾಡಬೇಡಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ಕರೆ ನೀಡಿದ್ದಾರೆ. ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸುವುದು ರಾಷ್ಟ್ರದ ಹಿತಾಸಕ್ತಿ ಎಂದು ಶಿವಸೇನೆ ಮುಖವಾಣಿ 'ಸಾಮ್ನಾ' ವರದಿ ಮಾಡಿದೆ.
ಕಿರುತೆರೆಯಲ್ಲಿ ತಮ್ಮ ಕಾಮಿಡಿ ಶೋನಿಂದಲೇ ಸಾಕಷ್ಟು ಖ್ಯಾತಿ ಗಳಿಸಿರುವ ಕಪಿಲ್ ಶರ್ಮಾ ಈಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ಗುರುಶರಣ್ ಕೌರ್ ಅವರನ್ನು ಭೇಟಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.