ಕರ್ನಾಟಕ ವಿರೋಧಿ ಮತ್ತು ಕನ್ನಡ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ತೊಡಗಿಸಿಕೊಂಡಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕರ್ನಾಟಕದಲ್ಲಿ ಸಂಪೂರ್ಣ ನಿಷೇಧಿಸಬೇಕೆಂದು ಒತ್ತಾಯಿಸಿ ಹಲವಾರು ಕನ್ನಡ ಪರ ಸಂಘಟನೆಗಳು ಮತ್ತು ಸಾರಿಗೆ ಒಕ್ಕೂಟಗಳು ಡಿಸೆಂಬರ್ 31 ರಂದು ಒಂದು ದಿನದ ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಇಂದು ಕರ್ನಾಟಕ ಬಂದ್ ಕರೆಯಲಾಗಿದೆ. ಆದರೂ ಎಂದಿನಂತೆ ಬೆಂಗಳೂರು ಮೆಟ್ರೋ ಕಾರ್ಯ ನಿರ್ವಹಿಸುತ್ತಿದೆ. ಸರ್ಕಾರಿ ಸಾರಿಗೆ ವ್ಯವಸ್ಥೆ ಇರಲಿದೆ ಎಂದು ಸರ್ಕಾರ ಹೇಳಿದೆ. ಆದರೆ ಆಟೋ, ಟ್ಯಾಕ್ಸಿ ಚಾಲಕರ ಸಂಘಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮರಾಠ ಅಭಿವೃದ್ಧಿ ನಿಗಮ (Marathi development authority) ಮಾಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡರಲ್ಲದೆ ಯಾರಾದರೂ ಬಲವಂತದಿಂದ ಬಂದ್ ಮಾಡಲು ಪ್ರಯತ್ನಿಸಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೃಷಿ ವಿಧೇಯಕ ಗಳನ್ನು ಜಾರಿಗೊಳಿಸಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ರಾಜ್ಯವ್ಯಾಪಿ ನೀಡಿರುವ ಬಂದ್ ಕರೆಗೆ ಭಾರಿ ಬೆಂಬಲ ವ್ಯಕ್ತವಾಗಿದೆ.ರೈತರು, ಕಾರ್ಮಿಕರು ಪಕ್ಷಬೇದವೆನ್ನದೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ದಿನಾಂಕ 28-09-2020ರಂದು ನಡೆಯಬೇಕಾಗಿದ್ದ ಡಿಪ್ಲೊಮಾ ಸೆಮಿಸ್ಟರ್ ನ ಎಲ್ಲಾ Theory ಪರೀಕ್ಷೆಗಳನ್ನು ಮುಂದೂಡಲಾಗಿದೆ ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ ತಿಳಿಸಿದೆ.
ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಪ್ರಾರಂಭವಾದ ಕರ್ನಾಟಕ ಬಂದ್ ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿಯೂ ಪರಿಣಾಮ ಬೀರಿದೆ. ಓಲಾ ಮತ್ತು ಉಬರ್ ಚಾಲಕರು ಸಹ ಬಂದ್ಗೆ ಬೆಂಬಲವನ್ನು ನೀಡಿದ್ದಾರೆ.
ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕನ್ನಡಿಗ ಯುವಕರಿಗೆ ಮೀಸಲಾತಿ ನೀಡುವ ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಜನಸಾಮಾನ್ಯರ ಜೀವನ ಇಂದು ಭಾಗಶಃ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ.
ಬುಧವಾರ ಕರೆ ನೀಡಿರುವ ದೇಶವ್ಯಾಪಿ ಕಾರ್ಮಿಕರ ಮುಷ್ಕರದಲ್ಲಿ ಭಾಗವಹಿಸುವುದನ್ನು ತಡೆಯಲು ಸರ್ಕಾರ ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಕೇಳಿದೆ ಮತ್ತು ಉದ್ಯಮಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಯೋಜನೆಯನ್ನು ಸಿದ್ಧಪಡಿಸುವಂತೆ ಅವರಿಗೆ ಸೂಚಿಸಿದೆ.
ಫೆಬ್ರವರಿ 19ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ನಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಮೆರವಣಿಗೆ ಹೊರಟು ಉಗ್ರರ ದಾಳಿಯನ್ನು ಖಂಡಿಸಲಾಗುವುದು ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.