Central Govt CGHS Scheme: CGHS ಅಡಿಯಲ್ಲಿ, 44 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಮತ್ತು ಪಿಂಚಣಿದಾರರು ಪ್ರಯೋಜನ ಪಡೆಯುತ್ತಿದ್ದಾರೆ. ಕೇಂದ್ರ ಸರ್ಕಾರವು ಹಿಂದಿನ ಕಾಂಗ್ರೆಸ್ ಸರ್ಕಾರದ ಕೆಲವು ನಿರ್ಧಾರದಲ್ಲಿ ಬದಲಾವಣೆ ತಂದಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,050 ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ದೇಶದ ಕೋವಿಡ್ -19 ಪರಿಸ್ಥಿತಿಯ ಕುರಿತು ರಾಜ್ಯ ಆರೋಗ್ಯ ಸಚಿವರೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು.
H3N2 ವೈರಸ್ ಲಕ್ಷಣಗಳು: ಹೆಚ್ಚುತ್ತಿರುವ H3N2 ಪ್ರಕರಣಗಳು ಕೇಂದ್ರ ಸರ್ಕಾರದ ತಲೆನೋವನ್ನು ಹೆಚ್ಚಿಸಿವೆ. ಈ ಬಗ್ಗೆ ಆರೋಗ್ಯ ತಜ್ಞರು ನಿರಂತರವಾಗಿ ಎಚ್ಚರಿಕೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರವು ರಾಜ್ಯಗಳಿಗೆ ಮಹತ್ವದ ಸೂಚನೆ ನೀಡಿದೆ.
ಕೊರೊನಾವೈರಸ್ನ ಬಿಎಫ್.7 ಲಕ್ಷಣಗಳು: ಕೊರೊನಾವೈರಸ್ ಬಗ್ಗೆ ಜನರು ಹೆಚ್ಚು ಜಾಗರೂಕರಾಗಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಅನಗತ್ಯವಾಗಿ ಗುಂಪು ಗುಂಪಾಗಿ ಸಂಚರಿಸದಂತೆ ಜನರಲ್ಲಿ ಅವರು ಮನವಿ ಮಾಡಿದ್ದಾರೆ.
CoronaVirus: ಜಪಾನ್, ಅಮೆರಿಕ ಮತ್ತು ಚೀನಾದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯವು ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಈ ದಿನದಂದು ದೇಶಾದ್ಯಂತ ಒಂದು ಲಕ್ಷ ಯೂನಿಟ್ ರಕ್ತವನ್ನು ಸಂಗ್ರಹಿಸುವ ಯೋಜನೆ ಇದೆ ಮತ್ತು ಕರೋನಾ ವ್ಯಾಕ್ಸಿನೇಷನ್ ಡೇಟಾ ನೈಜ ಸಮಯದಲ್ಲಿ ಮಾಡಿದಂತೆ, ರಕ್ತದಾನದ ಡೇಟಾವನ್ನು ಸೆಪ್ಟೆಂಬರ್ 17 ರಂದು ಲೈವ್ ಅಪ್ಡೇಟ್ ಪಡೆಯಬಹುದು.
Covid-19 Fourth Wave: ದೇಶದಲ್ಲಿ ಮತ್ತೊಮ್ಮೆ ಕೊರೊನಾ ಭೀತಿ ಶುರುವಾಗಿದೆ. ಕೋವಿಡ್ನ ನಾಲ್ಕನೇ ಅಲೆಯ (Covid-19) ಆತಂಕದ ನಡುವೆ, ಆರೋಗ್ಯ ಸಚಿವಾಲಯವು (Health Ministry) ತುರ್ತು ಭೆಯನ್ನು ಕರೆದಿದೆ. ಸಭೆಯಲ್ಲಿ ಕೊರೊನಾ (Coronavirus) ತಡೆಗೆ ಮಹತ್ವದ ಆದೇಶಗಳನ್ನು ನೀಡಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 2005, 2006 ಮತ್ತು 2007 ರಲ್ಲಿ ಜನಿಸಿದ ಎಲ್ಲಾ ಫಲಾನುಭವಿಗಳು 15-18 ವರ್ಷದ ವರ್ಗದವರಲ್ಲಿ ಬರುತ್ತಾರೆ. ಇವರು ಲಸಿಕೆ ಪಡೆಯಲು ಅರ್ಹರು ಎಂದು ಸ್ಪಷ್ಟಪಡಿಸಿದೆ.
