ಬಹಳ ದಿನಗಳ ನಂತರ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಂತರಾಷ್ಟ್ರೀಯ ಕ್ರಿಕೇಟ್ ಪಂದ್ಯ ನಡೆಯಲಿದೆ. ಇದರಿಂದ ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಮನೆ ಮಾಡಿದೆ ಸುಮಾರು 3 ವರ್ಷಗಳ ಬಳಿಕ ಹುಬ್ಬಳ್ಳಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ಹಂಚಿಕೆಯಾಗಿದೆ.
ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ರೂ.31.40 ಕೋಟಿ ವೆಚ್ಚದಲ್ಲಿ ಪೂರತಣಗೊಂಡಿರುವ ನಗರ ಪ್ರದೇಶದ ಬಡಜನರಿಗೆ ಮೂಲಭೂತ ಸೌಕರ್ಯ ಯೋಜನೆ ಪ್ಯಾಕೇಜ್- 3 ಕಾಮಗಾರಿಗಳ ಉದ್ಘಾಟನೆ ಹಾಗೂ 2.80 ಕೋಟಿ ರೂ.ವೆಚ್ಚದ ವಿದ್ಯುತ್ ಚಿತಾಗಾರ ನಿರ್ಮಾಣ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮವು ಜೂ.26 ರಂದು ಮಧ್ಯಾಹ್ನ 3:30 ಕ್ಕೆ ಘಂಟಿಕೇರಿಯ ಸರ್ಕಾರಿ ಶಾಸಕರ ಮಾದರಿ ಶಾಲೆ ನಂ.5 ಮತ್ತು ಕನ್ನಡ ಹೆಣ್ಣುಮಕ್ಕಳ ಶಾಲೆ ನಂ.1ರಲ್ಲಿ ನಡೆಯಲಿದೆ.
ರಾಜ್ಯಸಭೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮಗೆ ಬಿಜೆಪಿ-ಜೆಡಿಎಸ್ ಆತ್ಮ ಸಾಕ್ಷಿ ಮತ ಬರುತ್ತವೆ ಎಂದಿದ್ದಾರೆ. ಇದೇ ವೇಳೆ ಜೆಡಿಎಸ್ ನಮ್ಮನ್ನು ನೋಡಿ ಹಾಕಬಾರದಿತ್ತು ಎಂದು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21 ನೇ ಅವಧಿಯ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳಿಗೆ ಮೇ.28 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿಗಳೂ ಆಗಿರುವ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.
ಈತ ಕಲಿತದ್ದು 10ನೆಯ ತರಗತಿ. ಆದ್ರೆ ಈತನಿಗೆ ಒಲಿದಿದ್ದು ಪದ್ಮಶ್ರೀ ಪ್ರಶಸ್ತಿ. ರೈತನಾಗಿ ವಿಶೇಷ ತಂತ್ರಜ್ಞಾನದ ಮೂಲಕವೇ ಹೊಸ ಹೊಸ ಆವಿಷ್ಕಾರ ಮಾಡಿದಕ್ಕೆ ಸದ್ಯ ಪದ್ಮಶ್ರೀ ಹುಡುಕಿಕೊಂಡು ಬಂದಿದೆ. ಇದೀಗ ಪದ್ಮಶ್ರೀ ಪಡೆಯಲಿರುವ ಆತನ ಸಾಧನೆ ಎಲ್ಲರ ಮೆಚ್ಚುಗೆ ಗೆ ಪಾತ್ರವಾಗಿದೆ.
ಹುಬ್ಬಳ್ಳಿಯ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ವೇದಾಂತ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ಕಾರ್ಯಚಟುವಟಿಕೆಯ ಅಡಿ 100 ಹಾಸಿಗೆ (80 ಆಕ್ಸಿಜನ್ ಬೆಡ್, 10 ಆಕ್ಸಿಜನ್ + ICU, 10 ಆಕ್ಸಿಜನ್ +ICU + ವೆಂಟಿಲೇಟರ್ ಬೆಡ್) ಸಾಮರ್ಥ್ಯದ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ 'ವೇದಾಂತ ಕೇರ್ಸ್ ಕೋವಿಡ್ ಫೀಲ್ಡ್ ಆಸ್ಪತ್ರೆ'ಯನ್ನು ಲೋಕಾರ್ಪಣೆ ಮಾಡಲಾಗಿದೆ.
