ಭಾನುವಾರ (ಅಕ್ಟೋಬರ್ 23) ನಡೆಯಲಿರುವ T20 ವಿಶ್ವಕಪ್ 2022 ರ ಸೂಪರ್ 12 ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು ಎದುರಿಸಲಿದೆ. ಮೆಲ್ಬೋರ್ನ್ನ ಎಂಸಿಜಿ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಇನ್ನು ಈ ಪಂದ್ಯ ಭಾರತೀಯ ಕಾಲಮಾನ 1:30 ಕ್ಕೆ ಪ್ರಾರಂಭವಾಗಲಿದೆ.
ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಪತ್ರಿಕಾಗೋಷ್ಠಿಯಲ್ಲಿ ಫಖರ್ ಜಮಾನ್ ಭಾರತ ವಿರುದ್ಧದ ಮೊದಲ ಪಂದ್ಯದಲ್ಲಿ ಆಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸದ್ಯ ಬೇರೊಬ್ಬರನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಕಳೆದ ವಿಶ್ವಕಪ್ನಲ್ಲಿ ಅನುಭವಿಸಿದ ಕೆಟ್ಟ ಸೋಲಿಗೆ ಸೇಡು ತೀರಿಸಿಕೊಳ್ಳಲು ಇದೀಗ ಟೀಂ ಇಂಡಿಯಾ ರೆಡಿಯಾಗಿದೆ. ಇನ್ನೊಂದೆಡೆ ಕಳೆದ ಏಷ್ಯಾಕಪ್ನಲ್ಲಿ ಭಾರತದ ವಿರುದ್ಧ ನೀಡಿದ ಉತ್ತಮ ಪ್ರದರ್ಶನವನ್ನೇ ಮುಂದುವರಿಸಲು ಪಾಕ್ ಪಡೆ ಪ್ಲ್ಯಾನ್ ನಡೆಸಿದೆ,
ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಮೂರು ಪಂದ್ಯಗಳ ODI ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನುಭವಿಸಬೇಕಾಗಿತ್ತು, ಆದರೆ ನಂತರದ 2 ಪಂದ್ಯಗಳನ್ನು ಗೆದ್ದು ಇತಿಹಾಸ ನಿರ್ಮಿಸಿದೆ. 2010ರ ನಂತರ ಮೊದಲ ಬಾರಿಗೆ ಭಾರತದಲ್ಲಿ ನಡೆದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಈ ಸರಣಿಯಲ್ಲಿ ಟೀಂ ಇಂಡಿಯಾ ಗೆಲ್ಲಲು ಈ 5 ಆಟಗಾರರು ಕಾರಣರಾಗಿದ್ದಾರೆ.
ಆದರೆ ಅರ್ಷದೀಪ್ ಸಿಂಗ್ ಬುಮ್ರಾ ಅನುಪಸ್ಥಿತಿಯನ್ನು ತುಂಬುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲೂ ಭರ್ಜರಿ ಪ್ರದರ್ಶನ ನೀಡಿದ್ದ ಅರ್ಷದೀಪ್ ಮೂರು ವಿಕೆಟ್ ಕಬಳಿಸಿದ್ದರು. ಇದೇ ಅಬ್ಬರ ಎರಡನೇ ಪಂದ್ಯದಲ್ಲೂ ಮುಂದುವರೆದರೆ ಭಾರತ ಆಸ್ಟ್ರೇಲಿಯಾ ಬಳಿಕ ದಕ್ಷಿಣ ಆಫ್ರಿಕಾ ಸರಣಿಯನ್ನು ಗೆಲ್ಲುವ ಸಾಧ್ಯತೆಯಿದೆ.
ಟೀಂ ಇಂಡಿಯಾ ಭಾರತದಲ್ಲಿ ಕಳೆದ ನಡೆದ ಹತ್ತು ಟಿ20 ಸರಣಿಗಳಲ್ಲಿ ಸಂಪೂರ್ಣವಾಗಿ ಗೆದ್ದಿದೆ. ಆದರೆ ದಕ್ಷಿಣ ಆಫ್ರಿಕಾವನ್ನು ಸೋಲಿಸುವುದು ಅವರಿಗೆ ಸುಲಭದ ಮಾತಲ್ಲ. ತವರಿನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಒಮ್ಮೆಯೂ ಸೋಲಿಸಿಲ್ಲ. ಒಂದು ವೇಳೆ ಟೀಂ ಇಂಡಿಯಾ ಈ ಸರಣಿಯನ್ನು ಗೆಲ್ಲಬೇಕಾದರೆ ಇತಿಹಾಸವೇ ಬದಲಾಗಬೇಕು.
ಹರ್ಮನ್ಪ್ರೀತ್ ಕೌರ್ ನೇತೃತ್ವದ ತಂಡವು ಜೂಲನ್ಗೆ ಸೂಕ್ತವಾದ ವಿದಾಯ ನೀಡಲು ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲು ಪ್ರಯತ್ನಿಸುತ್ತಿತ್ತು. ಇದೀ ಆ ಪ್ರಯತ್ನ ಯಶಸ್ವಿಯಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 45.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತ್ತು.
ಇಂಗ್ಲೆಂಡ್ನಲ್ಲಿ ಇತಿಹಾಸ ಸೃಷ್ಟಿಸಿರುವ ಟೀಂ ಇಂಡಿಯಾ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಗೆಲುವು ಟೀಂ ಇಂಡಿಯಾದ ಆಟಗಾರರಿಗೆ ಎಷ್ಟು ವಿಶೇಷವಾಗಿತ್ತು ಎಂಬುದನ್ನು ಸಂಭ್ರಮಾಚರಣೆಯ ಚಿತ್ರಗಳಿಂದಲೇ ತಿಳಿಯಬಹುದು. ಟೀಂ ಇಂಡಿಯಾ ಈ ಸರಣಿ ವಿಜಯವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿಕೊಂಡಿದ್ದು, ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.
ಮೂರನೇ ಏಕದಿನ ಪಂದ್ಯ ರೋಹಿತ್ ಶರ್ಮಾ ಅವರಿಗೆ ಅಗ್ನಿ ಪರೀಕ್ಷೆ ಎಂದರೆ ತಪ್ಪಾಗಲ್ಲ. ಸರಣಿ ಗೆಲ್ಲಬೇಕಾದರೆ ಭಾರತ ತಂಡ ಈ ಪಂದ್ಯವನ್ನು ಹೇಗಾದರೂ ಗೆಲ್ಲಲೇಬೇಕು. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ನಲ್ಲಿ ಭಾರತ ತಂಡದ ದಾಖಲೆ ಅತ್ಯಂತ ಕಳಪೆಯಾಗಿದೆ. ಈ ಮೈದಾನದಲ್ಲಿ ಟೀಂ ಇಂಡಿಯಾ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಮೂರು ಮಾತ್ರ ಗೆದ್ದಿದೆ. ಕಳೆದ 39 ವರ್ಷಗಳಲ್ಲಿ ಟೀಂ ಇಂಡಿಯಾ ಇಲ್ಲಿ ಒಂದೇ ಒಂದು ಏಕದಿನ ಪಂದ್ಯವನ್ನು ಗೆದ್ದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.