ರಾಜ್ಯ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಮೂಲಕ ದೇಶದಲ್ಲಿ ಕುಖ್ಯಾತಿಗೆ ಪಾತ್ರವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಪೇಸಿಎಂ ಬಿರುದನ್ನು ಪದೇ ಪದೆ ನಿರೂಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಕಿಡಿ ಕಾರಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರೋದು ಮುಖ್ಯ. ಮುಂದಿನ ಸಿಎಂ ಯಾರು ಅನ್ನೋದನ್ನ ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ. 19 ರಂದು ನಾನು ನಾಮಪತ್ರ ಸಲ್ಲಿಕೆ ಮಾಡ್ತೀನಿ. ನಾವು ಮೆಜಾರಿಟಿ ಬಂದೇ ಬರ್ತೀವಿ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದರು.
Karnataka Assembly Election: ಬಿಜೆಪಿಯಿಂದ ಈಗಾಗಲೇ ಟಿಕೆಟ್ ಘೋಷಣೆಯಾಗಿದೆ. ಎರಡನೇ ಪಟ್ಟಿಯು ಬುಧವಾರ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಟಿಕೆಟ್ ಕೈ ತಪ್ಪಿದ್ದೆ. ಟಿಕೆಟ್ ಕೈ ತಪ್ಪಿದ್ದ ಹಿನ್ನಲೆ ಎಂ.ಪಿ ಕುಮಾರಸ್ವಾಮಿ ಅಕ್ರೋಶ ಹೊರ ಹಾಕಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡಲು ಬಿಜೆಪಿ ವಿ. ಸೋಮಣ್ಣ ಅವರಿಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಗೆ ಸೋಮಣ್ಣ ಹೋಗಲಾರದೇ ಚಾಮರಾಜನಗರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್ ಮುಂದಾಗಿದ್ದು ಇದಕ್ಕೇ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ. ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟವಾಗಿದೆ.
Karnataka Assembly election 2023: ಬಿಜೆಪಿಯಲ್ಲಿ ಟಿಕೆಟ್ ಘೋಷಣೆಯಾಗಿದ್ದು, ಮಾಜಿ ಸಚಿವ ರಾಮಚಂದ್ರೇಗೌಡರ ಪುತ್ರ ಸಪ್ತಗಿರಿಗೌಡರಿಗೆ ಪಕ್ಷದ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಜೆಡಿಎಸ್ ಪಕ್ಷ ವಿ.ನಾರಾಯಣಸ್ವಾಮಿಗೆ ಟಿಕೆಟ್ ಘೋಷಿಸಿದೆ.
Karnataka Assembly election 2023: ಯಾರೂ ಏನೇ ಹೇಳಲಿ, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿಗೆ ಈ ಬಾರಿ ಮತದಾರ ಸ್ಪಷ್ಟ ಬಹುಮತ ನೀಡಲಿದ್ದಾನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.
Karnataka Assembly Election: ಪಕ್ಷ ಸಂಘಟನೆಗೆ ಕರೆದರೇ ನನಗೂ ಬಿಜೆಪಿಗೂ ಸಂಬಂಧವಿಲ್ಲ, ನಾನು ಸರ್ಕಾರದ ಸಚಿವ ಎಂದು ಹೇಳುತ್ತಿದ್ದರು. ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದ ಸೋಮಣ್ಣ ಅವರು ಕೆಲ ಷರತ್ತುಗಳಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಲು ಸೋಮಣ್ಣ ಅವರು ಕಾರಣ, ಈಗ ಸೋಮಣ್ಣ ಅವರೇ ಅಭ್ಯರ್ಥಿಯಾಗಿರುವುದು ವಿಪರ್ಯಾಸ- ಚಾಮರಾಜನಗರ ಬಿಜೆಪಿ ಟಿಕೆಟ್ ಆಕಾಂಕ್ಷಿ ರುದ್ರೇಶ್
Karnataka Assembly election 2023: ಬೆಲೆ ಏರಿಕೆಯ ಪರ್ವಕ್ಕೆ ಸಕ್ಕರೆಯೂ ಸೇರ್ಪಡೆಯಾಗಿದೆ. ಜನರ ಬದುಕಿಗೆ ಬೇಕಾದ ಎಲ್ಲಾ ಅತ್ಯಗತ್ಯ ವಸ್ತುಗಳ ಬೆಲೆಯನ್ನೂ ಏರಿಸಿ ಧೂರ್ತತನದ ಪರಮಾವಧಿಗೆ ತಲುಪಿದೆ ಬಿಜೆಪಿ ಎಂದು ಕಾಂಗ್ರೆಸ್ ಟೀಕಿಸಿದೆ.
