ಈಗಾಗಲೇ ನಟ ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ರಾಜ್ಯದೆಲ್ಲೆಡೆ ಪ್ರಚಾರ ಮಾಡುತ್ತಿದ್ದಾರೆ,ಈಗ ಇದರ ಮುಂದುವರೆದ ಭಾಗವಾಗಿ ನಾಳೆಯಿಂದ ಕುಂದಾನಗರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ರಂಗೇರಿದ ಬೆಳಗಾವಿ ಉತ್ತರ ವಿಧಾನಸಭಾ ಚುನಾವಣಾ ಅಖಾಡ. ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪ್ರಚಾರ. ಭರ್ಜರಿ ಪ್ರಚಾರ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಆಸಿಫ್ ಸೇಠ್. ಆಸಿಫ್ ಸೇಠ್ಗೆ ಗ್ರ್ಯಾಂಡ್ ವೆಲ್ಕಮ್ ಮಾಡಿಕೊಂಡ ಜನರು. ಆಸಿಫ್ ಸೇಠ್ಗೆ ಸಾಥ್ ನೀಡಿದ ಮಾಜಿ ಶಾಸಕ ಫಿರೋಜ್ ಸೇಠ್. ಆಸಿಫ್ ಸೇಠ್ ಸಹೋದರ ಫಿರೋಜ್ ಸೇಠ್ನಿಂದ ಪ್ರಚಾರ.
Lakshmi Hebbalkar : ವಿಧಾನಸಭೆಯ ಚುನಾವಣೆಗೆ ಕೇವಲ ಹತ್ತು ದಿನಗಳು ಮಾತ್ರ ಬಾಕಿ ಇವೆ. ಕರುನಾಡ ಕುರುಕ್ಷೇತ್ರಕ್ಕೆ ಕದನ ಕಲಿಗಳು ಸಿದ್ದವಾಗುತ್ತಿದ್ದಾರೆ. ಈ ನಡುವೆ ಪಕ್ಷ ಪ್ರತಿಪಕ್ಷಗಳ ನಡುವೆ ಪರಸ್ಪರ ವಾಗ್ದಾಳಿಗಳು ಆರಂಭವಾಗಿವೆ. ಇದೀಗ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಬಿಜೆಪಿ ಮೇಲೆ ಕಿಡಿ ಕಾರುತ್ತಿದ್ದಾರೆ.
ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷಣದಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಕಳೆದ 4 ವರ್ಷಗಳಲ್ಲಿ ತಮಗೆ ಆದ ಅನುಭವವನ್ನು ನೋಡಿ ತಾವು ಮತವನ್ನು ಚಲಾವಣೆಯನ್ನು ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಜನರಲ್ಲಿ ಮನವಿ ಮಾಡಿದ್ದಾರೆ.
2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ 63-ಯಲಬುರ್ಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಮತದಾರರ ಮತದಾನ ಹೆಚ್ಚಿಸುವ ಮತ್ತು ಗಮನಸೆಳೆಯುವಂತ ನಾಲ್ಕು ಪಿಂಕ್, ಒಂದು ವಿಶಿಷ್ಟಚೇತನ ಹಾಗೂ ಐದು ಮಾದರಿ ಮತಗಟ್ಟೆಗಳನ್ನು ನಿರ್ಮಿಸಿದ್ದು, ಈ ಕೇಂದ್ರಗಳು ಮತದಾರರ ಗಮನ ಸೆಳೆಯುವಂತಿವೆ.
Karnataka Assembly Election 2023: ಈಗಾಗಲೇ KSRTC, NWRTC, KKRTCಯಲ್ಲಿ ಸುಮಾರು 5 ಸಾವಿರಕ್ಕೂ ಅಧಿಕ ಟೆಕೆಟ್ ಬುಕಿಂಗ್ ಆಗಿವೆ. ಮೇ 9ರಂದು ರಾತ್ರಿ ಬೆಂಗಳೂರಿನಿಂದ 25 ಲಕ್ಷ ಜನರು ವಿವಿಧ ಜಿಲ್ಲೆಗಳಿಗೆ ಪ್ರಯಾಣಿಸುವ ನಿರೀಕ್ಷೆ ಇದೆ.
Karnataka Assembly Election 2023: ಚಾಮರಾಜನಗರ BSP ಅಭ್ಯರ್ಥಿ ಹ.ರಾ.ಮಹೇಶ್ ಆನೆ ಮಾದರಿ ಪ್ರಚಾರ ರಥವನ್ನು ನಿರ್ಮಾಣ ಮಾಡಿಸಿಕೊಂಡಿದ್ದು, ಆನೆ ಮೇಲೆ ಕುಳಿತು ಭರ್ಜರಿ ಪ್ರಚಾರ ನಡೆಸಿ ಗಮನ ಸೆಳೆಯುತ್ತಿದ್ದಾರೆ.
Karnataka Assembly Election 2023: ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ನಾಮಪತ್ರ ವಾಪಸ್ ಪಡೆಯಲು ಒತ್ತಡ ಹೇರಿದ್ದ ಆರೋಪದಡಿ ಕ್ರಮಕ್ಕೆ ಆಗ್ರಹಿಸಿ ಸಚಿವ ವಿ.ಸೋಮಣ್ಣ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ನೀಡಿತ್ತು.
ಕಾಂಗ್ರೆಸ್ ಮತ್ತು ಜೆಡಿಎಸ್ ಲೆಕ್ಕಾಚಾರಗಳು ಕೂಡ ಈ ಬಾರಿಯ ಚುನಾವಣೆಯಲ್ಲಿ ಭಿನ್ನವಾಗಿ ಎಂದೇ ಹೇಳಬಹುದು.ಆದರೆ ಅವೆಲ್ಲಾ ಪ್ರಾಯೋಗಿಕವಾಗಿ ಹೇಗೆಲ್ಲಾ ಕಾರ್ಯಗತಗೊಳ್ಳುತ್ತವೆ ಮತ್ತು ಮತದಾರ ಪ್ರಭು ಯಾರ ಕಡೆ ವಾಲುತ್ತಾನೆ ಎನ್ನುವುದನ್ನು ನಾವು ಕಾಯ್ದು ನೋಡಬೇಕಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.