'ರಾಜ್ಯದ ನೆಲ, ಜಲ, ಭಾಷೆ ಕಾಪಾಡಿ ಜನರ ಹಿತ ಕಾಯುವ ಪ್ರತಿಜ್ಞೆ ಮೂಲಕ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಾನ ಮರ್ಯಾದೆ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣೆಯ ಮಾಹಿತಿ ಕುರಿತು ಇಂದು ಬಿಬಿಎಂಪಿ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ಚುನಾವಣಾ ಮಾಹಿತಿ ಕಾರ್ಯಗಾರವು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶ್ರೀ ಉಜ್ವಲ್ ಕುಮಾರ್ ಘೋಷ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
Karnataka Legislative Assembly election 2023: ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಾದ ದಿನದಿಂದ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೋಟಿ ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
Karnataka Assembly election 2023: ಚುನಾವಣಾ ಆಯೋಗದ ಅಧಿಕಾರಿಗಳು ಕಳೆದ 1 ವಾರದಲ್ಲಿ ಭರ್ಜರಿ ಬೇಟೆಯಾಡಿದ್ದಾರೆ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ, ದಾಖಲೆಯಿಲ್ಲದ 27 ಕೋಟಿ ರೂ. ನಗದು ಹಾಗೂ 10 ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ತೆಗೆದಕೊಂಡಿದ್ದಾರೆ.
Prakash Raj : ನಟ ಕಿಚ್ಚ ಸುದೀಪ್ ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಹೇಳಿಕೆ ನೀಡಿದಾಗಿನಿಂದಲೂ ಸಾಕಷ್ಟು ಗೊಂದಲಗಳು ಚರ್ಚೆಗಳು ಸೃಷ್ಟಿಯಾಗುತ್ತಿದ್ದು, ಈ ವಿಚಾರ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇದೀಗ ಮತ್ತೇ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್ ಮೂಲಕ ಕಿಚ್ಚ ಸುದೀಪ್ಗೆ ಅಣಕವಾಡಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕಾರಣ ಸಮಾಜ ಕಲ್ಯಾಣ ಇಲಾಖೆಯ ಸೇಡಂ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ವಸತಿ ನಿಲಯದ ವಾರ್ಡನ್ ಯಶೋಧಮ್ಮ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಆದೇಶಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಇರುವ ಆದಾಯ ಗಳಿಕೆ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ಮಧ್ಯಂತರ ತಡೆಯಾಜ್ಞೆಯನ್ನು ಎಪ್ರಿಲ್ ೧೩ ರವವರೆಗೆ ವಿಸ್ತರಿಸಿದೆ.
ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಶಾಸಕ ಮುನಿರತ್ನ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಈಗ ಅವರ ವಿರುದ್ಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಚುನಾವಣಾ ಆಯೋಗ, ಐಟಿ ಅಧಿಕಾರಿಗಳು ಸ್ವತಂತ್ರವಾಗಿ ಕೆಲಸ ಮಾಡುತ್ತಿದ್ದು, ಯಾರು ಕಳ್ಳರಿದ್ದಾರೆ, ಅವರು ಸಿಗುತ್ತಾರೆ.ಕಾಂಗ್ರೆಸ್ ನವರು ಯಾಕೆ ಭಯ ಪಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅವರು ಇಂದು ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಬೆಂಬಲ ಸೂಚಿಸಲು ಬಂದ ನಟ ಕಿಚ್ಚ ಸುದೀಪ್ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಪೀಕಲಾಟಕ್ಕೆ ಸಿಲುಕಿದರು.ವಿಶ್ವಾಸದಲ್ಲಿ ಬೆಂಬಲ ಎಂದು ಬಳಿಕ ಸೂಚಿಸಿದ ಕ್ಷೇತ್ರಗಳಲ್ಲಿ ಪ್ರಚಾರವೆಂದು ಹೇಳಿಕೆ ಬದಲಿಸಿ ನಟ ಎಂಬುದನ್ನು ಸಾಬೀತುಪಡಿಸಿದರು.
