ಪ್ರಪಂಚದಾದ್ಯಂತ ಜನರು ಆನ್ಲೈನ್ ಮೂಲಕ ಬಹುತೇಕ ಕೆಲಸಗಳನ್ನು ಮಾಡುತ್ತಿದ್ದಾರೆ, ಅದು ಶಿಕ್ಷಣವಾಗಿರಲಿ ಅಥವಾ ಇನ್ನಿತರ ಸಾಫ್ಟವೇರ್ ಕೆಲಸವಾಗಿರಲಿ ಇಂಟರ್ನೆಟ್ ಎನ್ನುವುದು ಈಗ ಜೀವನದ ಅವಿಭಾಜ್ಯ ಅಂಗವಾಗಿದೆ.
ಜಮ್ಮು ಮತ್ತು ಕಾಶ್ಮೀರದ ಮಾಲುರಾ ಪರಿಂಪೋರಾ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಪಾಕಿಸ್ತಾನದ ಭಯೋತ್ಪಾದಕ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಕೊಂದಿವೆ. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬರು ಲಷ್ಕರ್-ಎ-ತೈಬಾ ಕಮಾಂಡರ್ ಎಂದು ತಿಳಿದುಬಂದಿದೆ.
ವಾಯುಪಡೆಯ ನೆಲೆಯ ಮೇಲೆ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ ಜಮ್ಮುವಿನಲ್ಲಿ ಕಚ್ಚಾ ಬಾಂಬ್ ಪತ್ತೆಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಭಾನುವಾರ ತಿಳಿಸಿದ್ದಾರೆ.ಭಯೋತ್ಪಾದಕ ಕೃತ್ಯ ಎಂದು ತಿಳಿದು ಬಂದಿರುವ ಹಿನ್ನಲೆಯಲ್ಲಿ ಈಗ ತನಿಖೆಯನ್ನು ತೀವ್ರಗೊಳಿಸಿದ್ದಾರೆ ಎನ್ನಲಾಗಿದೆ.
Shopian Encounter: ಶೋಪಿಯಾನ್ನ ಕಿನಿಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮುಖಾಮುಖಿ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Shopian-Tral encounter : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಮುಖಾಮುಖಿ ನಡೆಯುತ್ತಿದ್ದು, ಇದರಲ್ಲಿ ಭದ್ರತಾ ಪಡೆಗಳಿಂದ 5 ಭಯೋತ್ಪಾದಕರು ಹತರಾಗಿದ್ದಾರೆ.
ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಜಮ್ಮು ಮತ್ತು ಕಾಶ್ಮೀರ ವಿವಾದ ಬಗೆಹರಿಸುವುದು ನಿರ್ಣಾಯಕ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.ಪಾಕಿಸ್ತಾನ ದಿನದಂದು ಶುಭಾಶಯ ಕೋರಿ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ನೀಡಿದ ಉತ್ತರದಲ್ಲಿ ಖಾನ್ ಈ ವಿಷಯ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ (Jammu & Kashmir) ಮಾಜಿ ಮುಖ್ಯಮಂತ್ರಿ ಫಾರುಕ್ ಅಬ್ದುಲ್ಲಾ ಕೊವಿಡ್ -19 (Farooq Abdullah Covid-19 Positive) ಸೋಂಕಿಗೆ ಗುರಿಯಾಗಿದ್ದಾರೆ. ಈ ಕುರಿತು ಫಾರೂಕ್ ಅಬ್ದುಲ್ಲಾ ಅವರ ಪುತ್ರ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ಕಾಶ್ಮೀರ ವಲಯ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಶೋಪಿಯಾನ್ ಜಿಲ್ಲೆಯ ಮುನಿಹಾಲ್ ಪ್ರದೇಶದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಮುಖಾಮುಖಿಯಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.
Amarnath Yatra 2021:ಈ ಪವಿತ್ರ ಯಾತ್ರೆಗಾಗಿ 37 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ ಮತ್ತು ಯಸ್ ಬ್ಯಾಂಕ್ನ 446 ಆಯ್ದ ಶಾಖೆಗಳಲ್ಲಿ ನೋಂದಣಿ ಪ್ರಕ್ರಿಯೆ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ.
ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಇಡಿ ಸಮನ್ಸ್ ಕಳುಹಿಸಿದೆ.ಮಾರ್ಚ್ 15 ರಂದು ಮುಫ್ತಿ ಅವರನ್ನು ಏಜೆನ್ಸಿಯ ಮುಂದೆ ಹಾಜರಾಗುವಂತೆ ಕೋರಲಾಗಿದೆ.
ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಅಪರೂಪದ ದೂರವಾಣಿ ಕರೆ ಜಮ್ಮು ಮತ್ತು ಕಾಶ್ಮೀರದ ಉಭಯ ದೇಶಗಳ ನಡುವೆ ಇತ್ತೀಚಿನ ಕದನ ವಿರಾಮಕ್ಕೆ ನಾಂದಿ ಹಾಡಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿನ ತಿಂಗಳುಗಳಲ್ಲಿ ಇಂತಹ ಗುಂಡಿನ ದಾಳಿಗಳು ಆಗಾಗ್ಗೆ ನಡೆಯುತ್ತಿರುವ ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಗುಂಡಿನ ದಾಳಿ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಪಡೆಗಳು ಹೇಳಿವೆ.
ಯಾವ ದೇಶದಲ್ಲಿ ಕರೋನಾವೈರಸ್ ಸ್ಥಿತಿಗತಿ ಹೇಗಿದೆ ಎಂಬುದನ್ನು ತೋರಿಸಲು WHO ನಕ್ಷೆಯನ್ನು ಪ್ರಕಟಿಸಿದೆ. ಇದರಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಭಾರತದ ನಕ್ಷೆಯಲ್ಲಿ ಪ್ರತ್ಯೇಕವಾಗಿ ತೋರಿಸಲಾಗಿದೆ. ಡಬ್ಲ್ಯುಎಚ್ಒ ಮತ್ತು ಚೀನಾ ನಡುವಿನ ಸಂಬಂಧ ಎಲ್ಲರಿಗೂ ತಿಳಿದಿದೆ, ಅಮೆರಿಕ ಈ ಇಬ್ಬರ ಮೈತ್ರಿಕೂಟವನ್ನು ಬಹಿರಂಗವಾಗಿ ಆಕ್ರಮಣ ಮಾಡಿದೆ. ಆದ್ದರಿಂದ ಚೀನಾದ ಆಜ್ಞೆಯ ಮೇರೆಗೆ ವಿಶ್ವ ಆರೋಗ್ಯ ಸಂಸ್ಥೆ ಭಾರತದ ನಕ್ಷೆಯನ್ನು ಈ ರೀತಿ ಬಿಂಬಿಸಿರಬಹುದೇ ಎಂಬ ಬಗ್ಗೆ ಸಂಶಯ ಮೂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.