ಕರೋನಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR) ದಾಖಲಿಸಲಾಗಿದೆ. ಈಗ ಎಫ್ ಐ ಆರ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (A1) ಮೊದಲ ಆರೋಪಿಯನ್ನಾಗಿ ಮಾಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ (A2), ಸಂಸದ ಡಿ ಕೆ ಸುರೇಶ್ (A3) ಸೇರಿದಂತೆ 31 ನಾಯಕರ ವಿರುದ್ಧ ಎಫ್ಐಆರ್ (FIR)ದಾಖಲಿಸಲಾಗಿದೆ.
ಕಾಂಗ್ರೆಸ್ ಮೇಕೆದಾಟು (Congress Padayatre) ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ 30 ಮಂದಿ ವಿರುದ್ದ ಎಫ್ಐಆರ್ (FIR) ದಾಖಲು ಮಾಡಲಾಗಿದೆ ಎನ್ನಲಾಗಿದೆ.
ತನಗೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಎಫ್ಐಆರ್ ದಾಖಲಿಸಿದ್ದು (Kangana Ranaut files FIR), ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಬಾಲಿವುಡ್ ನಟಿ ಕಂಗನಾ ರಣಾವತ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಕೋರಿದ್ದಾರೆ.
Bantwal Rape Case: 16ವರ್ಷದ ಶಾಲಾ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟದ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ಆರೋಪಿ ಶರತ್ ಶೆಟ್ಟಿ ಬಳಕೆಯೊಂದಿಗೆ ಮಾತನಾಡುತ್ತಿದ್ದ.
ಕೊರೊನಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು 17 ಇತರರ ವಿರುದ್ಧ ಲೋಹಾ ಮಂಡಿ ಪೊಲೀಸ್ ಠಾಣೆಯಲ್ಲಿ ಸೋಮವಾರದಂದು ಎಫ್ಐಆರ್ ದಾಖಲಾಗಿದೆ.
ಖ್ಯಾತ ಯೋಗ ಗುರು ರಾಮದೇವ್ COVID-19 ಚಿಕಿತ್ಸೆಗಾಗಿ ಬಳಸುತ್ತಿರುವ ಔಷಧಿಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ ಎಂಬ ಆರೋಪದ ಮೇಲೆ ಛತ್ತೀಸ್ಗಡ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಎಐಸಿಸಿ ಸಂಶೋಧನಾ ವಿಭಾಗದ ಲೆಟರ್ ಹೆಡ್ ಅನ್ನು ನಕಲಿ ಮಾಡಿ ಸುಳ್ಳು ವಿಷಯವನ್ನು ಮುದ್ರಿಸಿದ ಆರೋಪದ ಮೇಲೆ ಛತ್ತೀಸ್ಗಡದಲ್ಲಿ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ರಮನ್ ಸಿಂಗ್ ಮತ್ತು ಪಕ್ಷದ ವಕ್ತಾರ ಸಂಬಿತ್ ಪಾತ್ರಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ನವದೆಹಲಿ: ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜ್ಪುತ್ (Sushant Singh Rajput) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರಕರಣದ ಕೇಂದ್ರಬಿಂದುವಾಗಿರುವ ರಿಯಾ ಚಕ್ರವರ್ತಿ ವತಿಯಿಂದ ಭಾವನಾತ್ಮಕ ಹೇಳಿಕೆ ಪ್ರಕಟಗೊಂಡಿದೆ.
ಹೋಂ ಕ್ವಾರಂಟೈನ್, ಸಾಂಸ್ಥಿಕ ಕ್ವಾರಂಟೈನ್ನಲ್ಲಿರುವ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಕ್ವಾರಂಟೈನ್ ಪ್ರದೇಶದಿಂದ ಬೇರೆ ಕಡೆಗೆ ಚಲನ ವಲನ ಮಾಡುವುದಾಗಲಿ ಅಥವಾ ತಮ್ಮ ಮೊಬೈಲ್ಗಳನ್ನು ಸ್ವಿಚಾಫ್ ಮಾಡಬಾರದು. ಒಂದು ವೇಳೆ ಉದ್ದೇಶಪೂರ್ವಕವಾಗಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಅಥವಾ ಮೊಬೈಲ್ ಸ್ವಿಚಾಫ್ ಮಾಡಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಐ.ಪಿ.ಸಿ. ಸೆಕ್ಷನ್ 188 ರನ್ವಯ ಎಫ್ಐಆರ್ (FIR) ದಾಖಲಿಸಲಾಗುವುದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಷೋವೊಂದರ ವೇಳೆ ಫರಾಹ್ ಖಾನ್ ಭಾರತಿ ಸಿಂಗ್ ಹಾಗೂ ರವೀನಾ ಟಂಡನ್ ಆಂಗ್ಲಭಾಷೆಯಲ್ಲಿ ಶಬ್ದವೊಂದರ ಸ್ಪೆಲ್ಲಿಂಗ್ ಬರೆಯಲು ಸೂಚಿಸಿದ್ದಾರೆ. ಈ ಶಬ್ದ ಪವಿತ್ರ ಗ್ರಂಥವೊಂದರ ಶಬ್ದವಾಗಿತ್ತು. ಶಬ್ದದ ಅರ್ಥ ತಿಳಿಯದ ಭಾರತಿ ಸಿಂಗ್, ಕಾಮಿಡಿ ಮಾಡುವ ಉದ್ದೇಶದಿಂದ ಆ ಶಬ್ದದ ವಿಪರೀತ ಅರ್ಥವನ್ನೇ ಹೇಳಿದ್ದಾರೆ. ಇದನ್ನು ತಮಾಷೆ ಎಂದು ತಿಳಿದ ರವೀನಾ ಹಾಗೂ ಫರಾಹ್ ಖಾನ್ ಅವರೂ ಭಾರತಿ ಜೊತೆ ತಮಾಷೆ ಮಾಡಿದ್ದಾರೆ.
ಜನಸಮೂಹ ಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದ ಇತಿಹಾಸಕಾರ ರಾಮಚಂದ್ರ ಗುಹಾ, ಮಣಿರತ್ನಂ ಮತ್ತು ಅಪರ್ಣ ಸೇನ್ ಸೇರಿದಂತೆ ಸುಮಾರು 50 ಗಣ್ಯರ ವಿರುದ್ಧ ಬಿಹಾರದ ಮುಜಾಫರ್ಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.