ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸುವುದಾಗಿ ರಿಷಬ್ ಶೆಟ್ಟಿ ಹೇಳಿದ್ದಾರೆ. ಈ ಪ್ರಶಸ್ತಿ ಇನ್ನಷ್ಟು ಸಿನೆಮಾ ಮಾಡುವ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದಿದ್ದಾರೆ.
ಈಗಾಗಲೇ ಸ್ಟಾರ್ ಸುವರ್ಣ ವಾಹಿನಿಯು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಉಧೋ ಉಧೋ ಶ್ರೀರೇಣುಕಾ ಯಲ್ಲಮ್ಮ, ನಮ್ಮ ಲಚ್ಚಿ, ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮನಸೆಲ್ಲಾ ನೀನೇ, ಹೊಂಗನಸು, ಸುವರ್ಣ ಸೂಪರ್ ಸ್ಟಾರ್ ಪ್ರೇಕ್ಷಕರ ಮನಗೆದ್ದು ಮನೆಮಾತಾಗಿದೆ.
ರಿಷಬ್ ಶೆಟ್ಟಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ ಗೌರವ ಸಲ್ಲುತ್ತಿದೆ.. ʻಅತ್ಯಂತ ಭರವಸೆಯ ನಟʼ ವಿಭಾಗದಲ್ಲಿ ರಿಷಬ್ ಶೆಟ್ಟಿಗೆ ಫಾಲ್ಕೆ ಚಲನಚಿತ್ರೋತ್ಸವ ಪ್ರಶಸ್ತಿ ಸಂದಿದೆ.. ಫೆ.20ರಂದು ಮುಂಬೈನ ತಾಜ್ ಲ್ಯಾಂಡ್ಸ್ ಹೋಟೆಲ್ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ..
ಸಾಮಾನ್ಯವಾಗಿ ಶಿವರಾತ್ರಿ ವೇಳೆ ರಾತ್ರಿಯಿಡೀ ಜಾಗರಣೆ ಮಾಡಿ ಭಕ್ತಿಯಿಂದ ಶಿವನ ನಾಮಸ್ಮರಣೆ ಮಾಡುತ್ತಾರೆ. ಚಿತ್ರಪ್ರೇಮಿಗಳು ಶಿವರಾತ್ರಿ ಜಾಗರಣೆ ಹೆಸರಿನಲ್ಲಿ ಸಿನಿಮಾ ನೋಡುತ್ತಾ ಕಾಲ ಕಳೆಯುತ್ತಾರೆ. ಶಿವರಾತ್ರಿಯನ್ನು ಕರ್ನಾಟಕ, ತೆಲುಗು ರಾಜ್ಯಗಳು ಹಾಗೂ ತಮಿಳುನಾಡಿನಲ್ಲಿ ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಅಲ್ಲದೆ, ತೆಲುಗು ರಾಜ್ಯಗಳಲ್ಲಿ ಜಾಗರಣೆಗಾಗಿ ಚಿತ್ರಮಂದಿರಗಳಲ್ಲಿ ಭಕ್ತಿ ಪ್ರಧಾನ ಸಿನಿಮಾ ಪ್ರದರ್ಶನ ಮಾಡಲಾಗುತ್ತದೆ. ಈ ವರ್ಷ ಶಿವರಾತ್ರಿಯಂದು ದಿ ಡಿವೈನ್ ಬ್ಲಾಕ್ಬಸ್ಟರ್ ಕಾಂತಾರ ಸಿನಿಮಾ ನೋಡುವ ಅವಕಾಶ ಸಿನಿ ಪ್ರೇಮಿಗಳಿಗೆ ಲಭಿಸಿದೆ.
Dadasaheb Phalke International Film Festival Award 2023 : ಡಿವೈನ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಅಭಿಮಾನಿಗಳಿಗೆ ಇಲ್ಲೊಂದು ಸಂತಸದ ಸುದ್ದಿಯಿದೆ. ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ. ಈ ಮೇರು ಗೌರವಕ್ಕೆ ನಟ ರಿಷಬ್ ಶೆಟ್ಟಿ ಭಾಜರಾಗಿದ್ದಾರೆ.