Vaccine Certificate: ಮೂಲಗಳ ಪ್ರಕಾರ, ಲಸಿಕೆ ಪ್ರಮಾಣಪತ್ರದಿಂದ ಮೋದಿ ಅವರ ಚಿತ್ರವನ್ನು ತೆಗೆದುಹಾಕಲು ಕೇಂದ್ರ ಆರೋಗ್ಯ ಸಚಿವಾಲಯವು ಕೋವಿನ್ ಪ್ಲಾಟ್ಫಾರ್ಮ್ನಲ್ಲಿ ಅಗತ್ಯ ಫಿಲ್ಟರ್ಗಳನ್ನು ಹಾಕುತ್ತದೆ.
ಪ್ರತಿದಿನ ವರದಿಯಾಗುತ್ತಿರುವ ಹೊಸ ಪ್ರಕರಣಗಳಿಂದಾಗಿ COVID-19 ನ ಓಮಿಕ್ರಾನ್ ರೂಪಾಂತರದ ಭಯವು ಹೆಚ್ಚುತ್ತಿದೆ,11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದುವರೆಗೆ 101 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಹೇಳಿದೆ.
Covid-19 Alert: ಹೆಚ್ಚುತ್ತಿರುವ ಕೊರೊನಾ ವೈರಸ್ ಸಾಪ್ತಾಹಿಕ ಧನಾತ್ಮಕ ದರ ಮತ್ತು ಕೆಲವು ಜಿಲ್ಲೆಗಳಲ್ಲಿ ಸಾವುಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವು ಐದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪತ್ರ ಬರೆದಿದೆ.
Corona Active Cases In India - ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕರೋನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಆರೋಗ್ಯ ಸಚಿವಾಲಯದ (Health Ministry) ಇತ್ತೀಚಿನ ಮಾಹಿತಿಯ ಪ್ರಕಾರ, ಕಳೆದ ಒಂದು ದಿನದಲ್ಲಿ ದೇಶದೊಳಗೆ 43 ಸಾವಿರ 654 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಕೇರಳ, ಮೇಘಾಲಯ, ನಾಗಾಲ್ಯಾಂಡ್, ಒಡಿಶಾ, ತ್ರಿಪುರ ಮತ್ತು ಸಿಕ್ಕಿಂ ಸೇರಿ ಒಟ್ಟು ಒಂಬತ್ತು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ.ಅಷ್ಟೇ ಅಲ್ಲದೆ ಆ ರಾಜ್ಯಗಳಲ್ಲಿ ವೈರಸ್ ಹರಡುವುದನ್ನು ತಡೆಯುವ ಪ್ರಯತ್ನಗಳನ್ನು ಬಲಪಡಿಸುವ ಅಗತ್ಯವನ್ನು ಆರೋಗ್ಯ ಸಚಿವಾಲಯ ಒತ್ತಿಹೇಳಿದೆ.
ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಭಕ್ತರಿಗೆ ದೇವರ ದರ್ಶನ ಪಡೆಯಲು ಹಾಗೂ ಪ್ರಾರ್ಥನೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ ತೀರ್ಥ-ಪ್ರಸಾದ ವಿತರಣೆ ಸೇರಿದಂತೆ ಇನ್ನಿತರ ಚಟುವಟಿಗಳಿಗೆ ನಿರ್ಬಂಧವಿರಲಿದೆ.
ಉದ್ದೇಶಿತ ಕೋವಿಡ್ ಪ್ರತಿಕ್ರಿಯೆ ಮತ್ತು ನಿರ್ವಹಣೆಯನ್ನು ಕೈಗೊಳ್ಳುವ ಪ್ರಯತ್ನಗಳಲ್ಲಿ ತಂಡಗಳು ರಾಜ್ಯಗಳನ್ನು ಬೆಂಬಲಿಸಲಿವೆ ಮತ್ತು ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.