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.
Karnataka Assembly Election: ಬಸ್ಸು ಒಳಗೆ ದಾಖಲೆರಹಿತ ಎರಡು ಕೋಟಿ ನಗದು ಚೀಲ ಪತ್ತೆಯಾಗಿದೆ. ಈ ವಿಚಾರಣೆ ಸಂಬಂಧ ಕಾರ್ಯಚಾರಣೆ ನಡೆಸಿದಾಗ ಬಸ್ಸು ಚಾಲಕ ಈ ಹಣದ ಬಗ್ಗೆ ದಾಖಲಾತಿ ಹಾಗೂ ಮಾಹಿತಿ ನೀಡಲು ಪೇಚಾಡಿದ್ದಾನೆ.
Karnataka assembly election 2023: ಬಿಜೆಪಿಯಲ್ಲಿದ್ದೂ ಬಿಜೆಪಿಗರಂತಿರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ರಾಜಕೀಯ ನಿವೃತ್ತಿ ಘೋಷಿಸಿರುವುದಕ್ಕೆ ಬಿಜೆಪಿಯ ಕಿರುಕುಳವೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.
ಐದು ಬಾರಿ ಶಾಸಕರಾಗಿರುವ ಹಾಲಾಡಿ ಅವರು ವೈಯಕ್ತಿಕ ಕಾರಣದಿಂದಾಗಿ ರಾಜಕೀಯದಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದ್ದಾರೆ. ಆದರೆ ಚುನಾವಣಾ ಹೊಸ್ತಿಲಲ್ಲಿ ಈಗ ಅವರು ಏಕಾಏಕಿ ರಾಜಕೀಯ ನಿವೃತ್ತಿ ಘೋಷಿಸಿರುವುದು ಬಿಜೆಪಿಗೆ ಶಾಕ್ ನೀಡಿದಂತಾಗಿದೆ.
ನಗರದ ಹೋಟೆಲ್ ನಲ್ಲಿ ನಡೆಯುತ್ತಿರುವ ರಹಸ್ಯ ಸಭೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ ಹಾಗೂ ಸಚಿವ ಗೋವಿಂದ್ ಕಾರಜೋಳ ಭಾಗಿಯಾಗಿದ್ದು, ಟಿಕೆಟ್ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
Karnataka Assembly Eelection: ಟಿಕೆಟ್ ಸಂಬಂಧ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಚಿವ ವಿ. ಸೋಮಣ್ಣ ಅವರ ಹೆಸರು ಪ್ರಬಲವಾಗಿ ಕೇಳಿಬಂದಿದೆ. ಜೊತೆಗೆ, ಟಿಕೆಟ್ ಗಾಗಿ ಓಡಾಡುತ್ತಿದ್ದ ವಿಜಯೇಂದ್ರ ಆಪ್ತ ರುದ್ರೇಶ್ ಹೆಸರು ಪ್ರಸ್ತಾಪ ಆಗಿಲ್ಲದಿರುವುದು ಗಡಿಜಿಲ್ಲೆ ರಾಜಕೀಯದ ಹೊಸ ಟರ್ನಿಂಗ್ ಪಾಯಿಂಟಾಗಿದ್ದು ವರಿಷ್ಠರ ಸಭೆಯಲ್ಲಿ ರುದ್ರೇಶ್ ಹೆಸರು ಪ್ರಸ್ತಾಪ ಆಗದಿರುವುದರಿಂದ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
Karnataka Assembly Election: ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಧ್ರುವನಾರಾಯಣ ಅವರ ಅಕಾಲಿಕ ಮರಣದಿಂದಾಗಿ ಪುತ್ರ ದರ್ಶನ್ ಗೆ ಟಿಕೆಟ್ ಕೊಟ್ಟಿದ್ದು ಅಧಿಕೃತವಾಗಿ ಇಂದಿನಿಂದ ಧ್ರುವ ಪುತ್ರ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.