ಶೆಟ್ಟರ್ ರಾಜಕಾರಣ ಹಿಂದೆ ಸರಿಯುವ ಮಾತೇ ಇಲ್ಲ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.ಈಶ್ವರಪ್ಪನವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಈಗ ಶೆಟ್ಟರ್ ಅವರ ಈ ಹೇಳಿಕೆ ಬಂದಿದೆ.
ಬೊಮ್ಮಾಯಿ ಅವರ ಸರ್ಕಾರಕ್ಕೆ ನಂದಿನಿ ಉತ್ಪನ್ನಗಳಿಂದ 40% ಕಮಿಷನ್ ಸಿಗುತ್ತಿಲ್ಲ. ಇದೇ ಕಾರಣಕ್ಕೆ ಅವರು ನಂದಿನಿಯನ್ನು ಅಮೂಲ್ ಜತೆ ವಿಲೀನಗೊಳಿಸಲು ಮುಂದಾಗಿದೆ" ಎಂದು ರಾಷ್ಟ್ರೀಯ ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
Karnataka assembly election 2023: ನೀವು ಮುಖ್ಯಮಂತ್ರಿ ಆಗಿದ್ದೀರಿ, ನಿಮಗೆ ಶಿಗ್ಗಾವಿ ಕ್ಷೇತ್ರಕ್ಕೆ ಯಾಕೆ ಸೀಮಿತ ಮಾಡಿಕೊಳ್ಳುತ್ತಿರಿ, ಬಿಜೆಪಿ ಬಲಹೀನ ಆಗಿರುವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಪಕ್ಷವನ್ನು ಯಾಕೆ ಬೆಳಸಬಾರದು?’ ಎಂದು ಹೈಕಮಾಂಡ್ ಸಿಎಂ ಬೊಮ್ಮಾಯಿಗೆ ಹೊಸ ಚ್ಯಾಲೆಂಜ್ ನೀಡಿದೆ ಅಂತಾ ಮೂಲಗಳು ತಿಳಿಸಿವೆ.
Karnataka Assembly Election: ನೀತಿ ಸಂಹಿತೆ ಘೋಷಣೆಯಾದ ಬಳಿಕ ಸೋಮಣ್ಣ ಜಿಲ್ಲೆಗೆ ಅವರ ಮೊದಲ ಬೇಟಿ ಇದಾಗಿದ್ದು ಅವರ ಅಭಿಮಾನಿಗಳು ಜಿಲ್ಲೆಯ ನಾಲ್ಕೈದು ಕಡೆ ಪಟಾಕಿ ಸಿಡಿಸಿ, ಹೂಗಳನ್ನು ಎರಚಿ ಸ್ವಾಗತ ಕೋರಿರುವುದು ಸೋಮಣ್ಣ ಚಾಮರಾಜನಗರಕ್ಕೆ ಬರುತ್ತಾರೆ ಎಂಬ ಊಹಾಪೋಹಕ್ಕೆ ಇಂಬು ಕೊಟ್ಟಿದೆ.
Karnataka Assembly election 2023: ಚಿಕ್ಕೋಡಿಯಲ್ಲಿ ದಾಖಲೆ ಇಲ್ಲದೆ ಅಕ್ರಮವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 2.31 ಲಕ್ಷ ಮೌಲ್ಯದ 10 ಟನ್ ಪಡಿತರ ಅಕ್ಕಿಯನ್ನು ಎಫ್ಎಸ್ಟಿ ಹಾಗೂ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆಸಿಕೊಂಡಿದ್ದಾರೆ.
Karnataka Assembly election 2023: ಬಿ.ಎಸ್.ಯಡಿಯೂರಪ್ಪರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನವೆಂದು ಕಾಂಗ್ರೆಸ್ ಟೀಕಿಸಿದೆ.
Karnataka Assembly Election 2023: ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡೆಲ್ಲಿ ಯಲ್ಲಿ ಟಿಕೆಟ್ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಇನ್ನು ಸ್ವಕ್ಷೇತ್ರ ಶಿಗ್ಗಾವಿ ಟಿಕೆಟ್ ಪಡೆಯಲು ಹರಸಾಹಾಸ ಪಡುತ್ತಿದ್ದಾರೆ ಎನ್ನಲಾಗುತ್ತಿದೆ.
ಸರ್ಕಾರಿ ಕೆಲಸದಲ್ಲಿ ನಿಷ್ಕಾಳಜಿತನ ತೋರಿದ ಕಾರಣಕ್ಕಾಗಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ನಾಗರಾಜ ಕೂಬಳ್ಳಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಮಾಡಿದ್ದಾರೆ.
Karnataka Assembly election 2023: ನಮ್ಮ ಯುವಕರು ರಾಜ್ಯ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ನಿರುದ್ಯೋಗಿಗಳಾಗಿದ್ದಾರೆ. ಇದರಿಂದ ಯುವ ಜನರ ಭವಿಷ್ಯ ಹಾಳಾಗಿದೆ. ಡಬಲ್ ಎಂಜಿನ್ ಸರ್ಕಾರ ನಮ್ಮವರನ್ನು ಕೈಬಿಟ್ಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದರು.
Karnataka Assembly Election 2023: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಮಹತ್ವಾಕಾಂಕ್ಷೆಯ ಪಂಚರತ್ನ ಯೋಜನೆಗಳು ಹಾಗೂ ಅವರು ಪಂಚರತ್ನ ರಥಯಾತ್ರೆ ವೇಳೆ ಘೋಷಣೆ ಮಾಡಿರುವ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಅಡಕಗೊಳಿಸಲಾಗಿದ್ದು, ಮಾಜಿ ಮುಖ್ಯಮಂತ್ರಿಗಳ ಕನಸಿನ ಕಾರ್ಯಕ್ರಮಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಲು ಸಭೆಯಲ್ಲಿ ನಿರ್ಣಯಿಸಲಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.