ಮೋದಿಯವರ ಟಕ್ಕರ್ ಆಗಲಿ, ಅಮಿತ್ ಶಾ ಟಕ್ಕರ್ ಆಗಲಿ ನಮ್ಮತ್ರ ನಡೆಯೊಲ್ಲ. ಕರ್ನಾಟಕದ ಜನ ಬುದ್ದಿವಂತರಿದ್ದಾರೆ. ರಾಮನಗರ ಜಿಲ್ಲೆಯ ಜನ ಎಲ್ಲರನ್ನೂ ನೋಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದ್ರೂ ಸ್ಪರ್ಧೆ ಮಾಡಬಹುದು. ಬಿಜೆಪಿ ಹೈಕಮಾಂಡ್ ಮಾಜಿ ಡಿಸಿಎಂ ಆರ್.ಅಶೋಕ್ ರನ್ನ ಕನಕಪುರ ಅಭ್ಯರ್ಥಿ ಮಾಡಿದೆ. ಏನಾಗುತ್ತೋ ನೋಡೊಣ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
Karnataka Assembly election 2023: ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ, ಅದೇ ನನಗೆ ಹಿನ್ನಡೆಯಾಯಿತು. ನಾನು ಇನ್ನು ರಾಜಕಾರಣದಲ್ಲಿರಲ್ಲ, ಚುನಾವಣಾ ಪ್ರಚಾರ ಕಣದಲ್ಲೂ ಇರಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಸ್.ಅಂಗಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯವರು ಮೀಸಲಾತಿ ಕೊಟ್ಟಿದ್ದೇವೆ ಅಂತಿದ್ದಾರೆ, ಶೇ.50ಕ್ಕಿಂತಲೂ ಮೀಸಲಾತಿ ಹೆಚ್ಚಿಸಲು ಅವಕಾಶ ಇಲ್ಲ. ನಮ್ಮ ಸರ್ಕಾರ ಬಂದರೆ ಕೆಲವೊಂದು ಮೀಸಲಾತಿಯನ್ನ ತೆಗೆದು ಹಾಕುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ, ಲಕ್ಷ್ಮಣ್ ಸವದಿ ಅವರಿಗೆ ಬಿಜೆಪಿ ಟಿಕೆಟ್ ನೀಡದೇ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಪಕ್ಷದ ಮೇಲೆ ಈ ಮೂವರು ನಾಯಕರು ಹರಿಹಾಯ್ದಿದ್ದಾರೆ. ಇದರ ನಡುವೆ ಹೊಸ ವಿಚಾರವೊಂದು ಮುನ್ನೆಲೆಗೆ ಬಂದಿದೆ. ಒಂದು ವೇಳೆ ಗಾಲಿ ಜನಾರ್ಧನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಈ ಮೂವರು ದಿಗ್ಗಜರು ಸೇರಿದಂತೆ ಅಸಮಾಧಾನಿತ ಬಿಜೆಪಿ ನಾಯಕರು ಸಾಥ್ ನೀಡಿದ್ರೆ, ಈ ಭಾಗದಲ್ಲಿ ಬಿಜೆಪಿ ಗೆಲ್ಲುವು ಕಷ್ಟಕರವಾಗಲಿದೆ.
189 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಗೊಳಿಸಿದೆ. ಅಲ್ಲದೆ, ಈ ಬಾಗಿ ಬರೋಬ್ಬರಿ 52 ಹೊಸ ಮುಖಗಳಿಗೆ ಕಮಲ ಪಾಳಯ ಮಣೆ ಹಾಕಿದೆ. ಇದರ ನಡುವೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನ ತುಂಬಿದ್ದ ದಿಗ್ಗಜ ನಾಯಕರಿಗೆ ಟಿಕೆಟ್ ನೀಡದೇ ಹೈಕಮಾಂಡ್ ಶಾಕ್ ನೀಡಿದೆ.
ಹಲವು ದಿನಗಳ ತೀವ್ರ ಚರ್ಚೆಯ ನಂತರ ಬಿಜೆಪಿ ಮಂಗಳವಾರ ಅಂತಿಮವಾಗಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಯುವ ನಾಯಕತ್ವಕ್ಕೆ ಆದ್ಯತೆ ನೀಡಲಾಗಿದೆ ಎಂದು ರಾಜ್ಯ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.