Karnataka Election 2023 : ಶೆಟ್ಟರ್ ಅವರಿಗೆ ರಾಜಕೀಯ ನಿವೃತಿ ಹೊಂದುವಂತೆ ಪಕ್ಷ ಹೇಳಿಲ್ಲ. ಅವರನ್ನು ರಾಜ್ಯಸಭೆಗೆ ಕಳಿಸುವ ಬಗ್ಗೆ ಚರ್ಚೆಯಾಗಿತ್ತು. ಅಲ್ಲದೆ, ಅವರ ಕುಟುಂಬಕ್ಕೆ ಟಿಕೆಟ್ ನೀಡುವುದಾಗಿ ತಿಳಿಸಿತ್ತು. ಲಕ್ಷಣ ಸವದಿ ಅವರನ್ನ ಚುನಾವಣೆಯಲ್ಲಿ ಸೋತಮೇಲೆ ಡಿಸಿಎಂ, ಕೋರ್ ಕಮಿಟಿ ಸ್ಥಾನ, ಹಾಗೂ ಎಂಎಲ್ಸಿ ಸ್ಥಾನ ನೀಡಲಾಗಿತ್ತು. ಅದರಂತೆ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬಂದಾಗ ಅವರಿಗೆ ಅಧಿಕಾರ ನೀಡುವ ಭರವಸೆಯನ್ನು ನೀಡಿತ್ತು.
ಲಕ್ಷಣ ಸವದಿ ಅವರನ್ನ ಚುನಾವಣೆಯಲ್ಲಿ ಸೋತಮೇಲೆ ಡಿಸಿಎಂ, ಕೋರ್ ಕಮಿಟಿ ಸ್ಥಾನ, ಹಾಗೂ ಎಂ ಎಲ್ ಸಿ ಸ್ಥಾನ ನೀಡಿದ್ವಿ. ಲಕ್ಷ್ಮಣ್ ಸವದಿ ಈ ಹಿಂದೆ ಹೇಗೆ ಸಚಿವರಾಗಿ ಮಾಡಿಡ್ವೊ ಅದೇ ರೀತಿ ಮಾಡಬಹುದಿತ್ತು. ಶೆಟ್ಟರ್ ಅವರನ್ನ ರಾಜಕೀಯ ನಿವೃತಿ ತಗೋಳಿ ಅಂತ ಎಂದೂ ಹೇಳಿಲ್ಲ. ರಾಜ್ಯಸಭೆಗೆ ಕಳಿಸುವ ಬಗ್ಗೆ ಚರ್ಚೆಯಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.
Karnataka Assembly Election 2023: ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಇದಕ್ಕಿಂತ ದೊಡ್ಡ ಹುದ್ದೆ ಕೊಡಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ತಿಳಿಸಿದ್ದರು.
Karnataka Assembly Election 2023: ಶಾಸಕ ಅವಿನಾಶ್ ಜಾಧವ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದು ಕಾಂಗ್ರೆಸ್ ಕಾರ್ಯಕರ್ತರು ಮಾಡಿರುವ ಕೃತ್ಯವೆಂದು ಅವಿನಾಶ್ ಜಾದವ್ ಆರೋಪಿಸಿದ್ದಾರೆ.
ಬಿಜೆಪಿ ನಾಯಕರ ಸಂಧಾನ ಸಭೆ ವಿಫಲವಾದ ಹಿನ್ನಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದು, ಕಾಂಗ್ರೆಸ್ ಸೇರುವ ಬಗ್ಗೆ ಕೈ ಹಿರಿಯ ಮುಖಂಡ ಶಾಸಕ ಶಾಮನೂರ್ ಶಿವಶಂಕರಪ್ಪ ಜತೆ ಮಾತುಕತೆ ಪ್ರಾರಂಭಿಸಿದ್ದಾರೆ ಎಂದು ಶೆಟ್ಟರ್ ಆಪ್ತ ವಲಯ ಖಚಿತ ಪಡಿಸಿದೆ.
ಕಾಂಗ್ರೆಸ್ ಪಕ್ಷವು ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಆದರೆ ಅಚ್ಚರಿ ಎನ್ನುವಂತೆ ಈಗ ಅದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಿಸದೆ ಹಾಗೆ ಬಿಟ್ಟಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಸಿಎಂ, ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಹ್ಲಾದ್ ಜೋಶಿ ನಮ್ಮ ಮನೆಗೆ ಬರಲಿದ್ದಾರೆ. ಮೂವರೂ ಸೇರಿ ನಮ್ಮ ಜೊತೆ ಸಮಾಲೋಚನೆ ಮಾಡಲಿದ್ದಾರೆ. ಸಮಾಲೋಚನೆ ನಂತರ ಮುಂದಿನ ನಿರ್ಧಾರವನ್ನು ಪ್ರಕಟ ಮಾಡಲಿದ್ದೇವೆ ಆದ್ರೆ, ಸ್ಪರ್ಧೆಯಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದು ಜಗದೀಶ್ ಶೆಟ್ಟರ್ ಖಡಕ್ ಸಂದೇಶ ನೀಡಿದರು.
43 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ಇನ್ನು 15 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಆಗಬೇಕಿದೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಸೇರಿದಂತೆ ಒಟ್ಟು 15 ಕ್ಷೇತ್ರಗಳಿಗೆ ನಾಲ್ಕನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಬಾಕಿ ಉಳಿದಿದ್ದ 58 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ಇನ್ನು 15 ಕ್ಷೇತ್ರಗಳ ಅಭ್ಯರ್ಥಿ ಹೆಸರು ಘೋಷಣೆ ಆಗಬೇಕಿದೆ.ಈ ಪೈಕಿ ಹರಿಹರ, ಪುಲಕೇಶಿ ನಗರ, ಶಿಡ್ಲಘಟ್ಟ ಹಾಲಿ ಶಾಸಕರ ಕ್ಷೇತ್ರಗಳ ಹೆಸರು ಘೋಷಣೆ ಆಗಿಲ್ಲ.
ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಅಥಣಿ ಕ್ಷೇತ್ರದಿಂದ ಕಣಕ್ಕಿಳಿಸಿದೆ. ನಿನ್ನೆ ಸವದಿ ಟಿಕೆಟ್ ನೀಡದಿದ್ದಕ್ಕೆ ಬಿಜೆಪಿ ತೊರೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇಂದು ಅವರನ್ನು ಅಥಣಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಘೋಷಿಸಿದೆ. ಕಾಂಗ್ರೆಸ್ ಪಕ್ಷವು 43 ಅಭ್ಯರ್ಥಿಗಳನ್ನೊಳಗೊಂಡ ಮೂರನೇ ಪಟ್ಟಿಯನ್ನು ಇಂದು ರಿಲೀಸ್ ಮಾಡಿದೆ.
Karnataka Assembly Election 2023: ಅರಸೀಕೆರೆ ವಿಧಾನಸಭೆ ಕ್ಷೇತ್ರದ ಎನ್.ಆರ್.ಸಂತೋಷ್ ಅವರು ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಸೇರಿದರು. ಹಾಗೆಯೇ ಬಾಗಲಕೋಟೆಯ ದೇವರಾಜ್ ಪಾಟೀಲ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.