ಕೆಎಂಎಫ್ ಆಪೋಷನಕ್ಕೆ ಕೇಂದ್ರ ಬಿಜೆಪಿ ಸರಕಾರ ಮೂರನೇ ಸಂಚು ರೂಪಿಸಿದೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; 2008ರಲ್ಲಿಯೇ ನಂದಿನಿಯನ್ನು ಮುಗಿಸಲು ಬಿಜೆಪಿ ಹೊರಟಿತ್ತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
'ಕನ್ನಡಿಗರು ಕಟ್ಟಿ ಬೆಳೆಸಿದ ಪ್ರತಿಷ್ಠಿತ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಗಳನ್ನು ಮುಳುಗಿರುವ ಬಿಜೆಪಿ ಈಗ ಕನ್ನಡಿಗರ ಹೆಮ್ಮೆಯ ನಂದಿನಿ ಸಂಸ್ಥೆಯನ್ನು ಮುಳುಗಿಸಲು ಚುನಾವಣೆ ಸಮಯದಲ್ಲಿ ಬಿಲ ತೋಡುತ್ತಿದ್ದಾರೆ' ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ವಾಗ್ದಾಳಿ ನಡೆಸಿದರು.
ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.ಶ್ವೇತ ಕ್ರಾಂತಿಯ ಮೂಲಕ ಕಾಂಗ್ರೆಸ್ ಭಾರತವನ್ನು ವಿಶ್ವದ ಅತಿ ದೊಡ್ಡ ಹಾಲು ಉತ್ಪಾದಕ ರಾಷ್ಟ್ರವನ್ನಾಗಿ ಮಾಡಿದೆ.
‘ಬಿಜೆಪಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅವರಿಗೆ ಅಭ್ಯರ್ಥಿ ಅಂತಿಮ ಮಾಡಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯ ನಾಯಕರು ಆ ಪಕ್ಷ ತೊರೆಯಲು ಕಾಯುತ್ತಿದ್ದಾರೆ. ಹೀಗಾಗಿ ತಮ್ಮ ನಾಯಕರುಗಳನ್ನು ಪಕ್ಷದಲ್ಲೇ ಹಿಡಿದಿಟ್ಟುಕೊಳ್ಳು ಅವರು ಪಟ್ಟಿ ಬಿಡುಗಡೆ ಮಾಡುತ್ತಿಲ್ಲ. ಕೊನೆ ಕ್ಷಣದವರೆಗೂ ಪಕ್ಷ ತೊರೆಯಲು ಅವಕಾಶ ನೀಡಬಾರದು ಎಂದು ಕಾಯುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ಮೋದಿ ಅವರೇ ಇನ್ನು ಒಂದು ತಿಂಗಳು ಮೂರು ದಿನಗಳು ಮಾತ್ರ ಬಾಕಿ ಇವೆ. ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಂತರ ಕರ್ನಾಟಕದ ಹೆಮ್ಮೆಯ ಸಂಸ್ಥೆಗಳನ್ನು ಯಾರೂ ಕೂಡ ಮುಟ್ಟಲು ಸಾಧ್ಯವಿಲ್ಲ. ದೆಹಲಿಯಲ್ಲಿ ಕೂತು ಕರ್ನಾಟಕದ ಹೆಮ್ಮೆಯ ಸಂಸ್ಥೆಗಳ ಭವಿಷ್ಯ ನಿರ್ಧರಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಗೌರಭ ವಲ್ಲಬ್ ಹೇಳಿದ್ದಾರೆ.
