ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಗ್ನಿಪಥ ಯೋಜನೆಗೆ ಸಂಬಂಧಿಸಿದಂತೆ ಮೂರು ಸೇನಾ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದರು. ಅದರ ನಂತರ ಇದೀಗ ಸೇನಾ ಅಧಿಕಾರಿಗಳು ಯೋಜನೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಜೂನ್ 20ರ ಬೆಳಗ್ಗೆ 10ಕ್ಕೆ ಬೆಳಗಾವಿ ಕೋಟೆ ಬಳಿ ಜಮಾವಣೆಗೊಳ್ಳುವಂತೆ ಕರೆಯ ವಾಟ್ಸಪ್ ಮೂಲಕ ನೂರಾರು ಯುವಕರಿಂದ ಅನಾಮಧೇಯ ಸಂದೇಶ ಒಂದು ಹರಿದಾಡುತ್ತಿದೆ. ಇದು ಸಧ್ಯ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
Srinagar Encounter: ಕಾಶ್ಮೀರ ಕಣಿವೆಯಲ್ಲಿ ಗುರಿ ಹತ್ಯೆ ಆರಂಭವಾದ ನಂತರ, ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆ ಹಚ್ಚಲು ಮತ್ತು ನಿರ್ಮೂಲನೆ ಮಾಡಲು ಪ್ರಯತ್ನಿಸುತ್ತಿವೆ. ಸೋಮವಾರ ರಾತ್ರಿ ಅವರು ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಡಾಖ್ನ ತುರ್ತುಕ್ ಸೆಕ್ಟರ್ನಲ್ಲಿ ವಾಹನ ಅಪಘಾತದಲ್ಲಿ ಭಾರತೀಯ ಸೇನೆಯ ಏಳು ಸೈನಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಶುಕ್ರವಾರದಂದು ರಸ್ತೆಯಿಂದ ಸ್ಕಿಡ್ ಆಗಿ ಲಡಾಖ್ನ ಶ್ಯೋಕ್ ನದಿಗೆ ಬಿದ್ದಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
Baramulla Attack in Jammu Kashmir: ಮಂಗಳವಾರ ರಾತ್ರಿ ಬುರ್ಖಾ ಧರಿಸಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ದೀವಾನ್ ಬಾಗ್ ಪ್ರದೇಶದಲ್ಲಿ ಹೊಸದಾಗಿ ತೆರೆಯಲಾದ ವೈನ್ ಶಾಪ್ನಲ್ಲಿ ಈ ಘಟನೆ ನಡೆದಿದೆ.
ಪ್ರಸ್ತುತ ಜನರಲ್ ಎಂಎಂ ನರವಾಣೆ ಅವರು ಸೇವೆಯಿಂದ ನಿವೃತ್ತರಾದ ನಂತರ ಜನರಲ್ ಮನೋಜ್ ಪಾಂಡೆ ಅವರು ಸೇನಾ ಸಿಬ್ಬಂದಿಯ 29 ನೇ ಮುಖ್ಯಸ್ಥರಾಗಿ ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಜನರಲ್ ಪಾಂಡೆ, ಕಾರ್ಪ್ಸ್ ಆಫ್ ಇಂಜಿನಿಯರ್ಸ್ನ ಮೊದಲ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಪುಲ್ವಾಮಾ ಎನ್ಕೌಂಟರ್: ಬುಧವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮತ್ತೊಮ್ಮೆ ಎನ್ಕೌಂಟರ್ ನಡೆದಿದೆ. ಈ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ.
ಕುಲ್ಗಾಂ ಜಿಲ್ಲೆಯ ರೆಡ್ವಾನಿ ಬಾಲಾ ಪ್ರದೇಶದ ನಿವಾಸಿಯಾದ ನಿಸಾರ್ ದಾರ್, ಸಿರಹ್ಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದಾನೆ ಎಂದು ಕಾಶ್ಮೀರ ವಲಯ ಐಜಿಪಿ ಸ್ಪಷ್ಟಪಡಿಸಿದ್ದಾರೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರು ಪಾಕ್ ಪ್ರಧಾನಿಯನ್ನು ಶ್ಲಾಘಿಸುವ ಚರ್ಚೆಗಳ ನಡುವೆ ಭಾರತವು ತನ್ನ ಅನೇಕ ವಿದೇಶಾಂಗ ನೀತಿ ಉಪಕ್ರಮಗಳಿಗಾಗಿ ವಿವಿಧ ವಲಯಗಳಿಂದ ಪ್ರಶಂಸೆ ಪಡೆದಿದೆ ಎಂದು ಸೋಮವಾರ ಹೇಳಿದ್ದಾರೆ.
