ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದೆ. ಆದ್ರೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ನಡೆಸಿದ ರೋಡ್ ಶೋ ವೇಳೆ ಪಕ್ಷದ ನಾಯಕರು ನೀತಿ ಸಂಹಿತೆಯನ್ನ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.
ಚುನಾವಣೆ ಯಾವಾಗಲೂ ಕೇವಲ ಒಂದೇ ವಿಷಯದ ಮೇಲೆ ಕೇಂದ್ರಿತವಾಗಿರುವುದಿಲ್ಲ, ಇದರಲ್ಲಿ ಹಲವು ಅಂಶಗಳು ಮೇಳೈಸಿರುತ್ತವೆ.ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳು ಕೂಡ ಇವುಗಳ ಲೆಕ್ಕಾಚಾರದ ಮೇಲೆಯೇ ಜನರನ್ನು ತಲುಪುವ ಬಗೆಯನ್ನು ಮತ್ತು ತನ್ನ ಚುನಾವಣಾ ಪ್ರಚಾರದ ವೈಖರಿಯನ್ನು ನಿರ್ಧರಿಸುತ್ತವೆ.
ಬಿಜೆಪಿ ಪಕ್ಷವು ಆರಂಭದಿಂದಲೂ ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯಕ್ಕೆ ಅನುಕೂಲಕರವಾಗಲಿದೆ ಎನ್ನುವ ಅಭಿಪ್ರಾಯವನ್ನು ಹೇಳುತ್ತಲೇ ಬಂದಿದೆ. ಇದೆ ಮಾತಿನಂತೆ ಅದು ಈ ಬಾರಿಯ ಚುನಾವಣಾ ಪ್ರಚಾರದಲ್ಲಿಯೂ ಡಬಲ್ ಇಂಜಿನ್ ಸರ್ಕಾರದಿಂದ ಪ್ರಗತಿ ತ್ವರಿತಗತಿಯಲ್ಲಿ ಸಾಗಲಿದೆ ಎನ್ನುವುದು ಸ್ಪಷ್ಟವಾದಂತಹ ವಾದವಾಗಿದೆ.
ಗದಗ ಬೆಳ್ಳಟ್ಟಿಯಲ್ಲಿ ಕಾಂಗ್ರೆಸ್ ಸಮಾವೇಶ ಹಿನ್ನೆಲೆ ಹೆಲಿಕಾಪ್ಟರ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.. ಈ ವೇಳೆ ಸಿದ್ದರಾಮಯ್ಯ ನೋಡೋದಕ್ಕೆ ಅಭಿಮಾನಿಗಳು ಓಡೋಡಿ ಹೆಲಿಪ್ಯಾಡ್ ಬಳಿ ಬಂದಿದ್ದಾರೆ.
ರಾಯಚೂರಿನ ಹಟ್ಟಿ ಪಟ್ಟಣದಲ್ಲಿ ಪ್ರಚಾರದ ವೇಳೆ ಅಭ್ಯರ್ಥಿಗಳ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐದು ನೂರು ರೂಪಾಯಿ ಕೊಟ್ಟು ವೋಟ್ ಹಾಕಿಸಿಕೊಳ್ತೀರಾ.. ಆಮೇಲೆ ನಮ್ಮನ್ನು ಯಾರೂ ಕೇಳೋದಿಲ್ಲ.. ನಾವು ವೋಟ್ ಹಾಕಿದಕ್ಕೂ ಬೆಲೆ ಇಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ..
ಅಮಿತ್ ಶಾ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಕೋಲ್ಡ್ರಿಂಕ್ಸ್ ಕುಡಿದು ನಷ್ಟ ಅನುಭವಿಸಿದ್ದ ಯುವಕನಿಗೆ ಸಹಾಯ ಸಿಕ್ಕಿದೆ.. ಕೋಲ್ಡ್ರಿಂಕ್ಸ್ ವ್ಯಾಪಾರಿ ಸಮೀರ್ಗೆ ಕಾಂಗ್ರೆಸ್ನವರು 20 ಸಾವಿರ ರೂ. ಹಾಕಿದ್ದಾರೆ.. ಇನ್ನು ಸಂಸದ ಪ್ರತಾಪ್ ಸಿಂಹ 35 ಸಾವಿರ ರೂ. ನೀಡಿದ್ದಾರೆ..
ಸವದಿ ಬೋಗಸ್ ಸ್ವಾಭಿಮಾನಿ. ಅವರಿಗೆ ಬುದ್ಧಿ ಕಲಿಸಬೇಕು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಗಂಡಸಾಗಿದ್ರೆ ಶ್ರೀಮಂತ ಪಾಟೀಲ್, ಮಹೇಶ ಕುಮಟಳ್ಳಿ, ರಮೇಶ್ ತಂದ ಸರ್ಕಾರದಲ್ಲಿ ಮಂತ್ರಿ ಆಗೋಲ್ಲ ಅಂತ ಹೇಳ್ಬೇಕಿತ್ತು ಅಂತಾ ಕಿಡಿಕಾರಿದ್ದಾರೆ.
ವಿಜಯಪುರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ರು.. ಮೊಹರೆ ಹಣಮಂತರಾಯ ವೃತ್ತದಿಂದ ರೋಡ್ ಶೋ ಮಾಡಿದ್ರು. ದೇವರಹಿಪ್ಪರಗಿ ಜೆಡಿಎಸ್ ಅಭ್ಯರ್ಥಿ ರಾಜುಗೌಡಾ ಪಾಟೀಲ ಪರ ಮತಬೇಟೆ ನಡೆಸಿದ್ರು.
Karnataka Assembly Election: ಬಿಜೆಪಿಗರಿಗೆ 40 ಎಂಬ ಸಂಖ್ಯೆ ಮೇಲೆ ಬಲು ಪ್ರೀತಿ, 40 ಅಂದರೆ ಇಷ್ಟ. ಆದ್ದರಿಂದ 40 ಸ್ಥಾನಗಳನ್ನು ಮಾತ್ರ ಈ ಚುನಾವಣೆಯಲ್ಲಿ ಅವರಿಗೆ ಕೊಡಿ, ನಮಗೆ 150 ಸ್ಥಾನ ಕೊಡಿ, ಅಲ್ಪ ಬಹುಮತದ ಸರ್ಕಾರ ಬಂದರೆ 40% ಹಣದಿಂದ ಕಳ್ಳತನದಿಂದ ಅಧಿಕಾರ ಹಿಡಿಯುತ್ತಾರೆ ಎಂದು ವಾಗ್ದಾಳಿ ನಡೆಸಿದರು.
Karnataka Assembly Elections: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲೇ ಬೇಕು ಎಂದು ಪಣತೊಟ್ಟಿರುವ ಬಿಜೆಪಿ ಸಚಿವ ವಿ. ಸೋಮಣ್ಣ ಅವರನ್ನು ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಕಣಕ್ಕಿಳಿಸಿದೆ. ಹೈ ಕಮಾಂಡ್ ತಮ್ಮ ಮೇಲಿಟ್ಟಿರುವ ಭರವಸೆಯನ್ನು ಶತಾಯಗತಾಯ ಉಳಿಸಿಕೊಳ್ಳಲೇ ಬೇಕು ಎಂದು ಹೋರಾಡುತ್ತಿರುವ ಸಚಿವ ವಿ. ಸೋಮಣ್ಣ, ಬಿರು ಬಿಸಿಲನಲ್ಲಿ ಸತತವಾಗಿ ಪ್ರಚಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ತಲೆ ಸುತ್ತಿ ಕಾರಿನಲ್ಲೇ 20 ನಿಮಿಷ ಕುಳಿತು ಸುಧಾರಿಸಿಕೊಂಡಿದ್ದಾರೆ.
Karnataka Assembly Election 2023: ಕಾಂಗ್ರೆಸ್ ಘೋಷಣೆ ಮಾಡಿದ್ದ ಯೋಜನೆಗಳಲ್ಲಿ 65% ಅವರೇ ಮಾಡಿಲ್ಲ. ಮೊದಲು ಅವರು ರಿಪೋರ್ಟ್ ಕಾರ್ಡ್ ಕೊಡಲಿ. ನಮ್ಮ ಕಾಲದಲ್ಲಿ ಕೋವಿಡ್ ಬಂದಿದ್ದರಿಂದ ಸ್ವಲ್ಪ ಮಾರ್ಪಾಡು ಮಾಡಿಕೊಂಡು ಹೊಸ ಸ್ಕೀಂಗಳನ್ನು ಕೊಟ್ಟಿದ್ದೇವೆ. ಇದನ್ನು ವಿಧಾನಸಭೆಯಲ್ಲೂ ಹೇಳಿದ್ದೇನೆ.
ಮೋದಿ ಅವರೇ ನೀವು ನಮ್ಮ ಯೋಜನೆಗಳನ್ನು ಟೀಕಿಸುವುದಾದರೆ, ನೀವು ರಾಜ್ಯಕ್ಕಾಗಿ ಏನು ಮಾಡಲು ಹೊರಟಿದ್ದೀರಿ ಎಂದು ಹೇಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತುರುವೇಕೆರೆ ಸಾರ್ವಜನಿಕ ಸಭೆಯಲ್ಲಿ ಹೇಳಿದರು.
