Stop Hindi Imposition: ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತವು ವಿಭಿನ್ನ ಸಂಸ್ಕೃತಿಗಳು ಮತ್ತು ಭಾಷೆಗಳ ವೈವಿಧ್ಯಮಯ ದೇಶವೆಂಬುದು ಇಡೀ ಜಗತ್ತಿಗೆ ಗೊತ್ತಾಗಿದೆ. ಭಾರತವೆಂದರೆ ಕೇವಲ ಹಿಂದಿಯಲ್ಲ. ಭಾರತ ಕೇವಲ ಬಾಲಿವುಡ್ ಅಲ್ಲ. ಭಾರತವೆಂದರೆ ಹಿಂದಿಯೆಂಬ ರೂಢಿಗತ ಚಿಂತನೆಯೊಂದು ಆಲಸಿತನ ಎಂದು ನಟಿ ರಮ್ಯಾ ಹೇಳಿದ್ದಾರೆ
HD Kumaraswamy Slams BJP Government: ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ ಎಂದು ಕುಮಾರಸ್ವಾಮಿ ಆಕ್ರೋಶ.
ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.
ಕೇಂದ್ರ ಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
#ಕರ್ನಾಟಕದಲ್ಲಿಕನ್ನಡವೇಮೊದಲು: ಕೇಂದ್ರ @BJP4India ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
'ಒಂದು ದೇಶ, ಒಂದು ಭಾಷೆ' ಘೋಷಣೆಗೆ ಬೆಂಬಲ ವ್ಯಕ್ತಪಡಿಸಿದ ಶಿವಸೇನೆಯ ನಾಯಕ ಸಂಜಯ್ ರೌತ್ ಭಾರತದಾದ್ಯಂತ ಹಿಂದಿ ಮಾತನಾಡುತ್ತಾರೆ ಮತ್ತು ಸ್ವೀಕಾರಾರ್ಹತೆಯನ್ನು ಹೊಂದಿದ್ದಾರೆ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರು ಎಲ್ಲಾ ರಾಜ್ಯಗಳಲ್ಲಿ ಒಂದೇ ಭಾಷೆ ಇರಬೇಕೆಂಬ ಸವಾಲನ್ನು ಸ್ವೀಕರಿಸಬೇಕು ಎಂದು ಹೇಳಿದರು.
ಹಿಂದಿ ಹೇರಿಕೆ ವಿಚಾರವಾಗಿ ಬಿಜೆಪಿ ಸರ್ಕಾರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಬಿಜೆಪಿ ನಾಯಕರೇ ಅಮಿತ್ ಶಾ ಗುಲಾಮರಾಗಬೇಡಿ, ಕನ್ನಡ ತಾಯಿಯ ಮಕ್ಕಳಾಗಿ ಎಂದು ಹೇಳಿಕೆ ನೀಡಿದ್ದರು.
ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.
ಒಂದು ಕಡೆ ಹಿಂದಿ ರಾಷ್ಟ್ರಭಾಷೆ ಹೌದೋ..? ಅಲ್ಲವೋ..? ಎಂಬ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿದ್ದರೆ, ಮತ್ತೊಂದು ಕಡೆ ಬಾಲಿವುಡ್ನ ಸ್ಟಾರ್ ನಟರ ವಿರುದ್ಧ ಉತ್ತರ ಭಾರತದ ಅಭಿಮಾನಿಗಳೇ ಗರಂ ಆಗಿದ್ದಾರೆ. ಈ ರೀತಿ ಫ್ಯಾನ್ಸ್ ರೊಚ್ಚಿಗೇಳಲು ಕಾರಣ ಪಾನ್ ಮಸಾಲ ಅರ್ಥಾತ್ ಗುಟ್ಕಾ ಜಾಹೀರಾತು. ಅಜಯ್ ದೇವಗನ್, ಅಕ್ಷಯ್ ಕುಮಾರ್ ಹಾಗೂ ಶಾರುಖ್ ಖಾನ್ ಒಟ್ಟಾಗಿ ನಟಿಸಿರುವ ಪಾನ್ ಮಸಾಲ ಒಂದರ ಖಾಸಗಿ ಜಾಹೀರಾತು ಕಿಡಿ ಹೊತ್ತಿಸಿದೆ.
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಕ್ಕೆ ಹಿಂದಿಯಲ್ಲಿ ಟ್ವೀಟ್ ಮಾಡುವುದರ ಮೂಲಕ ಪ್ರತಿಕ್ರಿಯಿದ್ದ ಬಾಲಿವುಡ್ ನಟ ಅಜಯ್ ದೇವಗನ್ ನಡೆಗೆ ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ,ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸುದೀಪ್ ಹೇಳಿದ್ದರಲ್ಲಿ ಸರಿ ಇದೆ ಎಂದು ಹೇಳುವ ಮೂಲಕ ಈಗ ಕುಮಾರಸ್ವಾಮಿ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.