ಸಂಖ್ಯಾಶಾಸ್ತ್ರದ ಪ್ರಕಾರ ಪ್ರಶಾಂತ್ ಶೆಟ್ಟಿ ಹೆಸರು ಬದಲಿಸಿದರೆ ಮಾಡುವ ಕೆಲಸದಲ್ಲಿ ಏನಾದರೂ ಬದಲಾವಣೆ ಆಗಬಹುದು ಎಂದು ತಂದೆಯವರ ಸಲಹೆಯಂತೆ ರಿಷಬ್ ಶೆಟ್ಟಿ ಎಂದು ಮರುನಾಮಕರಣ ಮಾಡಿಕೊಂಡರಂತೆ.
ಬೆಂಗಳೂರು: ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ವಿದ್ಯಾರ್ಥಿ ಕಾಂತಾರ ಸಿನಿಮಾದ ವರಾಹರೂಪಂ ಹಾಡಿಗೆ ನೃತ್ಯ ಮೇಲೆ ಪಂಜುರ್ಲಿ ದೈವ ಆವಾಹನೆಯಾಗಿದೆ ಎನ್ನಲಾಗಿದೆ.ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ವಿಶಾಲ್ ಪಂಜುರ್ಲಿ ದೈವದ ವೇಷ ಧರಿಸಿ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ.
Rishab Shetty Politics Entry : ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸಿನಿತಾರೆಯರು ರಾಜಕೀಯಕ್ಕೆ ಬರುವ ಸುದ್ದಿಗಳ ಹಾವಳಿ ಕೂಡ ಹೆಚ್ಚಾಗಿದೆ. ಇತ್ತೀಚೆಗೆ ಮಾತನಾಡಿದ ರಿಷಬ್ ಶೆಟ್ಟಿ ತಮ್ಮ ರಾಜಕೀಯ ಎಂಟ್ರಿ ಕುರಿತು ಸ್ಪಷ್ಟನೆ ನೀಡಿದ್ದಾರೆ.
ದೇಶಾದ್ಯಂತ ತುಳುನಾಡ ಸಂಸ್ಕೃತಿಯನ್ನು ಪಸರಿಸಿದ ಸಿನಿಮಾ ಕಾಂತಾರ. ಕಾಂತಾರ ಸಿನಿಮಾ ನೋಡಿ ಅನೇಕರು ಹಾಡಿ ಹೊಗಳಿದ್ದಾರೆ. ರಿಷಬ್ ಶೆಟ್ಟಿಯ ನಟನೆ ಮತ್ತು ನಿರ್ದೇಶನಕ್ಕೆ ಮಾರುಹೋಗಿದ್ದಾರೆ. ಇದೀಗ ಈ ಸಿನಿಮಾ ಬಗ್ಗೆ ಬಿಗ್ ಬಾಸ್ ಕನ್ನಡ ಓಟಿಟಿ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಮಾತನಾಡಿದ್ದಾರೆ.
Kantara Success meet : ಕಾಂತಾರ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲ ಅಕ್ಕ ಪಕ್ಕದ ಸಿನಿ ದುಬಿಯಾದಲ್ಲೂ ತನ್ನದೆ ಆದ ಟ್ರೇಡ್ ಮಾರ್ಕ್ ಕ್ರಿಯೇಟ್ ಮಾಡಿರೋ ಚಿತ್ರ...ಈಗಾಗಲೇ 100 ದಿನಗಳ ಪೂರೈಸಿರೋ ಕಾಂತಾರ ಹೊಂಬಾಳೆ ಫಿಲಂಸ್ ನ ಹೆಮ್ಮೆಯ ಸಿನಿಮಾಗಳಲ್ಲಿ ಒಂದು.
ಕಾಂತಾರ ಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿರುವುದನ್ನು ನೀವು ಈಗಾಗಲೇ ನೋಡಿದ್ದಿರಿ, ಈಗ ಈ ಚಿತ್ರದ ಯಶಸ್ಸು ಈಗ ಹೊಸ ರೆಸ್ಟೋರೆಂಟ್ ವೊಂದನ್ನು ಓಪನ್ ಮಾಡಲಿಕ್ಕೆ ಸ್ಫೂರ್ತಿಯಾಗಿದೆ ಎಂದರೆ ನಂಬ್ತೀರಾ?
