ಸಿಎಂ ಸಿದ್ದರಾಮಯ್ಯನವರ ಯೋಜನೆಗಳೆಲ್ಲಾ ಜಾರಿಯಾಗುವ ಬದಲು ಕೇವಲ ಘೋಷಣೆ ಮಾಡಲಷ್ಟೇ ಸೀಮಿತ. ಸಹಕಾರಿ ಸಾಲಗಳ ಬಡ್ಡಿ ಮನ್ನಾ ಎಂದು ಹೇಳಿಕೆ ನೀಡಿ ಈಗ ರೈತರಿಗೆ ಬ್ಯಾಂಕ್ ಮೂಲಕ ನೋಟಿಸ್ ಕೊಡಲಾಗುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.
BJP vs Congress: ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಪಕ್ಷದಿಂದ ಬೀದರ್ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಸಾರ್ವಜನಿಕ ಸಭೆಯಲ್ಲೇ ಕಿತ್ತಾಟ ನಡೆದಿದೆ.
ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯನವರು ಹೇಳಿದ್ದ ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು ಬೊಗಳೆ ಎಂದು ಸಾಬೀತುಪಡಿಸಿ, ಈಗ “ಅಲ್ಪಸಂಖ್ಯಾತರ ಕಣ್ಣಿಗೆ ಬೆಣ್ಣೆ, ಉಳಿದವರ ಕಣ್ಣಿಗೆ ಸುಣ್ಣ” ಎಂಬ ನೀತಿ ಪಾಲಿಸುತ್ತಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ನಂಬಿಕೆ ದ್ರೋಹವೆಂದು ಬಿಜೆಪಿ ಟೀಕಿಸಿದೆ.
ʼಬಿಜೆಪಿಯಲ್ಲಿನ ಕಚ್ಚಾಟದಿಂದಾಗಿ ಸಾಮ್ರಾಟರು "ಶೋಕ" ರಾಗ ಹಾಡುತ್ತಿದ್ದಾರೆ. ಅಶೋಕರಲ್ಲಿ ಆ ಕಳೆದು "ಶೋಕ" ಮಾತ್ರ ಉಳಿದುಕೊಂಡಿದೆ! ಸದನದಲ್ಲಿ ಏನು ಚರ್ಚಿಸಬೇಕು, ಏನು ಮಾಡಬೇಕು ಎನ್ನುವುದು ವಿರೋಧ ಪಕ್ಷದ ನಾಯಕನ ತೀರ್ಮಾನವೋ, ಶಾಸಕನೊಬ್ಬನ ತೀರ್ಮಾನವೋ? ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಅಶೋಕ್ ಅವರೋ ಅಥವಾ ಬಸನಗೌಡ ಪಾಟೀಲ್ ಯತ್ನಾಳ್ ಅವರೋ ಎಂಬ ಗೊಂದಲ ಸ್ವತಃ ಬಿಜೆಪಿಗರಿಗೆ ಇದ್ದಂತಿದೆ.
ʼಕರ್ನಾಟಕದ ಲೂಟಿಯ ಮಾಡೆಲ್ನ್ನು ಕಾಂಗ್ರೆಸ್ ದೇಶದಾದ್ಯಂತ ವಿಸ್ತರಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗುತ್ತಿಗೆದಾರರ ಮಂಚದ ಅಡಿ ಸಿಕ್ಕಂತೆಯೇ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯರ ಮನೆಯಲ್ಲಿ ₹200 ಕೋಟಿ ಅಕ್ರಮ ಹಣ ಪತ್ತೆಯಾಗಿದೆ! ಭ್ರಷ್ಟಾಚಾರದ ನವ ಇತಿಹಾಸ ಬರೆಯುತ್ತಿರುವ ಕಾಂಗ್ರೆಸ್ ಶಾಸಕರ ಮನೆಯಲ್ಲಿ ಹುಡುಕಿದರೆ ಅದಕ್ಕಿಂತಲೂ ಹೆಚ್ಚು ಹಣ ಸಿಗಬಹುದು ಎಂದು ಬಿಜೆಪಿ ಟೀಕಿಸಿದೆ.