ಉತ್ತರ ಕರ್ನಾಟಕದಲ್ಲೇ ಮೊಟ್ಟ ಮೊದಲ ಅತ್ಯಾಧುನಿಕ ಫ್ಲೈಓವರ್ ನಿರ್ಮಾಣಗೊಳ್ಳಲಿದೆ. ಏಳು ರಸ್ತೆಗಳು ಬಂದು ಸೇರುವ ಚೆನ್ನಮ್ಮ ವೃತ್ತದಲ್ಲಿ ನಾಲ್ಕು ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸಿ ಪ್ರತಿ ರಸ್ತೆಯಲ್ಲಿ ಸುಮಾರು ಒಂದು ಕಿ.ಮೀ ದೂರದವರೆಗೆ ಫ್ಲೈಓವರ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ವಣಕುದುರೆ ಶಾಂತರಾಮ್ (ವಿ.ಶಾಂತಾರಾಂ) ಅಂದರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ, ಭಾರತೀಯ ಚಿತ್ರರಂಗದಲ್ಲಿ ಮಹಾನ್ ನಿರ್ದೇಶಕ, ನಿರ್ಮಾಪಕ, ನಟರಾಗಿ ವಿಶಿಷ್ಟ ಛಾಪು ಮೂಡಿಸಿದವರು ಶಾಂತಾರಾಂ. ಟಾಕಿ ಸಿನಿಮಾದಿಂದ ಆರಂಭವಾದ ಅವರ ಸಿನಿ ಪಯಣವು ಮುಂದೆ 60, 70 ರ ದಶಕದವರೆಗೆ ಸಾಗಿತು. ಅವರ ಝಣಕ್ ಝಣಕ್ ಪ್ಹಾಯಲ್ ಭಾಜೆ,ಗೀತ್ ಗಾಯೋ ಪತ್ತರೋನೆ,ಅಮರ್ ಭೂಪಾಲಿ, ನವರಂಗ್,ಡಾ. ಕೊಟ್ನಿಸ್ ಕೀ ಅಮರ್ ಕಹಾನಿ,ಯಂತಹ ಚಿತ್ರಗಳು ಅವರಿಗೆ ಸಾಕಷ್ಟು ಹೆಸರನ್ನು ತಂದುಕೊಟ್ಟವು.
ಹುಬ್ಬಳ್ಳಿಯ ದುರ್ಗದ ಬೈಲಿನ ನಂಟು:
ರಾಜ್ಯದ ಪ್ರಮುಖ ರೈಲು ನಿಲ್ದಾಣವಾದ ಹುಬ್ಬಳ್ಳಿಯ ರೈಲು ನಿಲ್ದಾಣಕ್ಕೆ ಶ್ರೀಸಿದ್ದಾರೂಢ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡಬೇಕೆಂಬ ಬಹುದಿನಗಳ ಬೇಡಿಕೆಗೆ ಕೇಂದ್ರ ಸರ್ಕಾರವು ಈಗ ಸ್ಪಂದಿಸಿದ್ದು. ಈ ವಿಚಾರವಾಗಿ ಈಗ ಕೇಂದ್ರ ಸರ್ಕಾರವು ರಾಜ್ಯ ಕಂದಾಯ ಇಲಾಖೆ ಪತ್ರವನ್ನು ರವಾನಿಸಿದೆ.
ಕೋವಿಡ್ ಸಂದರ್ಭದಲ್ಲಿ ಕಿಮ್ಸ್ನ ಎಲ್ಲಾ ವೈದ್ಯರು ರೋಗಿಗಳ ಬಗೆಗೆ ಬಹಳ ಮುತುವರ್ಜಿ ವಹಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಗಂಭೀರ ಪ್ರಕರಣಗಳನ್ನು ಸಹ ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಗುಣಪಡಿಸುವ ಮೂಲಕ ವೈದ್ಯಕೀಯ ವೃತ್ತಿ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಹಾಗೂ ಕಿಮ್ಸ್ ಸಂಸ್ಥೆಯನ್ನು ನಾಡಿಗೆ ಸಂಜೀವಿನಿಯಾಗುವಂತೆ ಮಾದರಿಯಾಗಿ ರೂಪಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಷಿ ಹೇಳಿದರು.
ಹುಬ್ಬಳ್ಳಿಯ ಕಿಮ್ಸ್ ವೈದ್ಯರು, ಅರೆವೈದ್ಯಕೀಯ ,ನರ್ಸಿಂಗ್ ಹಾಗೂ ಸಹಾಯಕ ಸಿಬ್ಬಂದಿ ತಂಡ ಕೊರೊನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ ಸರ್ಕಾರದ ವೈದ್ಯಕೀಯ ಸಂಸ್ಥೆಯೊಂದರ ಬಗ್ಗೆ ಜನಸಾಮಾನ್ಯರಲ್ಲಿದ್ದ ಭಾವನೆಗಳನ್ನೇ ಬದಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.