ವಿಪಕ್ಷದವರು ಕೂಡಾ ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಮಾತಾಡಿದ್ದಾರೆ. ಅದೇ ರೀತಿ ಜನಾರ್ದನ ರೆಡ್ಡಿ ಅವರೂ ಒಳ್ಳೆಯ ಮಾತನಾಡಿದ್ದಾರೆ. ಇದರ ಅರ್ಥ ರೆಡ್ಡಿ ಪಕ್ಷಕ್ಕೆ ಯಡಿಯೂರಪ್ಪ ಅವರ ಬೆಂಬಲ ಇದೆ ಅಂತಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಯಡಿಯೂರಪ್ಪ ಅವರು ಹಿಂದೆ ನಿಂತು ರಾಜಕೀಯ ಮಾಡಿದವರಲ್ಲ. ನೇರವಾಗಿ ರಾಜಕಾರಣ ಮಾಡುವ ಎದೆಗಾರಿಕೆ ಯಡಿಯೂರಪ್ಪ ಅವರಿಗೆ ಇದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಹಾಲಿ & ಮಾಜಿ ಶಾಸಕರ ಸಂಬಂಧಿಕರು, ಪುತ್ರರಿಗೆ ಆಶ್ರಯ ಆಗುತ್ತಾ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಚರ್ಚೆ ಕೂಡ ಪ್ರಾರಂಭವಾಗಿದೆ. ಜೊತೆಗೆ ಜೆಡಿಎಸ್ನಿಂದ ಅಂತರ ಕಾಯ್ದುಕೊಂಡು ಶಾಸಕರತ್ತ ಇವರು ಸಂಪರ್ಕ ಮಾಡಲಿದ್ದಾರೆಂತೆ.
ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ಧನ ರೆಡ್ಡಿ ಅವರು ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ನೂತನ ಪಕ್ಷಕ್ಕೆ ʼಕಲ್ಯಾಣ ರಾಜ್ಯ ಪ್ರಗತಿ ಪಕ್ಷʼ ಎಂದು ಹೆಸರಿಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಜನಾರ್ಧನ ರೆಡ್ಡಿ ಪಕ್ಷ ಟಕ್ಕರ್ ನೀಡಲಿದೆ. ಕೊಪ್ಪಳ, ಗದಗ, ರಾಯಚೂರು, ಬಳ್ಳಾರಿ, ಯಾದಗಿರಿ ಬಿಜಾಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಈ ಪಕ್ಷ ಪ್ರಾಬಲ್ಯ ಸಾಧಿಸುವ ಸಾಧ್ಯತೆ ಇದೆ. ಹೊಸ ಪಕ್ಷ ಉದಯವಾದ ಹಿನ್ನೆಲೆ ಉತ್ತರ ಕರ್ನಾಟಕ ಭಾಗದ ಬಿಜೆಪಿ ಮತಗಳಿಗೆ ಹೊಡೆತ ಬಿಳುವ ಸಾಧ್ಯತೆ ಇದೆ.
Janardhana Reddy New Political Party: ಸಂಕಷ್ಟದ ದಿನಗಳಲ್ಲಿ ಕುಟುಂಬವನ್ನು ಮುನ್ನಡೆಸಿದ್ದ ಪತ್ನಿ ಲಕ್ಷ್ಮಿ ಅರುಣಾ ಈಗ ಹೊಸ ರಾಜಕೀಯ ಪಕ್ಷ ಮುನ್ನಡೆಸುವ ವಿಚಾರದಲ್ಲೂ ಮಹತ್ವದ ಪಾತ್ರ ವಹಿಸಲಿದ್ದಾರೆ. ಶೀಘ್ರವೇ ಹೊಸ ಪಕ್ಷದ ಚಿಹ್ನೆ ಮತ್ತು ಬಾವುಟ ಅಂತಿಮಗೊಳಿಸಲಾಗುವುದು ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ.
ರಾಜಕೀಯದಿಂದ ದೂರ ಸರಿದಿದ್ದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಹೊಸ ಬಾಂಬ್ ಸಿಡಿಸಿ ರಾಜಕೀಯಕ್ಕೆ ರೀ ಎಂಟ್ರಿ ಕೊಡ್ತಿದ್ದಾರೆ. ಹೊಸ ಪಕ್ಷ ಕಟ್ಟೋದಾಗಿ ಹಿಂಟ್ ನೀಡಿರುವ ರೆಡ್ಡಿ ನಡೆ ರಾಜಕೀಯ ವಲಯದಲ್ಲಿ ಸಾಕಷ್ಟು ಅನುಮಾನ ಹುಟ್ಟಿಹಾಕಿದೆ. ಇದರ ಜೊತೆಗೆ ರಾಜ್ಯದ ಎಲ್ಲಾ ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದಾರೆ.