Assembly Election Results 2023: ಪ್ರಧಾನಿ ಮೋದಿಯವರು ಜಾರಿಗೆ ತಂದ ಅನೇಕ ಯೋಜನೆಗಳನ್ನು ಕೀಳುಮಟ್ಟದಲ್ಲಿ ಅಪಹಾಸ್ಯ ಮಾಡಿದ ಕಾಂಗ್ರೆಸ್ನ ನಾಯಕರಿಗೆ ಈಗ ಅದೇ ಬಡವರು ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ್ದಾರೆ ಎಂದು ಬಿಜೆಪಿ ಕುಟುಕಿದೆ.
ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ತಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಪೋಷಣೆಯ ಕ್ರಮವನ್ನು ಸಮರ್ಥಿಸಲು ವ್ಯರ್ಥ ಪ್ರಯತ್ನ ನಡೆಸಿರುವುದು ಅವರ ನೈತಿಕತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಸ್ವಘೋಷಿತ ಸಂವಿಧಾನ ತಜ್ಞ ಸಿಎಂ ಸಿದ್ದರಾಮಯ್ಯನವರು ಅಕ್ರಮ ಆಸ್ತಿ ಗಳಿಕೆ ಆರೋಪಿ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಿಸಲು ಸಂವಿಧಾನವನ್ನೇ ಗಾಳಿಗೆ ತೂರಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿ ವೇತನವನ್ನು ಕಾಂಗ್ರೆಸ್ ಸರ್ಕಾರ ಈಗಾಗಲೇ ಶೇ.90ರಷ್ಟು ಕಡಿತಗೊಳಿಸಿದೆ. ಆದರೆ ಶೈಕ್ಷಣಿಕ ವರ್ಷ ಆರಂಭವಾಗಿ 6 ತಿಂಗಳಾದರೂ ಅದನ್ನೂ ಬಿಡುಗಡೆ ಮಾಡದೆ #ATMSarkara ವಿದ್ಯಾರ್ಥಿಗಳಿಗೆ ದ್ರೋಹ ಬಗೆಯುತ್ತಿದೆ ಎಂಬು ಬಿಜೆಪಿ ಕಿಡಿಕಾರಿದೆ.
Congress Nigama Mandali: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿಗಮ-ಮಂಡಳಿಗಳ ಅಧ್ಯಕ್ಷರ ಸ್ಥಾನಗಳ ನೇಮಕಾತಿ ನೆನೆಗುದಿಗೆ ಬಿದ್ದಿದೆ. ನಿಗಮ-ಮಂಡಳಿಗಳ ಹಂಚಿಕೆ ವಿಚಾರದಲ್ಲಿಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ.
PSI recruitment scam: ಅಕ್ರಮದಲ್ಲಿ ಭಾಗಿಯಾಗುವುದು, ಆರೋಪಿಗಳನ್ನು ರಕ್ಷಿಸುವುದು ಬಿಜೆಪಿಯ ಜಾಯಮಾನ ಇರಬಹುದು, ಆದರೆ ಕಾಂಗ್ರೆಸ್ ಯಾವುದೇ ಅಕ್ರಮವನ್ನು ಸಹಿಸುವುದಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.
ಕಲೆಕ್ಷನ್ ಮಾಸ್ಟರ್ಸ್ಗಳ #ATMSarkaraಕ್ಕೆ ರಾಜ್ಯದ ಹತ್ತು ಹಲವು ಸಮಸ್ಯೆಗಳಿಗಿಂತ ತೆಲಂಗಾಣದಲ್ಲಿ ಚುನಾವಣೆ ಪ್ರಚಾರ ಮಾಡಿ, ಹಣ ಕೊಟ್ಟು, ಪಾರ್ಟಿ ಮಾಡಿಕೊಂಡು ಬರುವುದೇ ಮುಖ್ಯವಾಗಿದೆ ಎಂದು ಬಿಜೆಪಿ ಟೀಕಿಸಿದೆ.
