NTR 30 begins : ಕೊರಟಾಲ ಶಿವ ನಿರ್ದೇಶನದ NTR 30 ಚಿತ್ರದ ಪೂಜಾ ಕಾರ್ಯಕ್ರಮ ಗುರುವಾರ ಬೆಳಗ್ಗೆ ಹೈದರಾಬಾದ್ನಲ್ಲಿ ನಡೆಯಿತು. ಪೂಜಾ ಕಾರ್ಯಕ್ರಮದ ನಂತರ ನಿರ್ಮಾಪಕ ಶ್ಯಾಮ್ ಪ್ರಸಾದ್ ರೆಡ್ಡಿ ಚಿತ್ರತಂಡಕ್ಕೆ ಸ್ಕ್ರಿಪ್ಟ್ ಹಸ್ತಾಂತರಿಸಿದರು. ಎನ್ಟಿಆರ್ಗೆ ನಿರ್ದೇಶಕ ರಾಜಮೌಳಿ ಕ್ಲಾಪ್ ಮಾಡುವ ಮೂಲಕ ಸಿನಿಮಾ ಶೂಟಿಂಗ್ಗೆ ಚಾಲನೆ ನೀಡಿದರು. ಈ ಚಿತ್ರದ ಮೂಲಕ ಮೊದಲ ಬಾರಿಗೆ ಜಾನ್ವಿ ಕಪೂರ್ ಟಾಲಿವುಡ್ಗೆ ಪಾದಾರ್ಪಣೆ ಮಾಡಿದ್ದಾರೆ.
RRR Team in Oscars 2023 : ಆರ್ಆರ್ಆರ್ ಚಿತ್ರದಲ್ಲಿನ ನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಬಂದಿರುವುದು ಚಿತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಿತು. ಆದರೆ ಇದೀಗ ಒಂದು ವಿಚಾರ ಹೊರಬಿದ್ದಿದೆ. ರಾಜಮೌಳಿ ಮತ್ತು ಅವರ ತಂಡಕ್ಕೆ ಉಚಿತ ಟಿಕೆಟ್ ನೀಡಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ.
ರಾಜಮೌಳಿ ನಿರ್ದೇಶನ ಆರ್ಆರ್ಆರ್ ಸಿನಿಮಾಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಲಭಿಸಿದೆ. ಭಾರತೀಯ ಸಿನಿ ಅಭಿಮಾನಿಗಳು ಸೇರಿದಂತೆ ನಟ, ನಟಿಯರು, ರಾಜಕೀಯ ಧುರೀಣರು ಚಕ್ಕಣನ ತಂಡಕ್ಕೆ ಶುಭ ಕೋರುತ್ತಿದ್ದಾರೆ. ಇನ್ನು ಲಾಸ್ ಏಂಜಲಿಸ್ನ ಡಾಲ್ಬಿ ಥಿಯೇಟರ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿ ಹೈದ್ರಾಬಾದ್ಗೆ ಆಗಮಿಸಿದ ಎನ್ಟಿಆರ್ಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದ್ದಾರೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Jr NTR-Janhvi Kapoor: ಹುಟ್ಟುಹಬ್ಬದ ಸಂದರ್ಭದಲ್ಲಿರುವ ಧಡಕ್ ಬೆಡಗಿ ಜಾನ್ವಿ ಕಪೂರ್ ಗೆ ಜೂನಿಯರ್ ಎನ್ಟಿಆರ್ ಕಡೆಯಿಂದ ದೊಡ್ಡ ಉಡುಗೊರೆ ದೊರಕಿದೆ.ಎನ್ಟಿಆರ್ ಬಾಲಿವುಡ್ ನಟಿಗೆ ಅದೇನು ಗೀಫ್ಟ್ ಕೊಟ್ಟಿರಬಹುದು...
RRR: ರಾಜಮೌಳಿಯವರ RRR ನಿಂದ ಆಸ್ಕರ್ ನಾಮನಿರ್ದೇಶನಗೊಂಡ ಹಾಡು `ನಾಟು ನಾಟು' 95 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲ ಭೈರವ ಅವರ ಆಸ್ಕರ್ ಸಮಾರಂಭದಲ್ಲಿ ಪ್ರದರ್ಶನಗೊಳ್ಳಲಿದೆ.
South Indian Actors Grand Wedding: ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಫೆಬ್ರವರಿ 7 ರಂದು ವಿವಾಹವಾದರು. ಅವರ ಮದುವೆಯ ಫೋಟೋಗಳು ಮತ್ತು ವೀಡಿಯೊಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮಾಧ್ಯಮಗಳ ವರದಿ ಪ್ರಕಾರ ಈ ರಾಜಮನೆತನದ ಮದುವೆ ಮತ್ತು ಆರತಕ್ಷತೆಯಲ್ಲಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಆದರೆ ಇಂದು ನಾವು ದಕ್ಷಿಣದ ಕೆಲವು ಅತ್ಯಂತ ದುಬಾರಿ ಮದುವೆಗಳ ಬಗ್ಗೆ ಹೇಳಲಿದ್ದೇವೆ.