ತಮ್ಮ 1 ವಾರದ ಪ್ರವಾಸದ ಭಾಗವಾಗಿ ನಾಳೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಗಾಲಿ ಜನಾರ್ದನ ರೆಡ್ಡಿ ಸಂಚರಿಸಲಿದ್ದಾರೆ. ಪಕ್ಷ ಘೋಷಣೆಗೂ ಮುನ್ನ ರೆಡ್ಡಿ ರಾಜ್ಯದ ಮಠ-ಮಂದಿರಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರ. ಜನಾರ್ದನ ರೆಡ್ಡಿ ನನಗೆ ಸಿಕ್ಕಿದ್ರು, ಮಾತನಾಡಿದ್ದೇನೆ. ನಾವೆಲ್ಲ ಮುಖಂಡರು ಅವರೊಂದಿಗೆ ಮಾತಾಡಿದ್ದೇವೆ ಎಂದು ಕೊಪ್ಪಳದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಜನಾರ್ಧನ ರೆಡ್ಡಿ ಜನ್ರ ಮಧ್ಯೆ ಇರಬೇಕಂತ ನಿರ್ಧಾರಿಸಿದ್ದಾರೆ. ರಾಜಕೀಯದ ಬಗ್ಗೆ ಮುಂದಿನ ವಾರ ಅವರೇ ಮಾತಾಡ್ತಾರೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಅರುಣಾಲಕ್ಷ್ಮೀ ಹೇಳಿಕೆ ನೀಡಿದ್ದಾರೆ. ಕಳೆದ 12 ವರ್ಷದಿಂದ ರೆಡ್ಡಿಯವರು ಕಷ್ಟ ಅನುಭವಿಸಿದ್ದಾರೆ. ಇವಾಗ ಜನಸೇವೆಗೆ ಮರಳೋಕೆ ನಿರ್ಧರಿಸಿದ್ದಾರೆ ಎಂದಿದ್ದಾರೆ.
ಜನಾರ್ದನ್ ರೆಡ್ಡಿ ನಮ್ಮ ಪಾರ್ಟಿಯವರೇ.. ರೆಡ್ಡಿ ವಿಚಾರ ಎಲ್ಲವನ್ನೂ ಹಿರಿಯರ ಗಮನಕ್ಕೆ ತಂದಿದ್ದಾರೆ ಎಂದು ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟುವ ವಿಚಾರ ಸಚಿವ ಆರ್. ಅಶೋಕ್ ಸ್ಪಷ್ಟೀಕರಣ ನೀಡಿದ್ದಾರೆ.
ಅಪರಾಧದ ಹಣದಿಂದ ರೆಡ್ಡಿ ಇವತ್ತು ಹೊಸ ಪಕ್ಷ ಕಟ್ಟಲು ಹೊರಟಿದ್ದಾನೆ ಎಂದು ಬಾಗಲಕೋಟೆಯಲ್ಲಿ ಸಿಎಫ್ಡಿ ಅಧ್ಯಕ್ಷ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಆಶಯವನ್ನು ಸಮಗ್ರವಾಗಿ ನಾಶ ಮಾಡುವುದು ಆಗಿದೆ ಎಂದಿದ್ದಾರೆ.
ಮಗಳ ಹೆರಿಗೆ ಹಿನ್ನೆಲೆ ಬಳ್ಳಾರಿಗೆ ತೆರಳಲು ಅನುಮತಿ ಕೋರಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಒಂದು ತಿಂಗಳ ಕಾಲಾವಕಾಶ ನೀಡಿದೆ. ಇಂದು ಈ ಬಗ್ಗೆ ತೀರ್ಪು ನೀಡಿದ ನ್ಯಾ.ಎಂ.ಆರ್.ಶಾ ಅವರ ಪೀಠ,ನವೆಂಬರ್ 6 ರ ವರೆಗೆ ಭೇಟಿ ನೀಡಲು ಮತ್ತು ವಾಸ್ತವ್ಯ ಹೂಡಲು ಅನುಮತಿ ನೀಡಿದೆ.
ಕಿರೀಟಿ ರೆಡ್ಡಿ ತನ್ನ ಚೊಚ್ಚಲ ಚಿತ್ರದ ಚಿತ್ರೀಕರಣದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಆದರೆ, ಈ ಚಿತ್ರದ ಟೈಟಲ್ ಅನ್ನು ಬಿಡುಗಡೆ ಮಾಡಿರಲಿಲ್ಲ. ಕಿರೀಟಿ ರೆಡ್ಡಿ ಜನುಮ ದಿನದಂದು ಈ ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.
ಕೊಪ್ಪಳ ಜಿಲ್ಲೆಯಲ್ಲೊಬ್ಬ ಸುಷ್ಮಾ ಸ್ವರಾಜ್ ಅವರ ವಿಶೇಷ ಅಭಿಮಾನಿಯಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪೂರ ನಿವಾಸಿ ದೇವರಾಜ್ ಸುಷ್ಮಾ ಸ್ವರಾಜ್ ಅವರ ವಿಶೇಷ ಅಭಿಮಾನಿಯಾಗಿದ್ದು, ಮಗಳ ನಾಮಕರಣಕ್ಕೆ ಜನಾರ್ದನ ರೆಡ್ಡಿ, ಶ್ರೀರಾಮುಲು ಬರಬೇಕೆಂದು ಪಟ್ಟು ಹಿಡಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.