Karnataka Assembly election 2023: ಕಾಂಗ್ರೆಸ್ಗೆ ಚುನಾವಣೆ ಗೆಲ್ಲುವ ಶಕ್ತಿ ಇಲ್ಲ. ಚುನಾವಣೆ ಅಂದರೆ ಒಂದು ಸವಾಲು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.
ಶೆಟ್ಟರ್ ಟಿಕೆಟ್ಗಾಗಿ ಬಹಳ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇವೆ. ಟಿಕೆಟ್ ಕೊಡಿಸಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ನಿನ್ನೆ ಧರ್ಮೇಂದ್ರ ಪ್ರಧಾನ ಬಳಿ ಚರ್ಚೆ ಮಾಡಿದ್ದೇನೆ. ಅವರನ್ನು ಉಳಿಸಿಕೊಳ್ಳುವ ವಿಶ್ವಾಸ ಇದೆ. ಜಗದೀಶ್ ಶೆಟ್ಟರ್ ಮನವೊಲಿಕೆ ಪ್ರಯತ್ನ ಮಾಡಿದ್ದೇವೆ. ಇವತ್ತಿಗೂ ಪ್ರಯತ್ನ ನಡೀತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Karnataka Assembly election 2023: ಶುಕ್ರವಾರ 3.65 ಕೋಟಿ ರೂ. ನಗದು, 9.97 ಲಕ್ಷ ರೂ. ಮೌಲ್ಯದ ಗಿಫ್ಟ್ ಗಳು, 1.40 ಕೋಟಿ ರೂ. ಮೌಲ್ಯದ ಮದ್ಯ, 7.63 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳು ಮತ್ತು 1.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ತೆಗೆದುಕೊಳ್ಳಲಾಗಿದೆ.
ವರುಣ ಕ್ಷೇತ್ರದ ಬಳಿಕ ಚಾಮರಾಜನಗರದಲ್ಲಿ ಚುನಾವಣಾ ರಣನೀತಿ ರೂಪಿಸಲು ಬಿಜೆಪಿ ಅಭ್ಯರ್ಥಿ ಸೋಮಣ್ಣ ಬರುತ್ತಿದ್ದು ಶನಿವಾರ ಮತ್ತು ಭಾನುವಾರ ಎರಡು ದಿನ ಚಾಮರಾಜನಗರದಲ್ಲೇ ವಾಸ್ತವ್ಯ ಹೂಡಿ ಪ್ರಚಾರ ನಡೆಸಲಿದ್ದಾರೆ.
Karnataka Assembly Election 2023: ಹಾಸನ ನಗರ ಟಿಕೆಟ್ ಕುರಿತ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಎಚ್ಡಿಕೆ, ಭವಾನಿ ರೇವಣ್ಣರಿಗೆ ಟಿಕೆಟ್ ನಿರಾಕರಿಸಿದ್ದಾರೆ. ತಾವು ಬಯಸಿದಂತೆ ಎಚ್.ಪಿ.ಸ್ವರೂಪ್ ಪ್ರಕಾಶ್ ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ್ದಾರೆ.
Karnataka Assembly Election 2023: ಹಲವು ಪ್ರಕರಣಗಳಿರುವ ಸೈಲೆಂಟ್ ಸುನೀಲನ ರೌಡಿ ಶೀಟನ್ನು ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ನೋಡೇ ಇಲ್ಲವಂತೆ. ಹಾಗಾದ್ರೆ ಕಮಿಷನರ್ ಆಗಿದ್ದಾಗ ಇವರು ಮಾಡಿದ ಕೆಲಸವಾದರೂ ಏನು?! ಎಂದು ಕಾಂಗ್ರೆಸ್ ಟೀಕಿಸಿದೆ.
ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಗೆ ಹೋಗ್ತಿರೋದು ದುಃಖ ತರಿಸಿದೆ. ಅವರಿಗೆ ಕಾಂಗ್ರೆಸ್ ನಲ್ಲಿ ರಾಜಕೀಯ ಭವಿಷ್ಯ ಕಂಡಿದೆ.ಅಲ್ಲಿ 60 ಸೀಟಿಗೆ ನಿಲ್ಲುವ ಗತಿ ಇಲ್ಲ.ಅದಕ್ಕಾಗಿ ಕೆಲವರನ್ನು ಸೇರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರಿಗೆ ಬಿಜೆಪಿ ಟಿಕೆಟ್ ನೀಡುವಲ್ಲಿ ವಿಳಂಭ ಧೋರಣೆ ಅನುಸರಿಸುತ್ತಿರುವ ಬೆನ್ನಲ್ಲೇ ಈಗ ಭೋವಿ ಸಮಾಜದ ಅಖಿಲ ಕರ್ನಾಟಕ ಭೋವಿ ಮಠದ ಪೀಠಾಧೀಪತಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅರವಿಂದ್ ಲಿಂಬಾವಳಿ ಅವರಿಗೆ ಟಿಕೆಟ್ ತಪ್ಪಿದಲ್ಲಿ ಭೋವಿ ಸಮಾಜ ಬಿಜೆಪಿಯಿಂದ ದೂರವಾಗುತ್ತದೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
Karnataka Assembly Election 2023: ಲಕ್ಷ್ಮಣ ಸವದಿ ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದು, 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಡಿಕೆಶಿ ತಿಳಿಸಿದರು.
Karnataka Assembly Elections 2023: ಶಿರಸಿಯ ಸ್ಪೀಕರ್ ಕಚೇರಿಗೆ ಆಗಮಿಸಿದ ಎಂ ಪಿ ಕುಮಾರ ಸ್ವಾಮಿ ಅವರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಎಂ ಪಿ ಕುಮಾರ ಸ್ವಾಮಿ ಅವರು, ಮೂರು ಬಾರಿ ಮೂಡಗೆರೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದೇನೆ. ಆದರೆ ಈ ಬಾರಿ ಬಿಜೆಪಿ ಪಕ್ಷದ ಕೆಲ ನಾಯಕರಿಂದಾಗಿ ಟಿಕೆಟ್ ಕೈ ತಪ್ಪಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕುಟುಂಬ ರಾಜಕಾರಣ ಮತ್ತು ಕ್ರಿಮಿನಲ್ ಗಳ ಸಮ್ಮಿಲನವೇ ಬಿಜೆಪಿ. ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ನಿಜವಾದ ಬಣ್ಣ ಬಯಲಾಗಿದೆ. ಬಿಜೆಪಿ 224 ಕ್ಷೇತ್ರಗಳಲ್ಲಿ ಇದುವರೆಗೂ ಘೋಷಣೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಲ್ಲಿ 35 ಅಭ್ಯರ್ಥಿಗಳು ಕುಟುಂಬ ರಾಜಕಾರಣದ ಫಲವಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.