ಆರ್ಆರ್ಆರ್ ಚಿತ್ರತಂಡಕ್ಕೆ ಈಗ ಸುಗ್ಗಿ ಕಾಲ. ಸಾಲು ಸಾಲು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬರ್ತಿವೆ. ಇತ್ತೀಚಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಗೆ ಪಾತ್ರವಾಗಿದ್ದ ರಾಜಮೌಳಿ ಚಿತ್ರತಂಡ ಇದೀಗ ಆಸ್ಕರ್ ಅಂಗಳದಲ್ಲಿದೆ. ಇನ್ನು ಇದೇ ವೇಳೆ ಈ ʼನಾಟು ನಾಟುʼ ಹಾಡಿನ ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕುರಿತು ಸಂತೋಷ ವ್ಯಕ್ತಪಡಿಸಿರುವ ನಿರ್ದೇಶಕ ರಾಜಮೌಳಿ, ಸುದೀರ್ಘ ಬರಹದ ಮೂಲಕ ಕೀರವಾಣಿಯವರನ್ನು ಹಾಡಿ ಹೊಗಳಿದ್ದಾರೆ.
ಆರ್ಆರ್ಆರ್ ಸಿನಿಮಾ ಅಶ್ವಮೇಧದ ಕುದುರೆಯಂತೆ ಒಂದರ ಮೇಲೊಂದು ದಾಖಲೆ ಬರೆಯುತ್ತ ಸಾಗುತ್ತಿದೆ. ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ರಾಜಮೌಳಿ ನಿರ್ದೇಶನದ ಚಿತ್ರ ಇತ್ತೀಚೆಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದುಕೊಂಡು ಇತಿಹಾಸ ಸೃಷ್ಟಿಸಿತು. ಅತ್ಯುತ್ತಮ ಒರಿಜಿನಲ್ ಹಾಡಿಗಾಗಿ ಈ ಪ್ರಶಸ್ತಿ ಬಂದಿತ್ತು. ನಾಟು ನಾಟು ಹಾಡಿಗೆ ಸಂಗೀತ ನೀಡಿದ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ತಂಡದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
Jr NTR with Indian Cricketers : ಭಾರತೀಯ ಕ್ರಿಕೆಟಿಗರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಮುಂಚಿತವಾಗಿ ಹೈದರಾಬಾದ್ನಲ್ಲಿರುವ ಚಲನಚಿತ್ರ ತಾರೆ ಜೂನಿಯರ್ ಎನ್ಟಿಆರ್ ಅವರನ್ನು ಭೇಟಿ ಆಗಿದ್ದಾರೆ.
ಸ್ಟಾರ್ ಡೈರೆಕ್ಟರ್ ಎಸ್. ಎಸ್. ರಾಜಮೌಳಿ ಚಿತ್ರ ಆರ್ಆರ್ಆರ್ ಭಾರತ ಮತ್ತು ವಿದೇಶಗಳಲ್ಲಿಯೂ ಅದ್ಬುತ ಪ್ರತಿಕ್ರಿಯೆಗೆ ಸಾಕ್ಷಿಯಾಗಿದೆ. ಕಳೆದ ವಾರವಷ್ಟೇ, ಈ ಸಿನಿಮಾದ ನಾಟು ನಾಟು ಹಾಡಿಗೆ ಗೋಲ್ಡನ್ ಗ್ಲೋಬ್ಸ್ 2023 ಅತ್ಯುತ್ತಮ ಒರಿಜಿನಲ್ ಸಾಂಗ್ ಎಂಬ ಪ್ರಶಸ್ತಿ ಬಂದಿತ್ತು. ಈ ಮೂಲಕ ರಾಜಮೌಳಿ ಸಿನಿಮಾ ಇತಿಹಾಸವನ್ನು ನಿರ್ಮಿಸಿತು. ಅಲ್ಲದೆ, ಆಸ್ಕರ್ ಅಂಗಳದಲ್ಲಿಯೂ ಈ ಸಿನಿಮಾದ ಹೆಸರು ಕೇಳಿ ಬರುತ್ತಿದೆ.
