Karnataka Election 2023: ನಾಳೆ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಹಾಗೂ ಅಹಿತಕರ ಘಟನೆ ನಡೆಯಂತೆ ಮುಂಜಾಗ್ರತ ಕ್ರಮ ರಾಜ್ಯ ಪೊಲೀಸ್ ಇಲಾಖೆ ಭರ್ಜರಿ ಸಿದ್ಧತೆ ನಡೆಸಿದೆ. ಕೇಂದ್ರಿಯ ಪಡೆ, ಅನ್ಯ ರಾಜ್ಯಗಳ ಪೊಲೀಸರು ಸೇರಿದಂತೆ ಒಟ್ಟು 1,56 ಲಕ್ಷ ಪೊಲೀಸರು ಕಾರ್ಯ ನಿರ್ವಹಿಸಲು ಸನ್ನದ್ಧರಾಗಿದ್ದಾರೆ.
Karnataka Election 2023: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತದಾನ ದಿನದಂದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗಿದೆ. ಇತ್ತ ಯಾದಗಿರಿ ಜಿಲರಲಯಲ್ಲಿಯೂ ನಾಳೆ ನಡೆಯುವ ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಶಿಗ್ಗಾಂವಿ, ಮೇ 08: ಕಾಂಗ್ರೆಸ್ ಅವರು ಸ್ವಾರ್ಥ ಸಾಧನೆಗಾಗಿ ಚುನಾವಣೆಯನ್ನು ಬಳಸಿಕೊಳ್ಳುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಸಮಾಜದಲ್ಲಿ ದ್ವೇಷ ಮತ್ತು ಅರಾಜಕತೆ ಹುಟ್ಟಿಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Vote Counting Centre: ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ.
Karnataka Election 2023: ಸತೀಶ್ ಜಾರಕಿಹೊಳಿ ತಮ್ಮ ಭಾಷಣದಲ್ಲಿ ಚಿತ್ರನಟ ಸುದೀಪ್ ವಿರುದ್ಧ ಅಸಮಾಧಾನ ಹೊರಹಾಕಿ, ಹಣ ಕೊಟ್ಟು ಅವರನ್ನು ನೋಡುತ್ತಿದ್ದೆವು, ಈಗ ಪುಕ್ಕಟ್ಟೆಯಾಗಿ ನೋಡುತ್ತಿದ್ದೇವೆ ಎಂದಿದ್ದಾರೆ.
Karnataka Election 2023: ಈ ಚುನಾವಣೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ತೇನೆ. ಬಹಳಷ್ಟು ಕಡೆ ಅಂಡರ್ ಕರೆಂಟ್ ಇದೆ. ಏನಾದ್ರೂ ಷಡ್ಯಂತ್ರ ಮಾಡಿ ಜಗದೀಶ್ ಶೆಟ್ಟರ್ ರನ್ನು ಸೋಲಿಸಲು ಯತ್ನಿಸಿದ್ದಾರೆ. ಎಲ್ಲಿಯೂ ವಿರೋಧ ಪಕ್ಷದ ಅಭ್ಯರ್ಥಿ ಹೆಸರು ಹೇಳಿ ಸೋಲಿಸಿ ಅಂತ ಹೇಳಿಲ್ಲ. ಆದ್ರೆ ಬಿಜೆಪಿ ಘಟಾನುಘಟಿ ನಾಯಕರು ಶೆಟ್ಟರ್ ರನ್ನು ಸೋಲಿಸಿ ಅಂತ ಕರೆ ನೀಡಿದ್ರು ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಇಂದು ಅಂತಿಮ ಹಂತದ ಚುನಾವಣೆ ಪ್ರಚಾರ ನಡೆಯಲಿದೆ. ಈ ಬಗ್ಗೆಹುಬ್ಬಳ್ಳಿಯಲ್ಲಿ ಮಾತಾನಾಡಿರುವ ಸಿಎಮ್ ಬಸವರಾಜ ಬೊಮ್ಮಾಯಿ,ರಾಜ್ಯಾದ್ಯಂತ ಅಂತಿಮ ಹಂತದ ಬಹಿರಂಗ ಪ್ರಚಾರ ನಡೆಯುತ್ತಿದೆ.ಎಲ್ಲ ನಾಯಕರು ಬಹಿರಂಗ ಸಭೆ - ರೋಡ್ ಷೋ ಮಾಡುತ್ತಿದ್ದಾರೆ.
Karnataka Election 2023 : ಇಂದು ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಾರಿ ಚುನಾವಣೆಯನ್ನು ನಾವ್ಯಾರು ಮಾಡುತ್ತಿಲ್ಲ. ಜನರೇ ಸ್ವಯಂ ಪ್ರೇರಿತರಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದರು.
