ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ (voting) ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಜನರು ಸರತಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ರಾಜ್ಯ ಚುನಾವಣೆಗಾಗಿ ತಮ್ಮ ಅಭಿಯಾನವನ್ನು ಪ್ರಾರಂಭಿಸುತ್ತಿದ್ದಂತೆ, ಲೋಕ ಜನಶಕ್ತಿ ಪಕ್ಷ ಅಥವಾ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ಜೆಪಿ ಅವರೊಂದಿಗಿನ ಪ್ರಮುಖ ಮೈತ್ರಿಯ ಮೇಲೆ ಅನಿಶ್ಚಿತತೆಯ ಕರಿನೆರಳು ಆವರಿಸಿದೆ.
ಮೂಲಗಳ ಪ್ರಕಾರ, ಈ ಅವಧಿಯಲ್ಲಿ 110, 100 ಮತ್ತು 33 ರ ಸೂತ್ರದ ಕುರಿತು ಮಾತುಕತೆ ಮುಂದುವರಿಯಿತು, ಅಂದರೆ ಜನತಾದಳ ಯುನೈಟೆಡ್ (ಜೆಡಿಯು) ತನ್ನ ಅಭ್ಯರ್ಥಿಗಳನ್ನು 110 ಸ್ಥಾನಗಳಲ್ಲಿ ಕಣಕ್ಕಿಳಿಸಬಹುದು. ಅದೇ ಸಮಯದಲ್ಲಿ ಭಾರತೀಯ ಜನತಾ ಪಕ್ಷ 100 ಸ್ಥಾನಗಳಲ್ಲಿ ಸ್ಪರ್ಧಿಸಬಹುದು ಮತ್ತು ಲೋಕ ಜನಶಕ್ತಿ ಪಕ್ಷಕ್ಕೆ (ಎಲ್ಜೆಪಿ) 33 ಸ್ಥಾನಗಳನ್ನು ನೀಡುವ ಬಗ್ಗೆ ವಿವರವಾದ ಚರ್ಚೆ ನಡೆಯಿತು.
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಮತ್ತೊಮ್ಮೆ ರಾಜಕೀಯ ಪೋಸ್ಟರ್ಗಳು ರಾರಾಜಿಸುತ್ತಿವೆ. ಈ ಬಾರಿ ಜೆಡಿಯು ಪೋಸ್ಟರ್ಗಳನ್ನು ಹಾಕಿದೆ. ಜೆಡಿಯು ಲಾಲು ಯಾದವ್ ಹಗರಣದ ಕಥೆಯನ್ನು ಪೋಸ್ಟರ್ಗಳ ಮೂಲಕ ತೋರಿಸಿದೆ.
ಪಕ್ಷದ ಕಾರ್ಯಕರ್ತರಿಂದ ಹಿಡಿದು ಬಿಹಾರದ ಸಾಮಾನ್ಯ ಜನರವರೆಗೆ ಪ್ರಶಾಂತ್ ಕಿಶೋರ್ ಅವರ ರಾಜಕೀಯ ನಡೆ ಏನೆಂಬುದೇ ಅರ್ಥವಾಗುತ್ತಿಲ್ಲ. ಮೊದಲನೆಯದಾಗಿ, ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಪಕ್ಷದ ನಿಲುವನ್ನು ಪ್ರಶಾಂತ್ ಕಿಶೋರ್ ವಿರೋಧಿಸಿದರು.
ಕಾಂಗ್ರೆಸ್ ಹೈ ಕಮಾಂಡ್ ಮೇಲೆ ಪ್ರಶಾಂತ್ ಕಿಶೋರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹರಿಬಿಟ್ಟ ವೀಡಿಯೊ ಸಂದೇಶಕ್ಕೆ ರೀಟ್ವೀಟ್ ಮಾಡಿರುವ ಅವರು ಸೋನಿಯಾ ಗಾಂಧಿ ಅವರಿಗೆ ಮನವಿಯೊಂದನ್ನು ಮಾಡಿದ್ದಾರೆ.
ಪ್ರಶಾಂತ್ ಕಿಶೋರ್ ಬಿಹಾರದ ನಿತೀಶ್ ಕುಮಾರ್ ಅವರ ಜನತಾದಳದ (ಯುನೈಟೆಡ್) ಉಪಾಧ್ಯಕ್ಷರಾಗಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ನಂತರ ಅವರು 2015 ರಲ್ಲಿ ಜೆಡಿಯುಗೆ ಸೇರಿದರು.
ಬಿಹಾರ ಮುಖ್ಯಮಂತ್ರಿಯ ಪ್ರತಿನಿಧಿಗಳು ನಿತೀಶ್ ಕುಮಾರ್ ಪರವಾಗಿ ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಚುನಾವಣಾ ಅಧಿಕಾರಿ ಅನಿಲ್ ಹೆಗ್ಡೆ ಅವರಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಗಳವಾರ ಬಿಹಾರ ಕ್ಯಾಬಿನೆಟ್ ಒಟ್ಟು 17 ಪ್ರಸ್ತಾಪಗಳಿಗೆ ಗ್ರೀನ್ ಸಿಗ್ನಲ್ ನೀಡಿದ್ದು, ಅವುಗಳಲ್ಲಿ ಪ್ರಮುಖವಾಗಿ ವೃದ್ಧ ತಂದೆ-ತಾಯಿಯರನ್ನು ಬಿಟ್ಟು ಬಿಡುವುದು ಅಥವಾ ಅವರ ಕಾಳಜಿ ವಹಿಸದ ಮಕ್ಕಳನ್ನು ತಪ್ಪಿತಸ್ಥರೆಂದು ಪರಿಗಣಿಸಲು ನಿರ್ಧರಿಸಲಾಗಿದೆ.
ಪ್ರಧಾನಿ ಮೋದಿ ನೂತನ ಸಚಿವ ಸಂಪುಟದಲ್ಲಿ ಕೇವಲ ಒಂದು ಸಚಿವ ಸ್ಥಾನವನ್ನು ಜೆಡಿಯುಗೆ ನೀಡಿದ್ದರ ಹಿನ್ನಲೆಯಲ್ಲಿ ಈಗ ನಿತೀಶ್ ಕುಮಾರ್ ನೇತೃತ್ವದ ಪಕ್ಷ ತೀವ್ರ ಅಸಮಾಧಾನಗೊಂಡಿರುವುದು ಸ್ಪಷ್ಟವಾಗಿದೆ.
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಮಂತ್ರಿ ಅಭ್ಯರ್ಥಿ ಕುರಿತಾದ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಒಂದೆಡೆ ಈಗಾಗಲೇ ಪ್ರಧಾನಿ ಅಭ್ಯರ್ಥಿಯಾಗಿ ಮೋದಿ ಅವರನ್ನೇ ಬಿಜೆಪಿ ಘೋಷಿಸಿಕೊಂಡಿದೆ.ಆದರೆ ಈಗ ಎನ್ ಡಿ ಎ ಮೈತ್ರಿಕೂಟದಲ್ಲಿ ಒಳಗೊಳಗೇ ಈಗ ಪ್ರಧಾನಿ ಹುದ್ದೆ ವಿಚಾರವಾಗಿ ಚರ್ಚೆ ನಡೆಯುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.