ಎಮ್ಎಮ್ ಕೀರವಾಣಿ ಸಂಯೋಜನೆಯ ಆರ್ಆರ್ಆರ್ ಚಿತ್ರದ ನಾಟು ನಾಟು ಹಾಡು ಇತಿಹಾಸ ಸೃಷ್ಟಿಸಿದೆ. ಈ ಹಾಡಿಗೆ ಜನವರಿ 10 ರಂದು ಅತ್ಯುತ್ತಮ ಮೂಲ ಗೀತೆಗಾಗಿ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಲಭಿಸಿದೆ. ಪಿಎಂ ನರೇಂದ್ರ ಮೋದಿ ಸೇರಿದಂತೆ ಶಾರುಖ್ ಖಾನ್, ಚಿರಂಜೀವಿ, ಆಲಿಯಾ ಭಟ್ ಮತ್ತು ಎಆರ್ ರೆಹಮಾನ್ ರಾಜಮೌಳಿ ತಂಡವನ್ನು ಅಭಿನಂದಿಸಿದ್ದರು. ಇದೀಗ ಟೈಗರ್ ಶ್ರಾಫ್ ಅವರು ಈ ಅದ್ಭುತ ಸಾಧನೆಗೆ ಪರಿಪೂರ್ಣ ನೃತ್ಯ ಗೌರವ ಸೂಚಿಸಿದ್ದಾರೆ.
ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಚಿತ್ರ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿದೆ. ಪಾಶ್ಚಿಮಾತ್ಯ ದೇಶಗಳಲ್ಲಿಯೂ ಸಹ ಆರ್ಆರ್ಆರ್ಗೆ ಸಕಾರಾತ್ಮಕ ಕಾಮೆಂಟ್ಗಳು ಬಂದಿವೆ. ಹಾಲಿವುಡ್ ನಿರ್ದೇಶಕರು ಮತ್ತು ನಿರ್ಮಾಪಕರು RRR ಅನ್ನು ಹಾಕಿ ಹೊಗಳಿದ್ದಾರೆ. ನಮ್ಮ ದೇಶದಿಂದ ಈ ಚಿತ್ರ ಆಸ್ಕರ್ ಪ್ರವೇಶಕ್ಕೆ ಆಯ್ಕೆಯಾಗದಿದ್ದರೂ, US ವಿತರಣಾ ಕಂಪನಿ ನಮ್ಮ ಚಿತ್ರವನ್ನು ಆಸ್ಕರ್ ನಾಮನಿರ್ದೇಶನಕ್ಕೆ ಕಳುಹಿಸಿದೆ.
ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಟಾಲಿವುಡ್ ಖ್ಯಾತ ನಟ ಜ್ಯೂ. ಎನ್ಟಿಆರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದ್ದಾರೆ. ಅಂದು ಡಾ. ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಗೆಳೆಯನ ಅದ್ಭುತ ಕಾರ್ಯಕ್ರಮಕ್ಕೆ ನಂದಮೂರಿ ತಾರಕ ರಾಮರಾವ್ ಸಾಕ್ಷಿಯಾಗಲಿದ್ದಾರೆ.
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ಪ್ರಶಂಸೆಗೆ ಪಾತ್ರವಾಗಿದೆ. ಸದ್ಯ ರಿಷಬ್ ಶೆಟ್ಟಿ ಸಂದರ್ಶನ ಒಂದರಲ್ಲಿ ತಮಗು ಹಾಗೂ ನಟ ಜ್ಯೂ. ಎನ್ಟಿಆರ್ಗೂ ಇರುವ ಸಂಬಂಧದ ಕುರಿತು ಮಾತನಾಡಿದ್ದಾರೆ.
ಎಸ್.ಎಸ್.ರಾಜಮೌಳಿ ನಿರ್ದೇಶನದ, ಜೂನಿಯರ್ ಎನ್ ಟಿಆರ್ ಹಾಗೂ ರಾಮ್ ಚರಣ್ ನಟನೆಯ ತ್ರಿಬಲ್ ಆರ್ ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದು, ಈಗ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಇದೇ ತಿಂಗಳ 20ರಂದು ತಾರಕ್ ಹುಟ್ಟುಹಬ್ಬದಂದು ಒಟಿಟಿಗೆ ಲಗ್ಗೆ ಇಟ್ಟ ತ್ರಿಬಲ್ ಆರ್ ಸಿನಿಮಾ ಹೊಸದೊಂದು ರೆಕಾರ್ಡ್ ಬರೆದಿದೆ.
ಭಾರತದ ಹೆಸರಾಂತ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ನೇರ ನುಡಿಗೆ ಮತ್ತು ಮುಕ್ತ ಅಭಿಪ್ರಾಯಕ್ಕೆ ಹೆಸರುವಾಸಿಯಾದವರು.ಈಗ ಅವರು ಹಿಂದಿ ಭಾಷೆಯ ವಿಚಾರವಾಗಿ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವಿನ ಭಾಷಾ ಸಂಘರ್ಷದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.