ಪೌರ ಕಾರ್ಮಿಕರಿಗೆ ಖಾಯಂಮಾತಿ ಬಗ್ಗೆ ಕಾಂಗ್ರೆಸ್ ಪೌರ ಕಾರ್ಮಿಕರಿಗೆ ನೀಡಿದ್ದ ಭರವಸೆಯನ್ನು ಇದುವರೆಗೂ ಈಡೇರಿಸಿಲ್ಲ. ಅಂಗನವಾಡಿ ಸಹಾಯಕರಿಗೆ, ಆಶಾ ಕಾರ್ಯಕರ್ತರಿಗೆ, ಬಿಸಿಯೂಟ ತಯಾರಿಕರಿಗೆ ನೀಡಿದ್ದ ವೇತನ ಹೆಚ್ಚಳದ ಭರವಸೆ ಇನ್ನೂ ಸಹ ಭರವಸೆಯಾಗಿಯೇ ಉಳಿದಿದೆ ಎಂದು ಬಿಜೆಪಿ ಟೀಕಿಸಿದೆ.
‘ರಾಜ್ಯವನ್ನು ಕಾಡುತ್ತಿರುವ ಬರ, ಕುಡಿಯುವ ನೀರಿನಂಥ ಜ್ವಲಂತ ಸಮಸ್ಯೆಗಳ ನಿರ್ವಹಣೆಗಿಂತಲೂ ಮುಂದಿನ ಎರಡು ವರ್ಷ ಕಾಲದವರೆಗಾದರೂ ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯರವರಿಗೆ ದೊಡ್ಡ ತಲೆ ನೋವಾಗಿದೆ’ ಎಂದು ಬಿಜೆಪಿ ಕುಟುಕಿದೆ.
Congress Loots Karnataka: ಪರೀಕ್ಷೆಯಲ್ಲಿ ಅಕ್ರಮ ನಡೆದರೂ ಸಚಿವ ಪ್ರಿಯಾಂಕ್ ಖರ್ಗೆ ಸಾಹೇಬರು ತನ್ನ ಅಪ್ತರನ್ನು ರಕ್ಷಣೆ ಮಾಡುವುದಕ್ಕಾಗಿಯೇ ಸಿಬಿಐ ತನಿಖೆಗೆ ಕೊಡುವುದಿಲ್ಲವೆಂದು ಕಡ್ಡಿ ತುಂಡು ಮಾಡಿ ಹೇಳಿದ್ದಾರೆ. ಅಲ್ಲಿಗೆ ಅಕ್ರಮ ಸಾಬೀತಾಯಿತು..! ಎಂದು ಬಿಜೆಪಿ ಟೀಕಿಸಿದೆ.
BJP vs BJP: ಜೆಡಿಎಸ್ ಬಿಜೆಪಿಯ ಆಶ್ರಯದಲ್ಲಿದೆಯೋ, ಬಿಜೆಪಿ ಜೆಡಿಎಸ್ ಸೇರಿಗಿನ ಆಶ್ರಯ ಪಡೆದಿದೆಯೋ ಎಂಬ ಅನುಮಾನ ಬಿಜೆಪಿಗರಿಗೇ ಶುರುವಾಗಿದೆ! ವಿರೋಧ ಪಕ್ಷದ ನಾಯಕನಿಲ್ಲದೆ ಸದನದ ಒಳಗೂ ಹೊರಗೂ ಬಿಜೆಪಿ ಅಬ್ಬೇಪಾರಿಯಂತಾಗಿದೆ, ಈ ಬಗ್ಗೆ ಬಿಜೆಪಿ ಶಾಸಕರ ಗೋಳು ಮುಗಿಲು ಮುಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.