Karnataka Lok Sabha election 2024 : ಬಿಜೆಪಿಯವರು, ವಿದೇಶಗಳಿಂದ ಕಪ್ಪುಹಣ ತಂದು 15 ಲಕ್ಷ ರೂಪಾಯಿ ತಂದುಕೊಟ್ಟರೇ, 2ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡಿದ ರೇ, ಮೆಕ್ ಇನ್ ಇಂಡಿಯಾ , ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಯಿತೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಪಾಕಿಸ್ತಾನ ಜಿಂದಾಬಾದ್ ಮತ್ತು ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಇಂಥ ಅಹಿತಕರ ಘಟನೆಗಳ ವಿರುದ್ಧ ಏನು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಈಗಲೂ ಬಾಯಿ ಬಿಡುತ್ತಿಲ್ಲ. ಇದರಿಂದ ದುಷ್ಕರ್ಮಿಗಳಿಗೆ ಬೆಂಬಲ ಸಿಕ್ಕಂತಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
BJP vs Congress: ”ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ಪ್ರಧಾನಿ ಮೋದಿಯವರೇ, ಚುನಾವಣಾ ಬಾಂಡ್ನಲ್ಲಿ ತಿಂದವರು ಯಾರು, ತಿನ್ನಿಸಿದವರು ಯಾರು? ಚುನಾವಣಾ ಬಾಂಡ್ ವಿಚಾರದಲ್ಲಿ SBI ಕಳ್ಳಾಟ ಆಡುತ್ತಿರುವುದೇಕೆ?ʼ ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನಿಸಿದೆ.
ಆದಾಯ ಹೆಚ್ಚಿರುವ ದೇವಸ್ಥಾನಗಳಿಂದ ಕಡಿಮೆ ಆದಾಯವಿರುವ ಹಿಂದೂ ದೇವಾಲಯಗಳಿಗೆ ಬಳಸುವುದನ್ನು ವಿರೋಧಿಸುತ್ತಾರೆ. ಬೇರೆ ಯಾವ ಧರ್ಮದ ದೇವಾಲಯಗಳಿಗೂ ಇದನ್ನು ಬಳಸುವುದಿಲ್ಲ. ಅವರಿಗೆ ಪರಿಷತ್ತಿನಲ್ಲಿ ಬಹುಮತ ಇದೆ ಎಂದು ಹೀಗೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಈ ಕಾರಣಕ್ಕೇ ನಾವು ಖಜಾನೆ ಖಾಲಿ ಇದೆ ಎಂದು ಹೇಳುತ್ತಿದ್ದೇವೆ. ರಾಜ್ಯದ ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ.
ಬಿಜೆಪಿ, ಜೆಡಿಎಸ್ ನಂತೆ ನಾವು ಮಾತಿಗೆ ತಪ್ಪುವವರಲ್ಲ. ಬಿಜೆಪಿ, ಜೆಡಿಎಸ್ ಈಗ ಒಂದಾಗಿದ್ದಾರೆ. ಆದರೆ ಹಿಂದೊಮ್ಮೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟುತ್ತೇನೆ ಎಂದಿದ್ದರು ಅಂತ ಸಿಎಂ ಸಿದ್ದರಾಮಯ್ಯ ಹೇಳಿದರು.
BJP vs Congress: ಸಿಎಂ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ಕರ್ನಾಟಕ ಬಜೆಟ್ ಬಗ್ಗೆ ಕಿಡಿಕಾರಿದ ಬಿಜೆಪಿ ನಾಯಕರು, ಏನಿಲ್ಲ... ಏನಿಲ್ಲ... ಕಾಂಗ್ರೆಸ್ ಸರ್ಕಾರದ ಬಜೆಟ್ನಲ್ಲಿ ಏನಿಲ್ಲ... ಅಂತಾ ಫ್ಲಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ದರು.
Lok Sabha Election 2024: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ಸರ್ಕಾರ ಬಲಿಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಜೀವನಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಕೆಳಗಿನ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮರ್ಥ್ಯ ತೋರಿಸುತ್ತದಷ್ಟೇ ಎಂದು ಬಿಜೆಪಿ ಟೀಕಿಸಿದೆ.
BJP vs Congress: ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ಜನರ ಅಭಿಪ್ರಾಯವನ್ನು ಧಿಕ್ಕರಿಸುವುದು, ಸಂವಿಧಾನವನ್ನು ಅಪಮಾನಿಸುವುದು ಕಾಂಗ್ರೆಸ್ಸಿಗರ ಸ್ವಭಾವ! ಎಂದು ಬಿಜೆಪಿ ಕಿಡಿಕಾರಿದೆ.