ರಷ್ಯಾ ವಿಶ್ವದ ಎರಡನೇ ಅತ್ಯಂತ ಶಕ್ತಿಶಾಲಿ ಮಿಲಿಟರಿ(Worlds Most Powerful Militaries)ಯನ್ನು ಹೊಂದಿದೆ. ಆದರೆ ಈ ವಿಷಯದಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಗ್ಲೋಬಲ್ ಫೈರ್ಪವರ್ ಬಿಡುಗಡೆ ಮಾಡಿರುವ ದತ್ತಾಂಶವನ್ನು ಉಲ್ಲೇಖಿಸಿ ವರದಿಯು ಅಮೆರಿಕದ ಮಿಲಿಟರಿ ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿಯಾಗಿದೆ. ವಾಸ್ತವವಾಗಿ, ಗ್ಲೋಬಲ್ ಫೈರ್ಪವರ್ ಪಟ್ಟಿಯನ್ನು ಸಿದ್ಧಪಡಿಸಿದೆ, ಇದರಲ್ಲಿ ದೇಶಗಳು ತಮ್ಮ ಮಿಲಿಟರಿ ಶಕ್ತಿಯ ಆಧಾರದ ಮೇಲೆ ಸ್ಥಾನ ಪಡೆದಿವೆ.
Nagaland Civilians Killing: ನಾಗಾಲ್ಯಾಂಡ್ನ ಇಂಡೋ-ಮ್ಯಾನ್ಮಾರ್ ಗಡಿ ಜಿಲ್ಲೆಯಲ್ಲಿ ಶನಿವಾರ ಉಗ್ರರ ವಿರುದ್ಧದ ಕಾರ್ಯಾಚರಣೆಯ ವೇಳೆ ಮಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕೂಲಿ ಕಾರ್ಮಿಕರನ್ನು ಉಗ್ರರು ಎಂದು ತಪ್ಪಾಗಿ ಭಾವಿಸಿ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆಯಲ್ಲಿ ಸುಮಾರು 13 ಮಂದಿ ನಾಗರಿಕರು ಜೀವ ಕಳೆದುಕೊಂಡಿದ್ದಾರೆ.
ಹಲವು ದೇಶಗಳ ಸೇನಾ ಸಮವಸ್ತ್ರಗಳ ಬಗ್ಗೆ ವ್ಯಾಪಕ ಚರ್ಚೆ ಮತ್ತು ವಿಶ್ಲೇಷಣೆಯ ನಂತರ ಈ ಹೊಸ ಸಮವಸ್ತ್ರವನ್ನು ಅಂತಿಮಗೊಳಿಸಲಾಗಿದೆ. ಹೊಸ ಸಮವಸ್ತ್ರವು ಹೆಚ್ಚು ಬಾಳಿಕೆ ಬರುವುದರ ಜೊತೆಗೆ ಬೇಸಿಗೆ ಮತ್ತು ಚಳಿಗಾಲ ಹೀಗೆ ಎಲ್ಲ ಋತುಗಳಲ್ಲಿಯೂ ಆರಾಮದಾಯಕವಾಗಿರುತ್ತದೆ ಎನ್ನಲಾಗಿದೆ.
Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತುಲ್ರಾನ್ ಹಳ್ಳಿಯಲ್ಲಿ ಭದ್ರತಾ ಪಡೆ ಮೂವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ)-ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಭಯೋತ್ಪಾದಕರನ್ನು ಹೊಡೆದುರುಳಿಸಿದ್ದು, ಅವರಿಂದ ಅಪರಾಧ ವಸ್ತುಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
Anti Terror Operation: ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನೆ (Indian Army) ಭಾರಿ ಹಿನ್ನಡೆ ಅನುಭವಿಸಿದೆ. ಸೋಮವಾರ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್ (Poonch) ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ JCO ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ.
Anantnag Encounter: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ, ಸೇನಾ ಸಿಬ್ಬಂದಿಯಿಂದ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Indian Army Released Video Of Terrorist Caught From Uri: ಸರ್ಜಿಕಲ್ ಸ್ಟ್ರೈಕ್ ನ 5ನೇ ವರ್ಚಾಚರಣೆಯ ಸಂದರ್ಭದಲ್ಲಿ ಭಾರತೀಯ ಸೇನೆ ಉರಿ ದಾಳಿಯಂತಹ ಮತ್ತೊಂದು ದಾಳಿಯ ಬಣ್ಣ ಬಯಲು ಮಾಡಿರುವುದಾಗಿ ಹೇಳಿಕೊಂಡಿದೆ.
ವೆಂಬರ್ 2021 ರಲ್ಲಿ ಈ ವರ್ಷ ಎನ್ಡಿಎ ಪರೀಕ್ಷೆಗೆ ಹಾಜರಾಗಲು ಮಹಿಳೆಯರಿಗೆ ಅವಕಾಶ ನೀಡಿದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಯರಿಗೆ ಪರೀಕ್ಷೆಗೆ ಹಾಜರಾಗುವ ಹಕ್ಕನ್ನು ನಿರಾಕರಿಸಲು ಅವರು ಬಯಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.