ಎಚ್ಎಎಲ್ ಬಗ್ಗೆ ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶನಿವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಚ್ಎಎಲ್ ನೌಕರರೊಂದಿಗೆ ಕಬನ್ ಪಾರ್ಕ್ ಮಿನ್ಸ್ ಸ್ಕ್ವೇರ್ ಬಳಿ ದೇಶದ ರಕ್ಷಣಾ ವ್ಯವಸ್ಥೆಗೆ ಎಚ್ ಎಎಲ್ ಕೊಡುಗೆ ಏನು ಎಂಬ ವಿಷಯದ ಮೇಲೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಕ್ಟೋಬರ್ 13 ರಂದು ಬೆಂಗಳೂರಿನ ಎಚ್ಎಎಲ್ ಗೆ ಭೇಟಿ ನೀಡಲಿದ್ದಾರೆ.ಆ ಮೂಲಕ ಈಗ ರಫೇಲ್ ಒಪ್ಪಂದಲ್ಲಿ ಎಚ್ಎಎಲ್ ನ್ನು ಯಾಕೆ ತಿರಸ್ಕರಿಸಲಾಯಿತು ಎನ್ನುವುದರ ಬಗ್ಗೆ ಗ್ರೌಂಡ್ ರಿಪೋರ್ಟ್ ಮೂಲಕ ತಿಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.