ಅಮೂಲ್ ಹಾಗೂ ನಂದಿನಿ ವಿವಾದದ ಬಗ್ಗೆ ಕೇಳಿದಾಗ, ‘ನಾವೆಲ್ಲರೂ ಪ್ರೀತಿಯಿಂದ ಬೆಳೆಸಿರುವ ನಂದಿನಿಯನ್ನು ಕಾಪಾಡಿಕೊಳ್ಳಬೇಕು. ರಾಜ್ಯದ ಜನರು ನಂದಿನಿ ವಿಚಾರದಲ್ಲಿ ವ್ಯಕ್ತಪಡಿಸುವ ಅಭಿಪ್ರಾಯವನ್ನು ಎಲ್ಲರೂ ಆಲಿಸಬೇಕು. ’
ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ಶಿಶು ಅಭಿವೃದ್ದಿ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಬರುವ 71 ಅಂಗನವಾಡಿ ಕಾರ್ಯಕರ್ತರ ಹುದ್ದೆ ಹಾಗೂ 80 ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ದಿನಾಂಕ 24.03.2023 ರಂದು ಹೊರಡಿಸಿರುವ ಪ್ರಕಟಣೆಯನ್ನು ರದ್ದುಗೊಳಿಸಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರು, ಅವರೇ ನನ್ನ ಅಧ್ಯಕ್ಷರು. ಖರ್ಗೆ ಅವರು ನನಗಿಂತ 20 ವರ್ಷಗಳ ಹಿರಿಯರು. ಅವರ ಹಿರಿತನ, ತ್ಯಾಗಕ್ಕೆ ನಾವು ಗೌರವ ನೀಡಬೇಕು. ಒಂದು ವೇಳೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Karnataka Election: ಕಾಂಗ್ರೆಸ್ ನ ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ ಅವರ ಹೆಸರು ಬರಲಿ ಹಾಗೂ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಟಿಕೆಟ್ ಸಿಗಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು, ದೇಗುಲ ಮತ್ತು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
‘ಮೋದಿ ಅವರು ಈ ದೇಶದ ಪ್ರಧಾನಮಂತ್ರಿಗಳು. ಅವರು ಎಷ್ಟು ಬಾರಿಯಾದರೂ ರಾಜ್ಯಕ್ಕೆ ಭೇಟಿ ನೀಡಬಹುದು. ಆದರೆ ಕರ್ನಾಟಕದ ಚುನಾವಣೆ ಸಮಯದಲ್ಲಿ ಪಕ್ಷದ ಪ್ರಚಾರಕ್ಕೆ ಹೆಚ್ಚು ಆಗಮಿಸುತ್ತಿದ್ದು, ಅವರ ಪಕ್ಷ ರಾಜ್ಯದಲ್ಲಿ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಅಮುಲ್ ವಿಚಾರವಾಗಿ ಬಿಜೆಪಿ ನಾಯಕ ಸಿಟಿ ರವಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ 'ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ'ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.
Karnataka Assembly election 2023: ಸೋಮೇಶ್ವರ ದೇವಸ್ಥಾನದಲ್ಲಿ ಎಂಎಲ್ಸಿ ಪ್ರದೀಪ್ ಶೆಟ್ಟರ್ ನೇತೃತ್ವದಲ್ಲಿ ಆಣೆ ಪ್ರಮಾಣ ಮಾಡಲಾಗಿತ್ತು. ಗುರುವಾರ ಬೆಳಗ್ಗೆ ದೇವಸ್ಥಾನದಲ್ಲಿ ಶಿರಹಟ್ಟಿ ಕ್ಷೇತ್ರದ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ನಡೆದಿತ್ತು.
Karnataka Assembly election 2023: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೊಂದಿಗಿನ ನನ್ನ ಸಂಬಂಧವು ಸೌಹಾರ್ದಯುತವಾಗಿದೆ. ಅವರ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪಂಚಮಸಾಲಿ ಮುಖಾಂಡರ ಸಭೆಯಲ್ಲಿ ಭಾಗವಹಿಸಿ ಪಂಚಮಸಾಲಿ ಸಮಾಜ ನನ್ನ ಜೊತೆ ಇದೆ ಎಂದು ಹೇಳಿಕೆ ನೀಡುತ್ತಿದ್ದಂತೆ ಸವದಿ ವಿರುದ್ದ ಏಕಾಏಕಿ ಪಂಚಮಸಾಲಿ ಮಠಾಧೀಶರು ಮುಗಿಬಿದ್ದಿದ್ದಾರೆ.ಆ ಮೂಲಕ ಈಗ ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಸವದಿಗೆ ತೀವ್ರ ಹಿನ್ನೆಡೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.