ಬೆಳಗಾವಿಯಲ್ಲಿ ಇಂದು ನಟ ಕಿಚ್ಚ ಸುದೀಪ್ ಕ್ಯಾಂಪೇನ್. BJP ಅಭ್ಯರ್ಥಿಗಳ ಪರ ಸ್ಯಾಂಡಲ್ವುಡ್ ಬಾದ್ಶಾ ಪ್ರಚಾರ. ಕಿತ್ತೂರು ಅಭ್ಯರ್ಥಿ ಮಾಂತೇಶ್ ದೊಡ್ಡಗೌಡರ್ ಪರ ರೋಡ್ ಶೋ. ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ಗ್ರಾಮೀಣದಲ್ಲಿ ಮತಯಾಚನೆ. ನಾಗೇಶ್ ಮನ್ನೊಳಕರ್ ಪರ ಸುಳೇಬಾವಿಯಲ್ಲಿ ರೋಡ್ ಶೋ.
ಚಾಮರಾಜನಗದಲ್ಲಿಂದು ರಾಹುಲ್ ಗಾಂಧಿ ಭರ್ಜರಿ ಪ್ರಚಾರ. ಒಂದೇ ದಿನ.. ನಾಲ್ಕು ಕ್ಷೇತ್ರ.. ರಾಹುಲ್ ಗಾಂಧಿ ಮತಶಿಕಾರಿ. ರಾಹುಲ್ ಗಾಂಧಿಗೆ ಮಲ್ಲಿಕಾರ್ಜುನ್ ಖರ್ಗೆ.. ಸ್ಥಳೀಯರ ಸಾಥ್. ಬೆಳಗ್ಗೆ ಹನೂರು.. ಮಧ್ಯಾಹ್ನ ಕೊಳ್ಳೇಗಾಲ.. ಚಾಮರಾಜನಗರ, ಸಂಜೆ 6 ಗಂಟೆಗೆ ಗುಂಡ್ಲುಪೇಟೆಯಲ್ಲಿ ರಾಹುಲ್ ಮತಯಾಚನೆ. ಪ್ರಚಾರದ ಜೊತೆ ಚಾಮರಾಜನಗರದಲ್ಲಿ ರಾಹುಲ್ ಸಮಾವೇಶ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿಯ ಅಣಕನೂರು ಗ್ರಾಮದಲ್ಲಿ ಸ್ಯಾಂಡಲ್ವುಡ್ ನಟಿ ಅನು ಪ್ರಭಾಕರ್, ಡಾ. ಕೆ ಸುಧಾಕರ್ ಅವರ ಪರ ಮತಯಾಚನೆ ಮಾಡಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಸ್ಯಾಂಡಲ್ವುಡ್ ನಟ ದಿಗಂತ್, ಡಾ. ಕೆ ಸುಧಾಕರ್ ಅವರ ಪರ ಮತಯಾಚನೆ ಮಾಡಿದರು.
ಸಕ್ಕರೆನಾಡು ಮಂಡ್ಯದಲ್ಲಿ ರಂಗೇರಿದ ರಾಜಕೀಯ ಅಖಾಡ. ಸಕ್ಕರೆನಾಡಿನ ಅಖಾಡಕ್ಕೆ ಸಿಎಂ ಬೊಮ್ಮಾಯಿ ಎಂಟ್ರಿ. ಬಿಜೆಪಿ ಅಭ್ಯರ್ಥಿಗಳ ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ. ಮಂಡ್ಯ ಮತ್ತು ಮದ್ದೂರಿನಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ. ಸಂಜೆ 5 ಗಂಟೆಗೆ ಮಂಡ್ಯ, 6 ಗಂಟೆಗೆ ಮದ್ದೂರಿನಲ್ಲಿ ಪ್ರಚಾರ.
Karnataka assembly Election: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಾಜಿ ಶಾಸಕ ವಾಟಾಳ್ ನಾಗರಾಜ್, ಚಾಮರಾಜನಗರದ ಮಾರಿಗುಡಿ ಬೀದಿಯಲ್ಲಿನ ಹಣ್ಣು ಮಾರಾಟಗಳ ಗಾಡಿಗಳಲ್ಲಿ ಕುಳಿತು ಮಾವು, ಸೇಬು, ಬಾಳೆ ಮಾರಾಟ ಮಾಡಿ ಮತಬೇಟೆ ನಡೆಸಿದರು.
Karnataka Assembly Election: ಏನೂ ತಪ್ಪು ಮಾಡದವರಿಗೆ ಟಿಕೆಟ್ ಏಕೆ ಕೈತಪ್ಪಿಸಿದ್ದಾರೆಂಬ ಪ್ರಶ್ನೆ ಇದೆ. ಜನರ ಸಿಂಪತಿ, ಬೇಸರ ಯಾವತ್ತೂ ಕೂಡಾ ಶೆಟ್ಟರ್ ಅವರನ್ನು ಆರಿಸಿ ತರಬೇಕೆಂಬ ಛಲ ತೊಟ್ಟಿದ್ದಾರೆ. ಹಿಂದಿನ ಚುನಾವಣೆಗಿಂತ ಈ ಬಾರಿ ಹೆಚ್ಚು ಮತ ಪಡೆದು ಆರಿಸಿ ಬರುತ್ತೇನೆ - ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.