Rahul Gandhi Election Campaign: ಚುನಾವಣೆ ಅಬ್ಬರದ ಪ್ರಚಾರದ ಹಿನ್ನಲೆ ರಾಜಕೀಯ ನಾಯಕರು ನಾ ಮುಂದು ತಾ ಮುಂದು ಎಂದು ಪ್ರಚಾರದಲ್ಲಿ ಮುಳುಗಿದ್ದಾರೆ. ಇದರ ನಡುವೆ ಸಿಲಿಕಾನ್ ಸಿಟಿ ಜನ ಸಾಮಾನ್ಯರ ಜೊತೆ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಹೇಗಿದ್ರು ನೋಡಿ! ಇಲ್ಲಿವೆ ಪೋಟೊಸ್..
‘ದಿ ಕೇರಳ ಸ್ಟೋರಿ’ ವಿವಾದ: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕರ್ನಾಟಕದ ಚುನಾವಣಾ ರ್ಯಾಲಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ಹೊಗಳಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಚಿತ್ರವನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದ್ದಾರೆ.
Karnataka election Opinion Poll On Zee : ಸಮೀಕ್ಷೆಯಲ್ಲಿ ಜನರಿಗೆ ಯಾವ ಪಕ್ಷ ಅಧಿಕಾರದಲ್ಲಿದ್ದಾಗ ಅತಿ ಹೆಚ್ಚಿನ ಪ್ರಗತಿಯಾಗಿದೆ ಎನ್ನುವ ಪ್ರಶ್ನೆಯನ್ನು ಜನರ ಮುಂದಿಟ್ಟಾಗ ಶೇ 31 ರಷ್ಟು ಜನರು ಕಾಂಗ್ರೆಸ್ ಎಂದು ಹೇಳಿದರೆ, ಶೇ 36ರಷ್ಟು ಜನರು ಬಿಜೆಪಿ ಎನ್ನುವ ಅಭಿಪ್ರಾಯಕ್ಕೆ ಬಂದಿದ್ದಾರೆ. ಇನ್ನೂ ಜೆಡಿಎಸ್ ಶೇ 11 ರಷ್ಟು ಎಂದು ಹೇಳಿದ್ದಾರೆ. ಶೇ 22 ರಷ್ಟು ಜನರ ಅಂತಹ ಯಾವುದೇ ವ್ಯತ್ಯಾಸವಿಲ್ಲ ಮೂರು ಪಕ್ಷಗಳು ಒಂದೇ ಎಂದು ಹೇಳಿದ್ದಾರೆ.
Karnataka Election 2023: ಆಯನೂರು ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಜನರತ್ತ ಕೈ ಬೀಸಿದ ಪ್ರಧಾನಿ, ಆಯನೂರು ಗ್ರಾಮದ ಮೈದಾನದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
Karnataka Election 2023: ವಿಧಾನಸಭೆ ಚುನಾವಣೆ ಹಿನ್ನಲೆ ಮತದಾರರನ್ನು ಆಕರ್ಷಿಸಲು ಮತದಾರರಿಗೆ ಮತದಾನದ ಮಮತೆಯ ಕರೆಯೋಲೆ ಶೀರ್ಷಿಕೆಯ ಆಮಂತ್ರಣ ಪತ್ರಿಕೆಯನ್ನ ಯಾದಗಿರಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಬಿಡುಗಡೆ ಮಾಡಿದೆ.
ಕುಂದಾನಗರಿಯಲ್ಲಿ ರಾಹುಲ್ ಗಾಂಧಿ ಅಬ್ಬರದ ಪ್ರಚಾರ ನಡೆಸಿದ್ದಾರೆ.. ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಬೇಟೆ ನಡೆಸಿದ ರಾಹುಲ್ ಗಾಂಧಿ ಮತದಾರರಿಗೆ 5 ಭರವಸೆ ನೀಡಿದ್ದಾರೆ. ನಾವು ಕ್ರಾಂತಿಕಾರಿ ಕೆಲಸಕ್ಕೆ ಕೈಹಾಕಿದ್ದೇವೆ ಎಂದಿದ್ದಾರೆ..
ಬೆಂಗಳೂರು ಮತ್ತು ಮೈಸೂರಿನ ಹಲವು ಸ್ಥಳಗಳಲ್ಲಿ ಐಟಿ ದಾಳಿ ನಡೆದಿದೆ.. ಫೈನಾನ್ಸಿಯರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರು ಹಾಗೂ ಮೈಸೂರು ಭಾಗದಲ್ಲಿ ಸುಮಾರು 20 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ.. 5 ಕೋಟಿ ಬೆಲೆಬಾಳುವ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಮಲ್ಲಿಕಾರ್ಜುನ್ ಖರ್ಗೆ, ಕುಟುಂಬಸ್ಥರ ಹತ್ಯೆ ಆಡಿಯೋ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ ಆ ಆಡಿಯೋ ತಿರುಚಲಾಗಿದೆಯೋ ಏನೋ ನೋಡಬೇಕಿದೆ. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.