ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಲಾಕ್ ಡೌನ್ ದೇಶಾದ್ಯಂತ ಜಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಜಾರ್ಖಂಡ್ನ ರಾಜಧಾನಿ ರಾಂಚಿಯಲ್ಲಿ ಪೋಲಿಸ್ ರ ದಬ್ಬಾಳಿಕೆ ಪ್ರಕರಣ ವರದಿಯಾಗಿದೆ, ಅಲ್ಲಿ ಯುವಕನನ್ನು ಪೊಲೀಸರು ಕೆಟ್ಟದಾಗಿ ಥಳಿಸಿದ್ದಾರೆ ಮತ್ತು ಮೂತ್ರ ಕುಡಿಸಲು ಒತ್ತಾಯಿಸಿದ ಧಾರುಣ ಘಟನೆ ನಡೆದಿದೆ.
ಮೊದಲು ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದ್ದು, ನಂತರ ಜಾರ್ಖಂಡ್ನಲ್ಲಿ ಚುನಾವಣೆ ನಡೆಯಲಿದೆ. ಕೆಲವು ದಿನಗಳ ಹಿಂದೆ ಚುನಾವಣಾ ಆಯೋಗದ ತಂಡ ಮಹಾರಾಷ್ಟ್ರ ಮತ್ತು ಹರಿಯಾಣ ಪ್ರವಾಸ ಕೈಗೊಂಡಿತ್ತು.
ಗುರುವಾರ ಜಾರ್ಖಂಡ್ನ ರಾಜಧಾನಿ ರಾಂಚಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರದಾದ್ಯಂತದ ರೈತರ ಅನುಕೂಲಕ್ಕಾಗಿ 'ಪ್ರಧಾನ್ ಮಂತ್ರಿ ಕಿಸಾನ್ ಮಂದನ್ ಯೋಜನೆ'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ತಬ್ರೇಝ್ ಅನ್ಸಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಅಟಾಪ್ಸಿ ವರದಿ ನೀಡಿದ ಹಿನ್ನೆಲೆಯಲ್ಲಿ, ಸಾಮೂಹಿಕ ಹಲ್ಲೆ ಪ್ರಕರಣದಲ್ಲಿ 11 ಆರೋಪಿಗಳ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಪೊಲೀಸರು ಕೈಬಿಟ್ಟಿದ್ದಾರೆ.
ಇತ್ತೀಚೆಗೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಶಾಲಾ ಕಟ್ಟಡದ ಮೇಲ್ಚಾವಣಿಯೂ ಸೋರುತ್ತಿದ್ದು, ಮಕ್ಕಳು ಬೇರೆ ದಾರಿಯಿಲ್ಲದೆ ಛತ್ರಿ ಹಿಡಿದುಕೊಂಡು ಕುಳಿತು ಪಾಠ ಕೇಳುವ ಪರಿಸ್ಥಿತಿ ಎದುರಾಗಿದೆ.
ಜಾರ್ಖಂಡ್ನ ಖುಂಟಿ ಜಿಲ್ಲೆಯ ಗಡಿ ಪ್ರದೇಶದ ಬಳಿ ಗುಡ್ರಿಯ ಥೋಲ್ಕೊಬೆರಾದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಸಂಭವಿಸಿದ ಎನ್ಕೌಂಟರ್ನಲ್ಲಿ ಓರ್ವ ನಕ್ಸಲ್ನನ್ನು ಗುಂಡಿಕ್ಕಿ ಕೊಲ್ಲಲಾಯಿತು.
ಸಾಮಾಜಿಕ ಮಾಧ್ಯಮಗಳಲ್ಲಿ ಮುಸ್ಲಿಮರ ವಿರುದ್ಧವಾಗಿ ಪೋಸ್ಟ್ ಮಾಡಿದ್ದಕ್ಕೆ ಆಕೆ ಮೇಲೆ ಪ್ರಕರಣ ದಾಖಲಿಸಲಾಗಿತ್ತು, ಈ ಹಿನ್ನಲೆಯಲ್ಲಿ ಆಕೆ ಜಾಮೀನು ನೀಡಲು ರಾಂಚಿ ಕೋರ್ಟ್ ಕುರಾನ್ ಧರ್ಮಗ್ರಂಥದ ಪ್ರತಿಗಳನ್ನು ವಿತರಿಸಬೇಕೆಂದು ಆದೇಶ ನೀಡಿತ್ತು. ಆದರೆ ಈಗ ಅವರು ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಜಾರ್ಖಂಡ್ ಹೈಕೋರ್ಟ್ ಗೆ ಮೊರೆಹೋಗಿದ್ದಾರೆ.
ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಭದ್ರತಾ ಸಿಬ್ಬಂದಿಯೊಬ್ಬ ತನ್ನ ಜೀವವನ್ನು ಕಳೆದುಕೊಂಡಿದ್ದಾನೆ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ದುಮ್ಕಾ ಪೊಲೀಸ್ ಅಧೀಕ್ಷಕ ಎಸ್.ಪಿ.ರಮೇಶ್ ಎಎನ್ಐಗೆ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.