Summer Temperature - ಮುಂದಿನ 4 ರಿಂದ 5 ದಿನಗಳಲ್ಲಿ ಬಿಸಿಗಾಳಿ ಬೀಸುವ (Heat Wave) ಸಾಧ್ಯತೆ ಇದೆ. ಸದ್ಯಕ್ಕೆ ಮಳೆಯಾಗುವ ಲಕ್ಷಣಗಳು ಇಲ್ಲ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಸದ್ಯಕ್ಕೆ ಹವಾಮಾನ ಶುಷ್ಕತೆಯಿಂದ ಕೂಡಿರಲಿದೆ.
ದೇಶದ ಪೂರ್ವ ಕರಾವಳಿಯಲ್ಲಿ ಮತ್ತೆ ಚಂಡಮಾರುತದ ಅಪಾಯ ಎದುರಾಗಿದೆ. ಜವಾದ್ ಚಂಡಮಾರುತವು ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ಮತ್ತು ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಬಳಿ ತಲುಪುವ ನಿರೀಕ್ಷೆಯಿದೆ.
IMD Alert For Heavy Rainfall: ಮಳೆಯಿಂದಾಗಿ ತಮಿಳುನಾಡಿನಲ್ಲಿ ಇದುವರೆಗೆ 8 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಂತಹ ಪರಿಸ್ಥಿತಿ ಮುಂದುವರಿದಿದೆ. ಭಾರೀ ಮಳೆಯಿಂದಾಗಿ ಜನ ಪರದಾಡುವಂತಾಗಿದೆ.
Weather Alert Latest Update: ಹವಾಮಾನ ಇಲಾಖೆಯ ಮುನ್ಸೂಚನೆ ಮತ್ತು ಎಚ್ಚರಿಕೆಯ ಪ್ರಕಾರ, ಮುಂದಿನ 5 ದಿನಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ, ಆಂಧ್ರಪ್ರದೇಶ, ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.
Heavy Rain: ದೇಶದ ರಾಷ್ಟ್ರೀಯ ರಾಜಧಾನಿ ದೆಹಲಿ ಸೇರಿದಂತೆ ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಅವಾಂತರವನ್ನುಂಟು ಮಾಡಿದೆ. ಭಾನುವಾರ ಬೆಳಗ್ಗೆಯಿಂದ ಈ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ರಾಜಧಾನಿಯ ಹಲವು ರಸ್ತೆಗಳು ಮಳೆಯಿಂದಾಗಿ ಮುಳುಗಿವೆ.
ಭಾನುವಾರದಂದು ಕೇರಳದ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕೇರಳದ ಇಡುಕ್ಕಿ, ತ್ರಿಶ್ಶುರ್ ಮತ್ತು ಪಾಲಕ್ಕಡ್ ಜಿಲ್ಲೆಗಳು ಈ ಮಳೆಗೆ ಆಹುತಿಯಾಗಲಿವೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.