Kantara 2 : ಇದೀಗ ಕಾಂತಾರ 2 ಚಿತ್ರ ಬರಲಿದೆ ಎಂಬ ಸುದ್ದಿಗಳು ಹರಿದಾಡಿತ್ತಿವೆ. ಅಧಿಕೃತ ಘೋಷಣೆ ಇಲ್ಲದಿದ್ದರೂ ಕಾಂತಾರ 2 ಬಗ್ಗೆ ನಿರೀಕ್ಷೆ ಹುಟ್ಟಿಕೊಂಡಿದೆ. ರಿಷಬ್ ಶೆಟ್ಟಿ ಪ್ರತಿ ಬಾರಿಯೂ ಭಿನ್ನ ವಿಭಿನ್ನ ಕಥೆ ಮಾಡುತ್ತಾರೆ. ಕಾಂತಾರ 2 ಚಿತ್ರದಲ್ಲಿ ಯಾವ ರೀತಿಯ ಚಿತ್ರಕಥೆ ಇರಬಹುದು ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ.
Rishab Shetty on Rashmika : ರಿಷಬ್ ಶೆಟ್ಟಿ ನಿರ್ದೇಶನದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ರಶ್ಮಿಕಾ ಚಿತ್ರರಂಗಕ್ಕೆ ಕಾಲಿಟ್ಟರು. ಆದರೆ ಇತೀಚೆಗೆ ಇಡೀ ದೇಶವೇ ಕೊಂಡಾಡಿದ ಕಾಂತಾರ ಸಿನಿಮಾ ರಿಲೀಸ್ ಆದ ವೇಳೆ ಚಿತ್ರ ವೀಕ್ಷಿಸಿಲ್ಲ ಎಂಬ ಹೇಳಿಕೆ ಮೂಲಕ ರಶ್ಮಿಕಾ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು.
ದೇಶ-ವಿದೇಶಗಳಲ್ಲಿ ಸದ್ದು ಮಾಡಿದ ಕನ್ನಡದ ಹೆಮ್ಮೆಯ ಸಿನಿಮಾ "ಕಾಂತಾರ" ಇದೀಗ ಕಿರುತೆರೆಯಲ್ಲಿ ಮಿಂಚಲು ಸಜ್ಜಾಗಿದೆ. ಸ್ಟಾರ್ ಸುವರ್ಣದಲ್ಲಿ ಇಂದು ಸಂಜೆ 6 ಗಂಟೆಗೆ ಸುವರ್ಣ ವರ್ಲ್ಡ್ ಪ್ರೀಮಿಯರ್ ಮೂವಿ 'ಕಾಂತಾರ' ಪ್ರಸಾರವಾಗಲಿದೆ. ಈಗಾಗಲೇ ಯಶಸ್ವಿ 100 ದಿನಗಳ ಪೂರೈಸಿರುವ ಕಾಂತಾರ ಇದೀಗ ಕಿರುತೆರೆಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಸ್ಯಾಂಡ್ ಆರ್ಟ್ ಕಲಾವಿದರಾದ ಹರೀಶ್ ಆಚಾರ್ಯ ರವರು ಅದ್ಭುತವಾದ ಮರಳುಶಿಲ್ಪ ಕೃತಿಯನ್ನು ರಚಿಸಿದ್ದಾರೆ.
ದಿ ಡಿವೈನ್ ಬ್ಲಾಕ್ಬಸ್ಟರ್ ಕಾಂತಾರ ಸಿನಿಮಾದಲ್ಲಿ ನಟಿಸಿ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚುತ್ತಿರುವ ಸಿಂಗಾರ ಸಿರಿ ನಟಿ ಸಪ್ತಮಿ ಗೌಡ ಬಾಲಿವುಡ್ಗೆ ಪಾದಾರ್ಪಣೆ ಮಾಡಲಿದ್ದಾರೆ. ʼದಿ ಕಾಶ್ಮೀರಿ ಫೈಲ್ಸ್ʼ ನಂತರ ಗ್ರೇಟ್ ಚಿತ್ರಗಳನ್ನು ನಿರ್ದೇಶಿಸಿ ದೇಶದ ಜನರ ಗಮನ ಸೆಳೆದಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ʼದಿ ವ್ಯಾಕ್ಸಿನ್ ವಾರ್ʼ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.