ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರಸ್ವಾಮಿ ಅಭಿನಯದ ಹೊಸ ಸಿನಿಮಾದ ಮುಹೂರ್ತ ಇಂದು ಸೆಟ್ಟೇರಿದೆ .. ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಿಖಿಲ್ ಹೊಸ ಸಿನಿಮಾ ಗೆ ಅಧಿಕೃತ ಚಾಲನೆ ಸಿಕ್ಕಿದ್ದು ಮುಹೂರ್ತ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿಗಳಾದ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಇಬ್ಬರು ಭಾಗಿಯಾಗಿದ್ದರು ಇನ್ನು ಲೈಕಾ ಸಂಸ್ಥೆಯ ಮೊದಲ ಕನ್ನಡ ಸಿನಿಮಾದ ಮುಹೂರ್ತಕ್ಕೆ ಇಡಿ ಲೈಕಾ ಫ್ಯಾಮಿಲಿ ಲಂಡನ್ ನಿಂದ ಬೆಂಗಳೂರಿಗೆ ಆಗಮಿಸಿತ್ತು...
ನಟಿ ಹರ್ಷಿಕಾ ಹಾಗೂ ಭುವನ್ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ವಿಚಾರ ಎಲ್ಲರಿಗೂ ಎಲ್ಲರಿಗೂ ಗೊತ್ತಿರುವ ವಿಚಾರ ಇದೇ ಮದುವೆ ಶುಭ ಸುಖ ನೀಡುವ ಜೊತೆಗಳು ಜೊತೆಗೆ ನಟ ಭುವನ್ ಹಾಗೂ ಹರ್ಷಿಕಾ ಪೂಣಚ್ಚ ತಮ್ಮ ಸ್ವಂತ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ...ಅದರ ಜೊತೆಗೆ ಹೊಸ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ...
ಉತ್ತರ ಕರ್ನಾಟಕ ಸೀಮೆಯಲ್ಲಿ ಸಿನಿಮಾ ಸಾಹಸಗಳನ್ನು ಮಾಡುತ್ತಾ ಕರ್ನಾಟಕದ ತುಂಬೆಲ್ಲ ಪ್ರಸಿದ್ಧಿ ಪಡೆದುಕೊಂಡಿರುವವರು ಅಂಜನ್. ಬಹುಶಃ ಬರೀ ಅಂಜನ್ ಅಂದರೆ ಗುರುತು ಹತ್ತೋದು ಕಷ್ಟ. ರೂರಲ್ ಸ್ಟಾರ್ ಅಂಜನ್ ಅಂದರೆ ಕಲಾ ಪ್ರೇಮಿಗಳೆಲ್ಲ ಕಣ್ಣರಳಿಸುತ್ತಾರೆ. ಹೀಗೆ ಸೀಮಿತ ಚೌಕಟ್ಟಿನಲ್ಲಿ ಒಂದಷ್ಟು ಹೆಸರಾಗಿರುವ ಅಂಜನ್ ಇದೀಗ `ಚೋಳ’ ಎಂಬ ಚಿತ್ರದ ಮೂಲಕ ಮಾಸ್ ಲುಕ್ಕಿನಲ್ಲಿ ಎಂಟ್ರಿ ಕೊಡಲು ಎಡಿಯಾಗಿದ್ದಾರೆ. ವಿಶೇಷವೆಂದರೆ, ಇದುವರೆಗೂ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಸುರೇಶ್ ಡಿ.ಎಂ ಅವರು `ಚೋಳ’ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಈ ಸಿನಿಮಾದ ಟೀಸರ್ ಇದೇ ಆಗಸ್ಟ್ 20ರಂದು ಬಿಡುಗಡೆಗೊಳ್ಳಲಿದೆ.
ಖ್ಯಾತ ನಟ ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಟ್ರೇಲರ್ ಈಗಾಗಲೇ ಜನಮನಸೂರೆಗೊಳ್ಳುತ್ತಿದ್ದು, ಚಿತ್ರ ಆಗಸ್ಟ್ 18 ರಂದು ತೆರೆಗೆ ಬರಲಿದೆ.
ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಟ ನವೀನ್ ಶಂಕರ್, "ಗುಲ್ಟು" ಚಿತ್ರದ ನಂತರ ನಿರ್ದೇಶಕ ಶ್ರೀಕಾಂತ್ ಕಟಗಿ, ಈ ಚಿತ್ರದ ಕಥೆ ಹೇಳಿದರು. ನಾನು ಉತ್ತರ ಕರ್ನಾಟಕದವನೇ ಆಗಿರುವುದರಿಂದ ಅಲ್ಲಿನ ಪರಿಸರದ ಚಿತ್ರ ಮಾಡುವ ಆಸೆಯಿತ್ತು. ಹಾಗಾಗಿ ತಕ್ಷಣ ಒಪ್ಪಿಕೊಂಡೆ. ಆದರೆ ಹಣ ಹೂಡಲು ನಿರ್ಮಾಪಕರು ಇರಲಿಲ್ಲ. ನಾವೇ ಒಂದೊಂದು ಲಕ್ಷ ಹಾಕಿ ಸಿನಿಮಾ ಆರಂಭ ಮಾಡಿದ್ದೆವು. ಆನಂತರ ಸಾಕಷ್ಟು ನಿರ್ಮಾಪಕರು ನಮ್ಮ ಜೊತೆಯಾದರು.
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ 'ಖುಷಿ' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.
ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್ಲಿ ಒಂದು ‘ಅನ್ಲಾಕ್ ರಾಘವ’. ಈಗಾಗಲೇ ಡಬ್ಬಿಂಗ್ ಮುಗಿಸಿರುವ "ಅನ್ಲಾಕ್ ರಾಘವ" ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಭರದಿಂದ ಸಾಗಿದೆ. ವಿಶೇಷವೆಂದರೆ ಈ ಸಿನಿಮಾದ ಫೈಟ್ಗಳು ಈಗಾಗಲೇ ಎಲ್ಲರ ಗಮನ ಸೆಳೆದಿದೆ.
Achar and Co Release Date: ‘ಪಿಆರ್ಕೆ ಪ್ರೊಡಕ್ಷನ್ಸ್ ಹೊಸಬರ ಬಾಳಿಗೆ ಬೆಳಕಾಗಿದೆ. ಪಾರ್ವತಮ್ಮ ರಾಜ್ ಕುಮಾರ್ ದಾರಿಯಲ್ಲಿ ಇದೀಗ ಅಶ್ವಿನಿ ಪುನೀತ್ ರಾಜ್ಕುಮಾರ್ ಸಿನಿಮಾ ನಿರ್ಮಾಣದಲ್ಲಿ ತೊಡಗಿದ್ದಾರೆ. ಹಾಗೆಯೇ ಇವರ ನಿರ್ಮಾಣದ ರೆಟ್ರೋ ಕಥೆ ಆಧಾರಿತ ‘ಆಚಾರ್ ಆ್ಯಂಡ್ ಕೋ’ ಚಿತ್ರ ರೀಲಿಸ್ ಗೆ ಸಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.