ಶೆಟ್ಟರ್ ಅವರಿಗಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದರು. ಆದ್ರೆ ಅವರು ಯಾಕೆ ಇಂಥ ನಿರ್ಧಾರ ಕೈಗೊಂಡರು ಅಂತ ಗೊತ್ತಿಲ್ಲ. ಇದು ಬಂದ ಪುಟ್ಟ, ಹೋದ್ಯ ಪುಟ್ಟ ಅನ್ನೋ ಹಾಗೆ ಆಯಿತು ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಅಪ್ಪಟ ದೇಶಭಕ್ತ ಪ್ರಧಾನಿ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿಯನ್ನು ಮಾಡಿದ್ದು, ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯನವರು ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಟೀಕಿಸಿದ್ದಾರೆ.
Hangal gang rape case: ಸಿಎಂ ಸಿದ್ದರಾಮಯ್ಯ ಅವರೇ, ಗ್ಯಾಂಗ್ ರೇಪ್ ಸಂತ್ರಸ್ತೆಯ ಕುಟುಂಬದವರನ್ನು ಕಂಡರೆ ನಿಮಗೇಕೆ ಈ ಪರಿ ದ್ವೇಷ. ನಿಮ್ಮ ಸರ್ಕಾರದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಸಿಗುವುದು ಮರೀಚಿಕೆ ಎಂಬುದು ನಿಮ್ಮ ನಿಲುವುಗಳಿಂದಲೇ ಸಾಬೀತಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
Congress Fails Women Safety: ಕರ್ನಾಟಕವನ್ನು ಕಾಂಗ್ರೆಸ್ ತಾಲಿಬಾನ್ ಅನ್ನಾಗಿಸುತ್ತಿದೆಯೇ? ಬೆಳಗಾವಿಯ ಒಬ್ಬ ಮಹಿಳೆಯ ಅಮಾನವೀಯ ಕಿರುಕುಳ ಮತ್ತು ದೌರ್ಜನ್ಯ, ಮತ್ತೊಬ್ಬ ಮಹಿಳೆಯ ಮೂಗಿಗೆ ಕತ್ತರಿ, ಈಗ ಹಾವೇರಿಯಲ್ಲಿ ಮುಸ್ಲಿಂ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ. ಗೃಹಲಕ್ಷ್ಮಿಯರಿಗೆ ಇಂತಹ ಭಾಗ್ಯವೇ? ಎಂದು ಬಿಜೆಪಿ ಟೀಕಿಸಿದೆ.
ಕರ್ನಾಟಕದ ಅಧಿಕಾರ ಕಾಂಗ್ರೆಸ್ ಪಕ್ಷದ 'ಕೈ'ಗೆ ಸಿಗುತ್ತಿದ್ದಂತೆ ರಾಮ ರಾಜ್ಯ ತುಘಲಕ್ ರಾಜ್ಯವಾಗಿ ಬದಲಾಗಿದೆ! ಇದರ ಪರಿಣಾಮ ಅರಾಜಕತೆ ಸೃಷ್ಟಿಯಾಗಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.
ಸಂಸದ ಪ್ರತಾಪ್ ಸಿಂಹ ಅವರೇ, ತಮ್ಮ ಪ್ರತಾಪ ಬ್ಯಾರಿಕೆಡ್ ಹಾರುವುದರಲ್ಲಿ ಅಷ್ಟೇ ಅಲ್ಲ, ವಾಸ್ತವಿಕ ಪ್ರಶ್ನೆಗಳಿಗೆ ವಿಷಯಾಂತರ ಮಾಡದೆ ನೇರವಾಗಿ ಉತ್ತರಿಸುವುದರಲ್ಲೂ ನಿಮ್ಮ ಪ್ರತಾಪ ತೋರಿಸಿ. ನಿಮ್ಮ ಸಹೋದರ ಜಮೀನು ಗುತ್ತಿಗೆ ಪಡೆದಿದ್ದು ನಿಜವಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Karnataka BJP Unit Reshuffle: ಬಿಜೆಪಿಯಲ್ಲಿನ ರಾಜಕಾರಣ ಪ್ರೊ ಕಬ್ಬಡ್ಡಿ ಆಟದಂತೆ. ಸಂತೋಷ ಕೂಟ vs BSY ಕೂಟದ ನಡುವಿನ ಆಟದಲ್ಲಿ ಒಮ್ಮೊಮ್ಮೆ ಸಂತೋಷ ಕೂಟದ ಆಟ ಮೇಲುಗೈ ಸಾಧಿಸಿದರೆ, ಮತ್ತೊಮ್ಮೆ BSY ಕೂಟದ ಮೇಲುಗೈ! ಎಂದು ಕಾಂಗ್ರೆಸ್ ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.