ಲೋಕಾಯುಕ್ತ ಅಧಿಕಾರಿಗಳ ತನಿಖೆಗೆ ಸಹಕಾರ ಕೊಡ್ತೀನಿ. ಯಾವಾಗ ಅಧಿಕಾರಿಗಳು ಕರೆದ್ರೂ ವಿಚಾರಣೆಗೆ ಹಾಜರಾಗ್ತೀನಿ ಎಂದು ವಿಚಾರಣೆ ಬಳಿಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿಕೆ ನೀಡಿದ್ದಾರೆ.
ಪ್ರಶಾಂತ್ ಮಾಡಾಳ್ ಹೆಸರಿನಲ್ಲಿ ಬೇನಾಮಿ ಆಸ್ತಿಯಿರುವ ಬಗ್ಗೆ ಆರೋಪಿ ಸಿದ್ದೇಶ್ ಮಾಹಿತಿ ನೀಡಿದ್ದು ಇದರ ಬಗ್ಗೆ ತನಿಖೆ ಮಾಡಲು ಎಫ್ಐಆರ್ ದಾಖಲಾಗಿದೆ. ಇದರಲ್ಲಿ ಪ್ರಶಾಂತ್ ಮಡಾಳ್, ಸುರೇಂದ್ರ, ಹಾಗೂ ಸಿದ್ದೇಶ್ ಆರೋಪಿಗಳಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಂಠಪೂರ್ತಿ ಕುಡಿದು ಮನೆಗೆ ಬಂದ ವಿನೋದ್ ಕಾಂಬ್ಳಿ ಪತ್ನಿಆಂಡ್ರಿಯ ಜೊತೆಗೆ ಜಗಳವಾಡಿದ್ದಾರೆ. ಬಳಿಕ ಕುಕ್ಕರ್ ಪಾನ್ನಿಂದ ಪತ್ನಿಯ ತಲೆಗೆ ಹೊಡೆದಿದ್ದಾರೆಂದು ಆರೋಪಿಸಲಾಗಿದೆ.
ಪ್ರಕರಣದಲ್ಲಿ ಸಿಬಿಐ 15 ಮಂದಿಯನ್ನು ಆರೋಪಿಗಳನ್ನಾಗಿ ಮಾಡಿದೆ. ಮನೀಶ್ ಸಿಸೋಡಿಯಾ ಅವರನ್ನು ನಂಬರ್ ಒನ್ ಆರೋಪಿಯನ್ನಾಗಿ ಮಾಡಲಾಗಿದೆ. ಪಿಸಿ ಆಕ್ಟ್ 1988, 120 ಬಿ, 477 ಎ ಅಡಿಯಲ್ಲಿ ಸಿಬಿಐ ಪ್ರಕರಣ ದಾಖಲಿಸಿದೆ.
ರಾಹುಲ್ ಜೈನ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ), 323 (ಯಾವುದೇ ವ್ಯಕ್ತಿಗೆ ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 506 (ಬೆದರಿಕೆ) ಸೇರಿ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಿದ್ದಾರೆ.
FIR Against BJP leader: ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರಭಾವಿ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಪೊಲೀಸರು ದಾಖಲಿಸಿರೋ ಎಫ್ಐಆರ್ ಇದೀಗ ಲಭ್ಯವಾಗಿದೆ. ಬಾಲಿವುಡ್ ನಟ ಶಕ್ತಿ ಕಪೂರ್ ಪುತ್ರ ಸಿದ್ಧಾಂತ ಕಪೂರ್ ಈ ಪ್ರಕರಣದ ಎ5 ಆರೋಪಿ. ಸಿದ್ದಾಂತ್ ಕಪೂರ್ ಎ5 ಆರೋಪಿ ಎಂದು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ.
ಸಲ್ಮಾನ್ ಖಾನ್ ಅವರ ತಂದೆ ಬೆಳಿಗ್ಗೆ ಜಾಗಿಂಗ್ ಮಾಡಲು ಹೋದಾಗ ಅಲ್ಲಿ ಅವರು ಬೆಂಚ್ ಮೇಲೆ ಕುಳಿತಿದ್ದಾಗ ಅವರಿಗೆ ಮತ್ತು ಅವರ ಮಗ ಸಲ್ಮಾನ್ ಖಾನ್ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
2ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ಆದೇಶದಂತೆ ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 1860 (U/s-171C, 171F) ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1950,1951,1989 (U/s-123) ಅಡಿ ಪ್ರಕರಣ ದಾಖಲಿಸಲಾಗಿದೆ. ಸಚಿವ ಅಶ್ವತ್ಥ್ ನಾರಾಯಣ್ ಆರೋಪಿ 1 ಆಗಿದ್ದು, ಇನ್ನುಳಿದಂತೆ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ಆರೋಪಿ ನಂಬರ್ 2 ಆಗಿದ್ದಾರೆ.
ಶಿವಮೊಗ್ಗದಲ್ಲಿ ಹರ್ಷನ ಕೊಲೆ ಆದ ಮೇಲೆ ಒಂದು ದೊಡ್ಡ ಷಡ್ಯಂತ್ರ ನಡೆದಿತ್ತು. ಟ್ರಸ್ಟ್ವೊಂದು ರಚನೆಯಾಗಿದ್ದು, ಅದರಲ್ಲಿ ದೊಡ್ಡ ಮನುಷ್ಯರ ಕೈವಾಡವಿದೆ. ಇವರೆಲ್ಲ ಸೇರಿ ಕೊಲೆ ಮಾಡಲು ಸ್ಕೆಚ್ ಹಾಕುತ್ತಾರೆ. ಆದರೆ ಶಿವಮೊಗ್ಗ ಪೊಲೀಸರು ಬುದ್ದಿವಂತಿಕೆಯಿಂದ ತನಿಖೆ ಮಾಡಿ ಅಂತವರನ್ನು ತಕ್ಷಣ ಅರೆಸ್ಟ್ ಮಾಡಿದ್ದಾರೆ.
ನಿವೇಶನ ಕಬಳಿಸಿರುವ ವಿಚಾರವಾಗಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಕುಟುಂಬಸ್ಥರ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.